Homeಚಳವಳಿಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ - ವೆಂಕಟರಾಯಪ್ಪ

- Advertisement -
- Advertisement -

ಅಂದಿನ ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕಂಬಾಲಪಲ್ಲಿ ಎಂಬ ಗ್ರಾಮದಲ್ಲಿ 22 ವರ್ಷಗಳ ಹಿಂದೆ ಯಾವುದೇ ತಪ್ಪು ಮಾಡದ, ಆದರೆ ಸ್ವಾಭಿಮಾನದಿಂದ ತಲೆ ಎತ್ತಿ ಬದುಕಲು ಯತ್ನಿಸಿದ 7 ಜನ ದಲಿತರನ್ನು [ಶ್ರೀರಾಮಪ್ಪ(25), ಅಂಜನಪ್ಪ(27), ರಾಮಕ್ಕ(70), ಸುಬ್ಬಕ್ಕ(45) ಪಾಪಮ್ಮ(46), ನರಸಿಂಹಯ್ಯ(25), ಚಿಕ್ಕಪಾಪಣ್ಣ(40)] ಜೀವಂತವಾಗಿ ಸುಟ್ಟುಹಾಕಿದ ದುರಂತದ ದಿನ ಇಂದು… ದಲಿತರ ನರಮೇಧ ನಡೆಸಿ ಜಾತಿ ಕ್ರೌರ್ಯ ಮೆರೆದ ರೆಡ್ಡಿ ಒಕ್ಕಲಿಗ ಜಾತಿಯ 32 ಹಂತಕ ಆರೋಪಿಗಳನ್ನು ಡಿಸೆಂಬರ್ 4, 2006ರಂದು ವಿಚಾರಣಾ ನ್ಯಾಯಾಲಯ ದೋಷಮುಕ್ತಗೊಳಿಸಿತು… ತದನಂತರ 2014ರ ಆಗಸ್ಟ್ 20 ರಂದು ಹೈಕೋರ್ಟ್ ಸಹ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಕಂಬಾಲಪಲ್ಲಿಯ ಹತ್ಯಾಕಾಂಡದ ಆರೋಪಿಗಳನ್ನು ದೋಷಮುಕ್ತಗೊಳಿಸಿತು!

ಕಂಬಾಲಪಲ್ಲಿ ಹತ್ಯಾಕಾಂಡದ ಆರೋಪಿಗಳೆಲ್ಲ ಖುಲಾಸೆಯಾದ ಸಂದರ್ಭದಲ್ಲಿ ಅಧ್ಯಾಪಕ ವಿಕಾಸ್ ಆರ್ ಮೌರ್ಯ ಮತ್ತು ದಸಂಸ ಹಿರಿಯ ಮುಖಂಡರಾದ ಎನ್. ವೆಂಕಟೇಶ್‌ರವರು ಹತ್ಯಾಕಾಂಡದಲ್ಲಿ ತನ್ನ ಮಕ್ಕಳನ್ನು ಕಳೆದುಕೊಂಡ ಸಂತ್ರಸ್ತ ವೆಂಕಟರಾಯಪ್ಪರವರನ್ನು ಸಂದರ್ಶನ ಮಾಡಿದ್ದರು. 2015ರಲ್ಲಿ ಇದು ಗೌರಿ ಲಂಕೇಶ್ ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು. 2019ರಲ್ಲಿ ವೆಂಕಟರಾಯಪ್ಪನವರು ನಿಧನರಾಗಿದ್ದಾರೆ. ಆ ಸಂದರ್ಶನವನ್ನು ಓದುಗರಿಗಾಗಿ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ.

ಸಂದರ್ಶಕ : ಹೈ ಕೋರ್ಟ್ ಸಹ ಎಲ್ಲಾ ಆರೋಪಿಗಳನ್ನು ಖುಲಾಸೆ ಮಾಡಿದೆ. ಈ ತೀರ್ಪಿನ ಬಗ್ಗೆ ನಿಮ್ಮ ಅಭಿಪ್ರಾಯವೇನು?

