Homeಮುಖಪುಟಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

- Advertisement -
- Advertisement -

ಇತ್ತೀಚೆಗೆ ಪಕ್ಷಾಂತರದ ಜೊತೆಗೆ ಸಿದ್ಧಾಂತರವೂ ಆಗಿರುವ ಸಚಿವ ಸುಧಾಕರ್ ಅವರು ’ಬೌದ್ಧ ಧರ್ಮದ ಅಪಾಯದಿಂದ ಭಾರತವನ್ನು ಬ್ರಾಹ್ಮಣರು ರಕ್ಷಿಸಿದರು’ ಎಂಬ ಸಾವರ್ಕರ್ ಚಿಂತನೆಯನ್ನು ದಲಿತ ಸಂಘರ್ಷ ಸಮಿತಿಯ ಭದ್ರಕೋಟೆಯಲ್ಲೊಂದಾಗಿದ್ದ ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ಮಾಡಿದ್ದಾರೆ. ಅವರ ಬೇಜವಾಬ್ದಾರಿ ಮಾತಿನ ವಿರುದ್ಧ ಪ್ರತಿಭಟನೆಗಳು ಬಂದೊಡನೆಯೇ ಯಥಾಪ್ರಕಾರ ’ತಿರುಚಿದ’ ಕಂಠಪಾಠವನ್ನು ಒಪ್ಪಿಸಿ ಮತ್ತೊಂದು ಸುಳ್ಳನ್ನು ಹೇಳಿ ಮತ್ತೆ ದಲಿತ ಸಂಘರ್ಷ ಸಮಿತಿ, ಬೌದ್ಧರು, ಪ್ರಗತಿಪರರು ಹಾಗೂ ಅಂಬೇಡ್ಕರ್‌ವಾದಿಗಳ ಕೆಂಗಣ್ಣಿಗೆ ತುತ್ತಾಗಿದ್ದಾರೆ. ’ಬುದ್ಧ ವಿಷ್ಣುವಿನ ಅವತಾರ’ ಎಂಬ ಬ್ರಾಹ್ಮಣವಾದಿಗಳ ಸುಳ್ಳನ್ನು ಹೇಳಿ ಪೇಚಿಗೆ ಸಿಲುಕಿಕೊಂಡಿದ್ದಾರೆ.

2002ರ ಗುಜರಾತಿನ ಗೋದ್ರಾ ಹತ್ಯಾಕಾಂಡದ ಬಳಿಕ ಬಿಜೆಪಿಯ ಎಲ್ಲರಿಗೂ ನರೇಂದ್ರ ಮೋದಿಯವರು ಮಾದರಿ ನಾಯಕರಾಗಿದ್ದರು. ಮುಂದೆ ಅವರು ಪ್ರಧಾನಿಯಾದದ್ದು ಇನ್ನಷ್ಟು ಇಂಬು ನೀಡಿತು. ಅದಾದ ಬಳಿಕ ಈಗ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಮಾದರಿ ಪುರುಷರಾಗಿದ್ದಾರೆ. ಬಿಜೆಪಿಯಲ್ಲಿರುವ ಪ್ರತಿಯೊಬ್ಬ ನಾಯಕರಿಗೂ ’ಕ್ರೌರ್ಯವೇ’ ಮಾನದಂಡವಾಗಿದೆ. ಯಾರು ಮುಸ್ಲಿಮರ, ಕ್ರೈಸ್ತರ ಹಾಗೂ ದಲಿತರ ವಿರುದ್ಧ ಹೆಚ್ಚು ಕ್ರೂರವಾಗಿ ನಡೆದುಕೊಳ್ಳುತ್ತಾರೋ ಅಷ್ಟು ನಾಗಪುರದ ಆರೆಸ್ಸೆಸ್ ಕಚೇರಿಗೆ ಹತ್ತಿರವಾಗುತ್ತಾರೆ. ಯಾರು ಎಷ್ಟು ಹೆಚ್ಚು ’ದ್ವೇಷ ಭಾಷಣ’ ಮಾಡುತ್ತಾರೋ ಅಷ್ಟು ಆರೆಸ್ಸೆಸ್ ಸರಸಂಚಾಲಕರ ಕಣ್ಣಿಗೆ ಗೋಚರವಾಗುತ್ತಾರೆ. ಈ ಸ್ಪರ್ಧೆಯಲ್ಲಿ ನಾಮುಂದು ತಾಮುಂದು ಎಂದು ಬಿಜೆಪಿಯ ರಾಜಕಾರಣಿಗಳಲ್ಲಿ ಪೈಪೋಟಿ ಏರ್ಪಟ್ಟಿರುವ ಕಾರಣ ಸಚಿವ ಸುಧಾಕರ್ ಬಾಯಲ್ಲಿ ಇಂತಹ ಮಾತುಗಳು ಮೂಡಿಬಂದಿವೆ. ಅವರ ಮಾತುಗಳು ಯಾರನ್ನು ಮೆಚ್ಚಿಸಲು ಹೊರಟಿವೆ ಎಂದು ಮೂಲವನ್ನು ಹುಡುಕುತ್ತಾ ಹೋದರೆ ಅದು ನಾಗಪುರದ ಆರೆಸ್ಸೆಸ್ ಕಚೇರಿ ಬಾಗಿಲ ಮೆಟ್ಟಿಲ ಬಳಿ ಹೋಗಿ ನಿಲ್ಲುತ್ತದೆ.

