Homeಮುಖಪುಟಪಂಜಾಬ್‌: ಎರಡು ಕ್ಷೇತ್ರಗಳಲ್ಲೂ ಪಂಜಾಬ್‌ ಸಿಎಂಗೆ ಸೋಲು; ಸಿಧು, ಅಮರಿಂದರ್‌ಗೂ ಸೋಲು

ಪಂಜಾಬ್‌: ಎರಡು ಕ್ಷೇತ್ರಗಳಲ್ಲೂ ಪಂಜಾಬ್‌ ಸಿಎಂಗೆ ಸೋಲು; ಸಿಧು, ಅಮರಿಂದರ್‌ಗೂ ಸೋಲು

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಚಮಕೌರ್ ಸಾಹಿಬ್ ಮತ್ತು ಭದೌರ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಸೋತಿದ್ದಾರೆ.

ಭದೌರ್‌ನಲ್ಲಿ ಆಮ್ ಆದ್ಮಿ ಪಕ್ಷದ ಲಾಭ್ ಸಿಂಗ್ ಉಗೋಕೆ 57,000 ಮತಗಳನ್ನು ಪಡೆದರೆ, ಚನ್ನಿ 23,000 ಮತಗಳನ್ನು ಪಡೆದರು. ಚಮಕೌರ್‌ ಸಾಹಿಬ್‌ನಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಗಳಿಸಿದರು. ಆದರೆ ಅವರ ಹತ್ತಿರದ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ, ಸಿಎಂ ರೀತಿಯ ಹೆಸರನ್ನೇ ಹೊಂದಿದ್ದ ಚರಂಜಿತ್ ಸಿಂಗ್ 54,000ಗಳಿಗಿಂತ ಹೆಚ್ಚು ಮತಗಳನ್ನು ಗಳಿಸಿದರು.

ಆಮ್ ಆದ್ಮಿ ಪಕ್ಷ ಅಥವಾ ಎಎಪಿ ಪಂಜಾಬ್‌ನಲ್ಲಿ ಉತ್ತಮ ಮುನ್ನಡೆ ಸಾಧಿಸುವ ಮೂಲಕ ಸರ್ಕಾರ ರಚಿಸಲು ಸಿದ್ಧವಾಗಿದೆ. 117 ಸದಸ್ಯ ಬಲದ ಸದನದಲ್ಲಿ ಎಎಪಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 18 ಸ್ಥಾನಗಳಲ್ಲಿ ಹಿಂದುಳಿದಿದೆ. ಬಿಜೆಪಿ 2 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿದಳ 6 ಸ್ಥಾನಗಳನ್ನು ಗೆದ್ದಿದೆ ಎಂದು ಆರಂಭಿಕ ಫಲಿತಾಂಶಗಳು ಹೇಳಿವೆ.

ನವಜೋತ್‌ ಸಿಂಗ್ ಸಿಧು ಸೋಲು

ಈ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವದಲ್ಲಿ ಸೋಲನುಭವಿಸಿದ್ದು, ಶಿರೋಮಣಿ ಅಕಾಲಿ ದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರು ಗೆಲುವು ಸಾಧಿಸಿದ್ದಾರೆ.

ಅಮರಿಂದರ್‌ಸಿಂಗ್‌ ಸೋಲು

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಪಟಿಯಾಲ ನಗರ ಕ್ಷೇತ್ರದಲ್ಲಿ ಸೋಲನ್ನಪ್ಪಿದ್ದಾರೆ.

ಪಂಜಾಬ್‌ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಕ್ಲೀನ್ ಸ್ವೀಪ್ ದೊರೆಯುವ ಸೂಚನೆಗಳು ದೊರೆತಿವೆ. ಮಧ್ಯಾಹ್ನ 1 ಗಂಟೆ ವೇಳೆಗೆ 117 ಸ್ಥಾನಗಳಲ್ಲಿ 91ರಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿಸಿದೆ.

ಪಟಿಯಾಲಾ ಕ್ಷೇತ್ರದಲ್ಲಿ ಅಮರಿಂದರ್ ಸಿಂಗ್ ಅವರನ್ನು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಅವರು 13,000 ಮತಗಳ ಅಂತರದಿಂದ ಸೋಲಿಸಿದರು.

ಮಧ್ಯಾಹ್ನ 12.30 ರ ಹೊತ್ತಿಗೆ, ಅಜಿತ್ ಪಾಲ್ ಸಿಂಗ್ 36,645 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ 22,868 ಮತಗಳನ್ನು ಹೊಂದಿದ್ದರು.

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಮರಿಂದರ್‌‌, ಹಿಂದಿನ ಚುನಾವಣೆಯಲ್ಲಿ 2017ರಲ್ಲಿ ಭಾರಿ ಅಂತರದಿಂದ ಗೆದ್ದಿದ್ದರು ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಅವರು ನಾಲ್ಕು ಬಾರಿ ( 2002, 2007, 2012 ಮತ್ತು 2017) ಪಟಿಯಾಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ನವೆಂಬರ್‌ನಲ್ಲಿ ಅಮರಿಂದರ್ ಸಿಂಗ್ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು. ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರು.


ಇದನ್ನೂ ಓದಿರಿ: ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ..? ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...