ವೆಂಕಟರಾಯಪ್ಪ: ನನಗೇನು ತಿಳಿಯತ್ತೆ? ನಿಮ್ಮಂತೋರು ಯಾರಾದ್ರು ಬಂದು ಹೇಳಬೇಕು ಅಷ್ಟೆ. ನಾನು ಸಾಯೋದೊಳಗೆ ನ್ಯಾಯ ಸಿಕ್ಕರೆ ಸಾಕು.

ಸಂ: ಕಂಬಾಲಪಲ್ಲಿಯ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಅಲ್ಲಿ ಗೆಲ್ಲಬಹುದಾ?

ವೆಂ: ವಯಸ್ಸಾಯ್ತು, ನ್ಯಾಯ ನಮ್ಮಂತೋರಿಗೆ ಸಿಗತ್ತಾ? ನಿಮ್ಮಂತ ಹೋರಾಟಗಾರರು ನನಗೆ ನ್ಯಾಯ ಸಿಗೋ ತರ ಮಾಡಬೇಕು. ನೀವು ಹೇಳಿದ ಕಡೆ ಹೆಬ್ಬೆಟ್ಟು ಒತ್ತುತ್ತೀನಿ. ಅವರ ಶಿಕ್ಷೆ ಆಗಿರೋದು ನನ್ನ ಕಿವಿಗೆ ಬಿದ್ರೆ ಸಾಕು.

ಸಂ: ಸರ್ಕಾರ ನಿಮ್ಮ ಪರವಾಗಿ ಸುಪ್ರೀಂ ಕೋರ್ಟಿಗೆ ಹೋಗಿದೆ. ಇಲ್ಲಿವರೆಗೆ ನಿಮಗೆ ಏನೇನು ಸೌಕರ್ಯ ಮಾಡಿಕೊಟ್ಟಿದೆ?

ವೆಂ: ಸರ್ಕಾರದವರು ಹಣ ಕೊಟ್ಟು ಎಲ್ಲರಿಗೂ ಮನೆ ಕಟ್ಟಿಸಿಕೊಟ್ಟು, ಸೊಸೆಗೆ ಕೆಲಸ ಕೊಟ್ರು. ಆದ್ರೆ ಅವಳು ಕೊರಗಿ ಸೀಮೆ ಎಣ್ಣೆ ಸುರುವಿಕೊಂಡು ಸತ್ತಳು. ಸೌಕರ್ಯ ಬಂತು ಆದ್ರೆ ಮಕ್ಕಳು ಬರ್ತಾರೇನಪ್ಪಾ? ನ್ಯಾಯ ಸಿಗ್ತಾದೇನಪ್ಪಾ? ಇಲ್ಲಿ ಇರೋ ಜನರೆಲ್ಲ ನನ್ನ ಮಕ್ಕಳನ್ನ ನೆನೆಸ್ಟೇಕು. ಅವರು ಪ್ರಾಣ ಕೊಟ್ಟು ಇಲ್ಲಿನ ಜನರಿಗೆ ಜೀವನ ಕೊಟ್ರು. ಆದ್ರೆ ನಮ್ಮಂತೋರ್ಗೆ ಸೌಕರ್ಯ ಸಿಗಬೇಕಂದ್ರೆ ಯಾರಾದ್ರು ಸಾಯಲೇಬೇಕಾ?

ಸಂ: ಈ ಹದಿನೈದು ವರ್ಷ ಹೇಗೆ ಜೀವನ ಮಾಡಿದಿರಿ? ಆ ಘಟನೆ ಇನ್ನೂ ನೆನಪಿದೆಯಾ?