ಮೊದಲಿಗೆ ಬೌದ್ಧ ಧರ್ಮ ಒಡ್ಡಿದ್ದ ಅಪಾಯದಿಂದ ಭಾರತವನ್ನು ಬ್ರಾಹ್ಮಣರು
ಕಾಪಾಡಿದರು ಎಂಬ ಸುಳ್ಳಿನ ವಿಚಾರಕ್ಕೆ ಬರೋಣ. ಆರ್ಯರ ಆಗಮನದಿಂದಾಗಿ ಭಾರತ ಚಾತುರ್ವರ್ಣ ಪದ್ಧತಿಯೆಡೆಗೆ ನಂತರ ಪುರುಷಪ್ರಧಾನ, ಜಾತಿಪದ್ಧತಿ ಮತ್ತು ಅಸ್ಪೃಶ್ಯತೆ ಕಡೆಗೆ ನಡೆಯಿತು. ಬಹುಶಃ ಆರ್ಯರು ಬರದಿದ್ದರೆ ಇಂದಿನ ಭಾರತ ಹೀಗೆ ಜಾತಿಪದ್ಧತಿಗಳಿಂದ ಛಿದ್ರಗೊಂಡಿರುತ್ತಿರಲಿಲ್ಲ. ಡಾ. ಬಿ. ಆರ್. ಅಂಬೇಡ್ಕರ್ ಅವರು ಆರ್ಯರು ರಚಿಸಿದ ವೇದಗಳನ್ನು ಅಧ್ಯಯನ ಮಾಡಿ (ಪ್ರಾಚೀನ ಭಾರತದಲ್ಲಿ ಕ್ರಾಂತಿ ಮತ್ತು ಪ್ರತಿಕ್ರಾಂತಿ) ಆರ್ಯ ಸಮಾಜದಲ್ಲಿದ್ದ ಅನೀತಿಗಳನ್ನು ಬಯಲಿಗೊಳಿಸುತ್ತಾರೆ. ಅವುಗಳಲ್ಲಿ ಪ್ರಮುಖವಾದವುಗಳು 1. ಆರ್ಯರ ರಾಜರುಗಳು ಜೂಜುಕೋರರಾಗಿದ್ದರು. ಅವರಲ್ಲಿ ಜೂಜಿನ ಹುಚ್ಚು ಅದೆಷ್ಟಿತ್ತೆಂದರೆ ತಮ್ಮ ಇಡೀ ರಾಜ್ಯವನ್ನೇ ಪಣಕ್ಕಿಡುತ್ತಿದ್ದರು. ಅಷ್ಟೇ ಅಲ್ಲ ಸ್ವತಃ ಹೆಂಡತಿಯನ್ನೇ ಜೂಜಿಗಿಡುವರಾಗಿದ್ದರು; 2. ಆರ್ಯರು ಮದವ್ಯಸನಿಗಳಾಗಿದ್ದರು. ಗಂಡಸರ ಜೊತೆಗೆ ಹೆಂಗಸರೂ ಕುಡಿಯುತ್ತಿದ್ದರು. ಸೋಮ ಮತ್ತು ಸುರಾ ಮದವನ್ನು ಕುಡಿಯಲೆಂದೇ ಕೆಲವು ಯಜ್ಞಗಳನ್ನು ಮಾಡುತ್ತಿದ್ದರು; 3. ಆರ್ಯರಲ್ಲಿ ಅಣ್ಣ-ತಂಗಿ, ತಂದೆ-ಮಗಳು, ಅಜ್ಜ-ಮೊಮ್ಮಕ್ಕಳ ಮದುವೆಗೆ ಸಮ್ಮತಿ ಇತ್ತು; 4. ಆರ್ಯರಲ್ಲಿ ಬಹುಪತಿತ್ವ ಆಚರಣೆಯಿತ್ತು. ಅಪ್ಪ ಮತ್ತು ಮಗ ಇಬ್ಬರೂ ತಮ್ಮ ಮಕ್ಕಳು ಮೊಮ್ಮಕ್ಕಳನ್ನೇ ಮದುವೆಯಾಗುತ್ತಿದ್ದರು; 5. ಆರ್ಯರಲ್ಲಿ ಬಯಲು ಸಂಭೋಗವಿತ್ತು. ಹಲವು ಯಜ್ಞಗಳು ನಡೆಯುವಾಗ ಯಜ್ಞ ನಡೆಸುವ ರಾಜನ ರಾಣಿಯರೊಂದಿಗೆ ಋಷಿಗಳೇ ಬಯಲಲ್ಲಿ ಸಂಭೋಗಿಸುತ್ತಿದ್ದರು; 6. ಆರ್ಯರು ತಮ್ಮ ಹೆಣ್ಣು ಮಕ್ಕಳನ್ನು ಸಂತಾನಕ್ಕಾಗಿ ಬಾಡಿಗೆಗೆ ಕೊಡುತ್ತಿದ್ದರು. ಮಕ್ಕಳನ್ನು ಹಡೆದ ನಂತರ ತಂದೆಯ ಬಳಿಗೆ ಮರಳುತ್ತಿದ್ದರು; 7. ಆರ್ಯರಲ್ಲಿನ ದೇವಗಣಕ್ಕೆ ತಮ್ಮ ಹೆಣ್ಣುಮಕ್ಕಳನ್ನು ಉತ್ತಮ ಸಂತಾನಕ್ಕಾಗಿ ಕೊಡುವ ಪದ್ಧತಿ ಇತ್ತು; 8. ಆರ್ಯರಲ್ಲಿ ಪ್ರಾಣಿಗಳನ್ನು ಸಂಭೋಗಿಸುವ ಪದ್ಧತಿ ಇತ್ತು. ಯಜ್ಞಗಳಲ್ಲಿ ಕುದುರೆ, ಜಿಂಕೆಗಳನ್ನು ಸಂಭೋಗಿಸುತ್ತಿದ್ದರು; 9. ಆರ್ಯರು ಯಜ್ಞಗಳಲ್ಲಿ ನರಬಲಿ ನೀಡುತ್ತಿದ್ದರು; 10. ಆರ್ಯರು ಚಾತುರ್ವರ್ಣ ಪದ್ಧತಿಯನ್ನು ಆಚರಿಸುತ್ತಿದ್ದರು; ಇವಿಷ್ಟು ಆರ್ಯರಲ್ಲಿದ್ದ ಅಸಹ್ಯಕರ ಪದ್ಧತಿಗಳಲ್ಲಿ ಕೆಲವು.

