HomeಮುಖಪುಟGoa Election Results | ಗೋವಾ ಅತಂತ್ರ; ಆದರೆ ಬಿಜೆಪಿಗೆ ಸುಲಭದ ತುತ್ತು!

Goa Election Results | ಗೋವಾ ಅತಂತ್ರ; ಆದರೆ ಬಿಜೆಪಿಗೆ ಸುಲಭದ ತುತ್ತು!

- Advertisement -
- Advertisement -

Goa Election Results | 40 ವಿಧಾನಸಭಾ ಕ್ಷೇತ್ರವಿರುವ ಗೊವಾದ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆದರೆ ಬಿಜೆಪಿ ರಾಜ್ಯದ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಸಮೀಕ್ಷೆಗಳು ಹೇಳಿದ್ದ ಹಿನ್ನಲೆಯಲ್ಲಿ ಆಡಳಿತರೂಢ ಪಕ್ಷವಾದ ಬಿಜೆಪಿ ತನ್ನ ಮಾಜಿ ಮಿತ್ರ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ್‌ ಪಕ್ಷ(ಎಂಜಿಪಿ) ಜೊತೆಗೆ ಕಳೆದ ಎರಡು ದಿನಗಳಿಂದ ಮಾತುಕತೆ ನಡೆಸುತ್ತಿತ್ತು.

ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ನಾಯಕ ದಿವಂಗತ ಮನೋಹರ್‌ ಪರಿಕ್ಕರ್‌ ಅವರ ಪುತ್ರ ಉತ್ಪಲ್‌ ಪರಿಕ್ಕರ್‌ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧಿಸಿದ್ದರೂ, ಅಲ್ಪ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅದಕ್ಕೆ ಅಧಿಕಾರ ಹಿಡಿಯಲು ಆಗಿರಲಿಲ್ಲ. ಕೊನೆಗೆ ಕಾಂಗ್ರೆಸ್‌ನ ಮುಕ್ಕಾಲು ಪಾಲು ಶಾಸಕರು ಪಕ್ಷಾಂತರವಾಗಿದ್ದರು.

40 ಕ್ಷೇತ್ರಗಳಿರುವ ರಾಜ್ಯದಲ್ಲಿ ಬಹುಮತಕ್ಕೆ 21 ಕ್ಷೇತ್ರಗಳ ಅಗತ್ಯವಿದೆ. ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಅವರ ಮೈತ್ರಿ ಪಕ್ಷವಾದ ಗೋವಾ ಫಾರ್ವರ್ಡ್ (MFP) ಪಕ್ಷ 1 ಕ್ಷೇತ್ರವನ್ನು ಗೆದ್ದುಕೊಂಡಿದೆ.

ಈ ನಡುವೆ ಟಎಂಟಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (MGP) 2 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಆದರೆ ಟಿಎಂಸಿಗೆ ಯಾವುದೆ ಸ್ಥಾನಗಳು ಲಭ್ಯವಾಗಿಲ್ಲ.

ರಾಜ್ಯದ 39 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಿದ್ದ ಆಮ್‌ ಆದ್ಮಿ ಪಕ್ಷ (AAP) ಕೇವಲ ಎರಡು ಸ್ಥಾನಗಳನ್ನು ಮಾತ್ರವೆ ಪಡೆದುಕೊಂಡಿದೆ. ಜೊತೆಗೆ ಆಮ್‌ ಆದ್ಮಿ ಪಕ್ಷದ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಇದಲ್ಲದೆ ಗೋವನ್‌ ರೆವಲ್ಯೂಷನ್ ಪಾರ್ಟಿ(GRP) 1 ಕ್ಷೇತ್ರವನ್ನು ಗೆದ್ದುಕೊಂಡಿದ್ದು, ಇನ್ನಿಬ್ಬರು ಪಕ್ಷೇತರ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.

ಗೋವಾದ ಸಂಪೂರ್ಣ ಫಲಿತಾಂಶ ಕೆಳಗಿನಂತಿದೆ.

40 ಕ್ಷೇತ್ರಗಳಿದ್ದು, ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ.

ಬಿಜೆಪಿ – 20
ಕಾಂಗ್ರೆಸ್ – 11
GFP – 1
MGP – 2
AAP – 2
RGP – 1
ಪಕ್ಷೇತರ – 3

ಇದನ್ನೂ ಓದಿ: ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...