ವೆಂ: ಹೀಗೆ ಮಾಡ್ತಾ ಇದಿವಿ. ಎಲ್ಲಾ ನೆನಪಿದೆ, ಕಂಬಾಲಪಲ್ಲಿಗೆ ಮೊದಲ ಮೂರು ವರ್ಷ ಸಮಾಧಿಗೆ ಪೂಜೆ ಮಾಡೋಕೆ ಹೋದೆ. ಆಮೇಲೆ ಮನಸ್ಸಾಗಲಿಲ್ಲ. ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ.

ಸಂ: ಹಾಗಾದ್ರೆ ಕಂಬಾಲಪಲ್ಲಿಯ ಜೊತೆ ಸಂಬಂಧವೇ ಇಲ್ಲವೆ?

ವೆಂ: ನಾನು ಹೋಗಲ್ಲ. ನನ್ನ ಸಂಬಂಧಿಕರು ಪ್ರತಿ ವರ್ಷ ಹೋಗಿ ಸಮಾಧಿಗೆ ಪೂಜೆ ಮಾಡಿಕೊಂಡು ಬರುತ್ತಾರೆ ಅಷ್ಟೆ, ಜಮೀನು ಪಾಳು ಬಿದ್ದಿದೆ.

ಸಂ: ನೀವು ಕೋರ್ಟಿನಲ್ಲಿ ಸಾಕ್ಷಿ ಸರಿಯಾಗಿ ಹೇಳಲಿಲ್ಲವಂತಲ್ಲ. ಯಾಕೆ?

ವೆಂ: ನಾನು ಎಲ್ಲಾ ಹೇಳಿದ್ನಪ್ಪ, ಜಡ್ಜ್ ಮುಂದೆ ನಡೆದಿದ್ದೆಲ್ಲಾ ಹೇಳಿದೆ. ಇಂತಿಂತವ್ರೆ ಮಾಡಿದ್ದು ಅಂತ ಹೇಳಿದೆ. ಕೊನೇಲಿ ವಕೀಲ ನಿನಗೆ ಕಣ್ಣು ಸ್ವಲ್ಪ ಮಂಜಲ್ಲವಾ ಅಂತಂದ ಅದಕ್ಕೆ ಹೌದು ಸ್ವಲ್ಪ ಅಂದೆ ಅಷ್ಟೆ. ಇದನ್ನೇ ಮುಂದು ಮಾಡಿ ನಾನು ಹೇಳಿದ್ದನ್ನೆಲ್ಲ ಬಿಟ್ಟುಬಿಟ್ಟವರೆ.

ಸಂ: ಕೊಂದವರು ಯಾರು ಅಂತ ನೆನಪಿದೆಯಾ? ಮರುವಿಚಾರಣೆ ಬಂದ್ರೆ ಸತ್ಯ ಹೇಳ್ತಿರಾ?

ವೆಂ: ಹೇಳ್ತಿನಿ. ಪ್ರತಿಯೊಬ್ಬ ಕೊಲೆಗಾರರ ಹೆಸರನ್ನೂ ಹೇಳ್ತಿನಿ. ಪತ್ತೆ ಹಚ್ಚುತ್ತೀನಿ. ಯಾರೇ ಆಗ್ಲಿ ಕೊಲೆಗಾರರಿಗೆ ಶಿಕ್ಷೆ ಆಗಬೇಕಲ್ವಾ? ಆವತ್ತು ಸಾಪುಲು ನರಸಪ್ಪ ನನ್ನ ಕಾಪಾಡದೇ ಇದ್ದಿದ್ದರೆ ನಾನು ಇವತ್ತು ಬದುಕ್ತಾ ಇರಲಿಲ್ಲ.

ಸಂ: ನ್ಯಾಯ ಸಿಗದೇ ಇದ್ದದ್ದಕ್ಕೆ ನಿಮಗೆ ಯಾರ ಮೇಲೆ ಬೇಸರವಿದೆ? ಪೊಲೀಸ್, ಸಂಘಟನೆ, ನ್ಯಾಯಾಲಯ, ಸರ್ಕಾರ?