ಈ ಪದ್ಧತಿಗಳಲ್ಲಿ ಆರ್ಯರಲ್ಲಿನ ಬ್ರಾಹ್ಮಣರು ಮತ್ತು ಕ್ಷತ್ರಿಯರು ಮುಖ್ಯವಾಗಿ ಭಾಗವಹಿಸುತ್ತಿದ್ದರು. ಇಂತಹ ನೀಚ ಪದ್ಧತಿಗಳನ್ನು ಬುದ್ಧ ಗುರು ಖಂಡಿಸಿ ವಿರೋಧಿಸಿದ್ದರು. ಇದಕ್ಕೆ ಪರ್ಯಾಯವಾದಂತಹ ಸಿದ್ಧಾಂತವನ್ನು ರೂಪಿಸಿ ಸಂಘ ಕಟ್ಟಿದರು. ಜ್ಞಾನ, ಕರುಣೆ, ಶೀಲ ಮತ್ತು ಮೈತ್ರಿಯೇ ಧರ್ಮದ ಮುಖ್ಯ ವಿಷಯಗಳು. ಮನುಷ್ಯರು ಮತ್ತು ಮನುಷ್ಯರ ನಡುವಿನ ಉತ್ತಮ ಸ್ನೇಹವೇ ಧರ್ಮ. ಧರ್ಮದ ಕೇಂದ್ರ ಬಿಂದು ನೈತಿಕತೆಯೇ ಹೊರತು ದೇವರಲ್ಲ ಎಂದು ಭೋಧಿಸಿದರು. ಮನುಷ್ಯರಲ್ಲಿ ಭೇದವಿಲ್ಲ ಎಲ್ಲರೂ ಸಮಾನರು ಎಂದು ಸಾರಿದರು. ಈಗ ಹೇಳಿ ಆರ್ಯರ ವೈದಿಕ-ಬ್ರಾಹ್ಮಣ ಧರ್ಮ ಭಾರತಕ್ಕೆ ಅಪಾಯವಾಗಿತ್ತೋ? ಬುದ್ಧ ಗುರುವಿನ ಬೌದ್ಧ ಧಮ್ಮ ಭಾರತಕ್ಕೆ ಅಪಾಯವಾಗಿತ್ತೋ?

