HomeಮುಖಪುಟPunjab Election Results | ಪಂಜಾಬ್‌‌ನಲ್ಲಿ AAP ಭರ್ಜರಿ ಜಯ; ಸಂಪೂರ್ಣ ಫಲಿತಾಂಶ ಹೀಗಿದೆ

Punjab Election Results | ಪಂಜಾಬ್‌‌ನಲ್ಲಿ AAP ಭರ್ಜರಿ ಜಯ; ಸಂಪೂರ್ಣ ಫಲಿತಾಂಶ ಹೀಗಿದೆ

- Advertisement -
- Advertisement -

Punjab Election Results | ಪಂಜಾಬ್‌ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷ ಭರ್ಜರಿ ಜಯವನ್ನು ಸಾಧಿಸಿದೆ. ಈ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ತಮ್ಮ ಹೆಚ್ಚಿನ ಸ್ಥಾನಗಳನ್ನು ಕಳೆದುಕೊಂಡಿದೆ.

ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ ಅವರು ತಾನು ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲೂ ಸೋಲುಂಡಿದ್ದಾರೆ. ಜೊತೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೊತ್‌ ಸಿಂಗ್ ಸಿಧು ಅವರು ಕೂಡಾ ಸೋಲುಂಡಿದ್ದಾರೆ. ಇಷ್ಟೇ ಅಲ್ಲದೆ ಕಾಂಗ್ರೆಸ್ ತೊರೆದು ಬೇರೆಯೆ ಪಕ್ಷ ಕಟ್ಟಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ಕೂಡಾ ಸೋಲುಂಡಿದ್ದಾರೆ. ರಾಜ್ಯದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಕೂಡಾ ಸೋಲುಂಡಿದ್ದಾರೆ. ಇವರು ಒಟ್ಟು ಐದು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

ಪಂಜಾಬ್‌ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಒಬ್ಬ ಅಭ್ಯರ್ಥಿ ಜಯಗಳಿಸಿದ್ದಾರೆ. ಆಡಳಿತರೂಢ ಪಕ್ಷವಾದ ಕಾಂಗ್ರೆಸ್‌ ಕೇವಲ 18 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಕಾಂಗ್ರೆಸ್‌‌ ಈ ಹಿಂದೆ 77 ಸ್ಥಾನಗಳನ್ನು ಹೊಂದಿತ್ತು. ಕಳೆದ ಬಾರಿ 15 ಸ್ಥಾನಗಳನ್ನು ಹೊಂದಿದ್ದ ಶಿರೋಮಣಿ ಅಕಾಲಿ ದಳ ಈ ಬಾರಿ 3 ಕ್ಷೇತ್ರಗಳನ್ನಷ್ಟೆ ಗೆದ್ದುಕೊಂಡಿದೆ. ಶಿರೋಮಣಿ ಅಕಾಲಿ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್‌ಪಿ ಒಂದು ಕ್ಷೇತ್ರಗಳನ್ನು ಗೆದ್ದಕೊಂಡಿದೆ.

ಇನ್ನು, ಶಿರೋಮನಿ ಅಕಾಲಿದಳ(ಸಂಯುಕ್ತ) ಮತ್ತು ಅಮರಿಂದರ್‌ ಸಿಂಗ್ ಅವರ ಪಂಜಾಬ್‌ ಲೋಕ ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಎರಡು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು. ಕಳೆದ ಬಾರಿ ಬಿಜೆಪಿ ಒಟ್ಟು ಮೂರು ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಪಂಜಾಬ್‌ನ ಸಂಪೂರ್ಣ ಫಲಿತಾಂಶ ಹೀಗಿದೆ.

ಒಟ್ಟು ಕ್ಷೇತ್ರ 117, ಬಹುಮತಕ್ಕೆ 59 ಸ್ಥಾನಗಳ ಅಗತ್ಯ

ಆಮ್‌ ಆದ್ಮಿ ಪಕ್ಷ – 92
ಕಾಂಗ್ರೆಸ್‌ – 18
ಶಿರೋಮಣಿ ಅಕಾಲಿದಳ – 3
ಬಿಎಸ್‌ಪಿ – 1
ಬಿಜೆಪಿ – 2
ಪಕ್ಷೇತರ – 1

ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...