ವೆಂ: ಅವರನ್ನ ಯಾರು ಪೊಲೀಸ್ ಅಂದಿದ್ದು? ಅವರು ಮಾಡಿದ ಅನ್ಯಾಯ ಅವರೇ ಅನುಭವಿಸುತ್ತಾರೆ. ಸಂಘದವರು ಆರಂಭದಲ್ಲಿ ಜೊತೇಲಿ ಇದ್ರು. ಆಮೇಲೆ ಅವರೂ ಕೈ ಬಿಟ್ಟು, ಈಗ ವೆಂಕಟೇಶಪ್ಪ ಬಂದು ಹೋಗ್ತಾ ಕ್ಷೇಮ ವಿಚಾರಿಸಿಕೊಳ್ತಾರೆ. ಎಲ್ಲ ವಿಚಾರ ಅವರೇ ಹೇಳ್ತಾರೆ. ಇನ್ಯಾರು ಬರೋದಿಲ್ಲ. ನಮ್ಮನ್ನ ಮಾತಾಡ್ಸೋರೆ ಇಲ್ಲ.

ಸಂ: ಕೊನೆಯದಾಗಿ ಏನು ಹೇಳೋಕೆ ಇಷ್ಟ ಪಡ್ತೀರಾ?

ವೆಂ: ಏನು ಹೇಳಲಿ? ಮಿನಿಸ್ಟರ್, ಪೊಲೀಸ್, ತಹಶಿಲ್ದಾರ್, ಡಿ.ಸಿ ಎಲ್ಲಾ ಬಂದ್ರು. ಏನು ಮಾಡಿದ್ರು? ಏನು ಮಾಡ್ಲಿಲ್ಲ. ನನ್ನ ಕಣ್ಣ ಮುಂದೆ ಬಾಗಿಲು ಹಾಕಿ ಬೆಂಕಿ ಇಟ್ರಪ್ಪ ಪೋಲಿಸು ಅಲ್ಲೆ ಇದ್ರು. ಅವರಿಗೆ ಎಲ್ಲಾ ಗೊತ್ತು. ಹಿಂದೆ ನನ್ನ ದೊಡ್ಡ ಮಗ ಸತ್ತಾಗ್ಲು ನ್ಯಾಯ ಸಿಗಲಿಲ್ಲ. ನನ್ನ ಮಗ ಶ್ರೀರಾಮ ಹುಲಿಯಂಗಿದ್ದವನ್ನ ಸಾಯಿಸಿಬಿಟ್ರು. ರಾಜ ಮಹಾರಾಜರೇ ಹೋದ್ರು. ನನ್ನ ಪ್ರಾಣ ಹೋದ್ರು ಸರಿ ಕೋರ್ಟಲ್ಲಿ ಸತ್ಯ ಹೇಳ್ತಿನಿ. ಆದ್ರೆ ನಂಗೆ ಸಪೋರ್ಟ್ ಮಾಡೋರು ಯಾರು? ನಿಮ್ಮಂತೋರು ಆಗಾಗ ಬಂದು ಸಾಯೋ ಮುದುಕನಿಗೆ ಶಕ್ತಿ ಕೊಡ್ಬೇಕು.


ಇದನ್ನೂ ಓದಿ; ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಂಬಾಲಪಲ್ಲಿ ನರಮೇದದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕಂಬಾಲ ಪಲ್ಲಿಯ ಘಟನೆ ನಡೆದು 22ವರ್ಷ ಆದರೂ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದರೆ ನ್ಯಾಯಾಂಗ ವ್ಯವಸ್ಥೆ ಏನು ಮಾಡುತ್ತಿದೆ ಎಂದು ತಿಳಿಯುತ್ತಿಲ್ಲ. ಉಳಿದ ಒಬ್ಬ ವ್ಯಕ್ತಿಯು ತೀರಿ ಹೋಗಿದ್ದಾರೆ ನ್ಯಾಯ ಯಾರಿಗೆ ????

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...