ಈಗ ಎರಡನೆಯ ವಿಚಾರಕ್ಕೆ ಬರೋಣ. ಅದು ಬುದ್ಧ ಗುರು ವಿಷ್ಣುವಿನ ಅವತಾರ ಎಂಬ ಸುಳ್ಳು. ಈ ವಾದವನ್ನು ಬಹಳ ಸುಲಭವಾಗಿ ಹೊಡೆದುರುಳಿಸಬಹುದು. ಬುದ್ಧ ಗುರು ಜನಿಸಿದ್ದು ಕ್ರಿ.ಪೂ 6ನೇ ಶತಮಾನದಲ್ಲಿ; ವಿಷ್ಣುವಿನ ಅವತಾರಗಳು ಪ್ರಸ್ತಾಪವಾಗುವುದು ಕ್ರಿ.ಶ 4ನೇ ಶತಮಾನದ ನಂತರ ರಚಿತವಾದ ಪುರಾಣಗಳಲ್ಲಿ. ಡಾನಿಗರ್ ಅವರ ಪ್ರಕಾರ ಕ್ರಿ.ಶ 4-5ರಲ್ಲಿ ರಚನೆಯಾದ ವಿಷ್ಣು ಪುರಾಣದಲ್ಲಿ ಮೊದಲು ಬುದ್ಧಗುರುವನ್ನು ವಿಷ್ಣುವಿನವತಾರಕ್ಕೆ ಸೇರಿಸಿಕೊಳ್ಳಲಾಯಿತು. ಕ್ರಿ.ಶ 8ನೇ ಶತಮಾನದಲ್ಲಿ ಪ್ರಚಾರಗೊಂಡ ಭಾಗವತ ಪಂಥದಲ್ಲಿ ವಿಷ್ಣುವಿನ ಅವತಾರ ಕಲ್ಪನೆಗೆ ಹೆಚ್ಚು ಒತ್ತು ಕೊಡಲಾಗಿದೆ. ಇದಕ್ಕೂ ಮುಂಚಿನ ಬೌದ್ಧ ಸಾಹಿತ್ಯವಾಗಲೀ, ಜೈನ ಸಾಹಿತ್ಯವಾಗಲೀ ಅಷ್ಟೇ ಏಕೆ ಬ್ರಾಹ್ಮಣ ಸಾಹಿತ್ಯದಲ್ಲೆಲ್ಲಿಯೂ ವಿಷ್ಣುವಿನ ಅವತಾರದ ಮಾತೇ ಬರುವುದಿಲ್ಲ.

ಹಿಂದೂ ಧರ್ಮ ಹಾಗೂ ಬೌದ್ಧ ಧಮ್ಮಗಳ ತಾತ್ವಿಕತೆಯಲ್ಲಿರುವ ಭಿನ್ನತೆಗಳೂ ಸಹ ಬುದ್ಧ ಗುರು ವಿಷ್ಣುವಿನ ಅವತಾರವಲ್ಲ ಎಂದೇ ಸಾಬೀತು ಪಡಿಸುತ್ತವೆ.

ಈ ಮೇಲಿನ ಅಂಶಗಳಿಂದ ಹಿಂದೂ ಧರ್ಮಕ್ಕೂ ಬೌದ್ಧ ಧರ್ಮಕ್ಕೂ ಸಾಮ್ಯತೆಗಳಿರಲಿ ಎರಡೂ ತದ್ವಿರುದ್ಧವಾದದ್ದೆಂದು ತಿಳಿಯುತ್ತದೆ. ಹೀಗಿರುವಾಗ ಬುದ್ಧ ಗುರು ಹಿಂದೂ ದೇವರಾಗಲು ಹೇಗೆ ಸಾಧ್ಯ?

ಮತ್ತೊಂದು ಆಶ್ಚರ್ಯಕರ ವಿಚಾರವೆಂದರೆ ಸ್ವತಃ ಪುರಾಣಗಳಲ್ಲಿಯೇ ವಿಷ್ಣುವಿನ ಅವತಾರಗಳ ಸಂಖ್ಯೆಗಳಲ್ಲಿ ಒಮ್ಮತವಿಲ್ಲ. ಇದರ ಬಗ್ಗೆ ಬಹಳ ಹಿಂದೆಯೇ ಡಾ. ಬಿ. ಆರ್. ಅಂಬೇಡ್ಕರ್‌ರವರು ಪುರಾಣಗಳನ್ನು ಸಂಶೋಧಿಸಿ ವಿಷ್ಣುವಿನ ಮೇಲೆ ಆರೋಪಿಸಿದ್ದು ಕೇವಲ ಹತ್ತು ಅವತಾರಗಳಲ್ಲ ಅದಕ್ಕಿಂತಲೂ ಹೆಚ್ಚು ಎಂದು ನಿರೂಪಿಸಿದ್ದಾರೆ. ಅಂಬೇಡ್ಕರರು ತಮ್ಮ ’ಹಿಂದೂ ಧರ್ಮದ ಒಗಟುಗಳು’ ಕೃತಿಯಲ್ಲಿ ’ತ್ರಿಮೂರ್ತಿಗಳ ಒಗಟು’ ಎಂದು ಚರ್ಚಿಸುತ್ತಾ ವಿಷ್ಣುವಿನ ಅವತಾರಗಳು ಹತ್ತಲ್ಲ ಅವು ಅಸಂಖ್ಯವೆಂದು ತೋರಿಸಿಕೊಟ್ಟಿದ್ದಾರೆ. ಅವರು ಊಳಿಗಮಾನ್ಯ ಕಾಲದಲ್ಲಿ ರಚಿತವಾದ ಪುರಾಣಗಳಿಂದಲೇ ಸಾಕ್ಷಿಗಳನ್ನು ನೀಡುತ್ತಾರೆ. (ಸಂಪುಟ 3, 646). ಹರಿವಂಶದ ಪ್ರಕಾರ ವಿಷ್ಣುವಿನ ಅವತಾರಗಳು 6, ನಾರಾಯಣೀ ಆಖ್ಯಾನ 10, ವರಾಹ ಪುರಾಣ 10, ವಾಯುಪುರಾಣ 12 ಹಾಗೂ ಭಾಗವತ ಪುರಾಣದಲ್ಲಿ 21 ವಿಷ್ಣುವಿನ ಅವತಾರಗಳನ್ನು ನಮೂದಿಸಿರುವುದನ್ನು ಬಯಲು ಮಾಡುತ್ತಾರೆ. ಜೊತೆಗೆ ಅವತಾರಗಳು ಶಿವನದ್ದೂ ಇವೆ. ಶಕ್ತಿ ದೇವತೆಗಳದ್ದೂ ಇವೆ.

ಹಾಗಾಗಿ ಸ್ವತಃ ಪುರಾಣಗಳಲ್ಲಿಯೇ ವಿಷ್ಣುವಿನ ಅವತಾರದ ಬಗ್ಗೆ ಒಮ್ಮತವಿಲ್ಲ ಹಾಗೂ ಅವತಾರ ಕಲ್ಪನೆ ಹೊತ್ತ ಏಕೈಕ ದೇವತೆ ವಿಷ್ಣು ಅಲ್ಲ. ಆದಕಾರಣ ಬುದ್ಧ ಗುರುವನ್ನು ವಿಷ್ಣುವಿನ ದಶಾವತಾರಗಳಲ್ಲಿ ಒಂದಾಗಿಸಿಕೊಂಡಿರುವುದು ಬೌದ್ಧರನ್ನೂ ಹಾಗೂ ಬೌದ್ಧ ವಿಹಾರಗಳನ್ನು ಹಿಂದೂ ಧರ್ಮದ ಭಾಗವಾಗಿಸಿಕೊಳ್ಳಲು ಹೊರಟಿರುವ ಹುನ್ನಾರವಷ್ಟೆ. ಈ ಭಾಗವಾಗಿಯೇ ದೇಶದ ಹಲವು ಬುದ್ಧ ವಿಹಾರಗಳು ಇಂದು ವಿಷ್ಣು ದೇಗುಲಗಳಾಗಿವೆ. ಶಿವದೇಗುಲಗಳಾಗಿವೆ.

ಈ ವಿದ್ಯಮಾನ ಕೇವಲ ಬೌದ್ಧರಿಗೆ ಸೀಮಿತವಾದದ್ದಲ್ಲ. ’ಅವತಾರಗಳು’ ಎಂಬ ಕಲ್ಪನೆಯಿಂದ ಬ್ರಾಹ್ಮಣ ಧರ್ಮವು ಭಾರತದ ಹಲವು ಬುಡಕಟ್ಟು, ಅಲೆಮಾರಿ, ದಕ್ಷಿಣ-ಪಶ್ಚಿಮ-ಪೂರ್ವ ಭಾರತದ ಜನ ಸಮುದಾಯಗಳ ದೈವಗಳನ್ನು ತನ್ನದಾಗಿಸಿಕೊಂಡು ಹಿಂದೂ ಧರ್ಮವಾಗಿದೆ. ಬ್ರಾಹ್ಮಣ ಧರ್ಮವು ಬೌದ್ಧ ಧರ್ಮದ ಕ್ರಾಂತಿಯ ಪರಿಣಾಮವಾಗಿ ನಿರ್ನಾಮವಾಗುತ್ತಿದ್ದ ಸಂದರ್ಭದಲ್ಲಿ ಕೃಷಿಯ ವಿಸ್ತರಣೆಯ ಭಾಗವಾಗಿ ಆರ್ಯವರ್ತದಿಂದ ಭಾರತದ ಬೇರೆಬೇರೆ ಭಾಗಗಳಿಗೆ ಹೊರಡಿ ತನ್ನ ಯಜ್ಞ-ಯಾಗಾದಿ ಆಚರಣೆಗಳೆಲ್ಲವನ್ನೂ ತೊರೆದು, ಈ ಮೇಲೆ ತಿಳಿಸಿದ ಬುಡಕಟ್ಟು ಸಮುದಾಯಗಳೊಂದಿಗೆ ಸಂಘರ್ಷ-ಸಮ್ಮಿಲನ ಹೊಂದಿ ಅವರ ಪೂಜಾ ವಿಧಾನಗಳನ್ನು ನವೀಕರಿಸಿಕೊಂಡು ಇಂದು ಹಿಂದೂ ಧರ್ಮವಾಗಿದೆ. ಈ ವಿದ್ಯಮಾನದ ಭಾಗವಾಗಿ ಪ್ರತಿಯೊಂದು ಅವತಾರಕ್ಕೂ ಕಲ್ಪಿತ ಕತೆಗಳನ್ನು ಹೆಣೆಯಲಾಗಿದೆ. ಅವೇ ಪುರಾಣಗಳು. ಇಂದ್ರ, ವರುಣ, ಅಗ್ನಿ, ಪೂಷನ್‌ಗಳಂತಹ ಇರಾನ್ ಮೂಲದ ದೇವತೆಗಳನ್ನು ಪೂಜಿಸುತ್ತಿದ್ದ ವೈದಿಕ ಬ್ರಾಹ್ಮಣ ಧರ್ಮವು ದ್ರಾವಿಡ ಬುಡಕಟ್ಟುಗಳೊಂದಿಗೆ ಕೃಷಿ ವಿಸ್ತರಣೆಗಾಗಿ ಸಮ್ಮಿಲನ-ಸಂಘರ್ಷ ಹೊಂದುತ್ತಾ ತನ್ನ ಇಡೀ ಮುಖವನ್ನೇ ಬದಲಾಯಿಸಿಕೊಂಡಿದೆ.

ಒಟ್ಟಾರೆ ’ಅವತಾರ’ ಎಂಬುವುದು ಭಾರತದ ಚರಿತ್ರೆಯ ದಿಕ್ಕನ್ನೇ ಬದಲಾಯಿಸಿದ ಹಾಗೂ ಬದಲಾಯಿಸುತ್ತಿರುವ ಕಲ್ಪನೆ. ಸಾಂಸ್ಕೃತಿಕವಾಗಿ ಇದೊಂದು ವಿದ್ಯಮಾನ. ಯಾಜಮಾನ್ಯ ಸಂಸ್ಕೃತಿಗೆ ಇದು ಆಧ್ಯಾತ್ಮ. ಜನಪದ ಸಂಸ್ಕೃತಿಗಳಿಗೆ ಇದೊಂದು ’ಸೋಲು’ ಹಾಗೂ ’ಶರಣಾಗತಿ’. ಹೀಗೆ ಸೋತು ಶರಣಾಗಿರುವ ಜನಪದ ಸಂಸ್ಕೃತಿಯ ಸಮುದಾಯದ ವ್ಯಕ್ತಿಯೊಬ್ಬ ಯಾಜಮಾನ್ಯ ಸಂಸ್ಕೃತಿ ಪ್ರಚಾರ ಮಾಡಿರುವ ಸುಳ್ಳನ್ನು ನಿಜವೆಂದು ನಂಬಿ ಸ್ವತಃ ಪ್ರಚಾರಕ್ಕಿಳಿದಿರುವುದೇ ಈ ಕಾಲದ ದುರಂತ. ಇಂತಹವರ ನಡೆಯನ್ನು ಬಯಲುಗೊಳಿಸಿ ಸತ್ಯವನ್ನು ಸಾರಿ ತಡೆಯದ ಹೊರತು ಬೌದ್ಧ, ಜೈನ, ಶಾಕ್ತ ಪಂಥ, ಪಾಶುಪತ-ಕಾಪಾಲಿಕ-ದತ್ತಪಂಥ, ಲಿಂಗಾಯತ, ಭಕ್ತಿ ಪಂಥಗಳು ಮುಂತಾದ ಜನಪರ ಸಿದ್ಧಾಂತಗಳನ್ನು ವೈದಿಕ ಬ್ರಾಹ್ಮಣ್ಯದ ವಿರಾಟ್ ರೂಪ ಸ್ವಾಹಾ ಮಾಡಿಕೊಳ್ಳುತ್ತಿರುತ್ತದೆ.


ಇದನ್ನೂ ಓದಿ: ಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...