Homeಚಳವಳಿಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ - ವೆಂಕಟರಾಯಪ್ಪ

- Advertisement -
- Advertisement -

ಅಂದಿನ ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕಂಬಾಲಪಲ್ಲಿ ಎಂಬ ಗ್ರಾಮದಲ್ಲಿ 22 ವರ್ಷಗಳ ಹಿಂದೆ ಯಾವುದೇ ತಪ್ಪು ಮಾಡದ, ಆದರೆ ಸ್ವಾಭಿಮಾನದಿಂದ ತಲೆ ಎತ್ತಿ ಬದುಕಲು ಯತ್ನಿಸಿದ 7 ಜನ ದಲಿತರನ್ನು [ಶ್ರೀರಾಮಪ್ಪ(25), ಅಂಜನಪ್ಪ(27), ರಾಮಕ್ಕ(70), ಸುಬ್ಬಕ್ಕ(45) ಪಾಪಮ್ಮ(46), ನರಸಿಂಹಯ್ಯ(25), ಚಿಕ್ಕಪಾಪಣ್ಣ(40)] ಜೀವಂತವಾಗಿ ಸುಟ್ಟುಹಾಕಿದ ದುರಂತದ ದಿನ ಇಂದು… ದಲಿತರ ನರಮೇಧ ನಡೆಸಿ ಜಾತಿ ಕ್ರೌರ್ಯ ಮೆರೆದ ರೆಡ್ಡಿ ಒಕ್ಕಲಿಗ ಜಾತಿಯ 32 ಹಂತಕ ಆರೋಪಿಗಳನ್ನು ಡಿಸೆಂಬರ್ 4, 2006ರಂದು ವಿಚಾರಣಾ ನ್ಯಾಯಾಲಯ ದೋಷಮುಕ್ತಗೊಳಿಸಿತು… ತದನಂತರ 2014ರ ಆಗಸ್ಟ್ 20 ರಂದು ಹೈಕೋರ್ಟ್ ಸಹ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಕಂಬಾಲಪಲ್ಲಿಯ ಹತ್ಯಾಕಾಂಡದ ಆರೋಪಿಗಳನ್ನು ದೋಷಮುಕ್ತಗೊಳಿಸಿತು!

ಕಂಬಾಲಪಲ್ಲಿ ಹತ್ಯಾಕಾಂಡದ ಆರೋಪಿಗಳೆಲ್ಲ ಖುಲಾಸೆಯಾದ ಸಂದರ್ಭದಲ್ಲಿ ಅಧ್ಯಾಪಕ ವಿಕಾಸ್ ಆರ್ ಮೌರ್ಯ ಮತ್ತು ದಸಂಸ ಹಿರಿಯ ಮುಖಂಡರಾದ ಎನ್. ವೆಂಕಟೇಶ್‌ರವರು ಹತ್ಯಾಕಾಂಡದಲ್ಲಿ ತನ್ನ ಮಕ್ಕಳನ್ನು ಕಳೆದುಕೊಂಡ ಸಂತ್ರಸ್ತ ವೆಂಕಟರಾಯಪ್ಪರವರನ್ನು ಸಂದರ್ಶನ ಮಾಡಿದ್ದರು. 2015ರಲ್ಲಿ ಇದು ಗೌರಿ ಲಂಕೇಶ್ ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು. 2019ರಲ್ಲಿ ವೆಂಕಟರಾಯಪ್ಪನವರು ನಿಧನರಾಗಿದ್ದಾರೆ. ಆ ಸಂದರ್ಶನವನ್ನು ಓದುಗರಿಗಾಗಿ ಮತ್ತೊಮ್ಮೆ ಪ್ರಕಟಿಸುತ್ತಿದ್ದೇವೆ.

ಸಂದರ್ಶಕ : ಹೈ ಕೋರ್ಟ್ ಸಹ ಎಲ್ಲಾ ಆರೋಪಿಗಳನ್ನು ಖುಲಾಸೆ ಮಾಡಿದೆ. ಈ ತೀರ್ಪಿನ ಬಗ್ಗೆ ನಿಮ್ಮ ಅಭಿಪ್ರಾಯವೇನು?

ವೆಂಕಟರಾಯಪ್ಪ: ನನಗೇನು ತಿಳಿಯತ್ತೆ? ನಿಮ್ಮಂತೋರು ಯಾರಾದ್ರು ಬಂದು ಹೇಳಬೇಕು ಅಷ್ಟೆ. ನಾನು ಸಾಯೋದೊಳಗೆ ನ್ಯಾಯ ಸಿಕ್ಕರೆ ಸಾಕು.

ಸಂ: ಕಂಬಾಲಪಲ್ಲಿಯ ಪ್ರಕರಣ ಸುಪ್ರೀಂ ಕೋರ್ಟಿಗೆ ಹೋಗಿದೆ. ಅಲ್ಲಿ ಗೆಲ್ಲಬಹುದಾ?

ವೆಂ: ವಯಸ್ಸಾಯ್ತು, ನ್ಯಾಯ ನಮ್ಮಂತೋರಿಗೆ ಸಿಗತ್ತಾ? ನಿಮ್ಮಂತ ಹೋರಾಟಗಾರರು ನನಗೆ ನ್ಯಾಯ ಸಿಗೋ ತರ ಮಾಡಬೇಕು. ನೀವು ಹೇಳಿದ ಕಡೆ ಹೆಬ್ಬೆಟ್ಟು ಒತ್ತುತ್ತೀನಿ. ಅವರ ಶಿಕ್ಷೆ ಆಗಿರೋದು ನನ್ನ ಕಿವಿಗೆ ಬಿದ್ರೆ ಸಾಕು.

ಸಂ: ಸರ್ಕಾರ ನಿಮ್ಮ ಪರವಾಗಿ ಸುಪ್ರೀಂ ಕೋರ್ಟಿಗೆ ಹೋಗಿದೆ. ಇಲ್ಲಿವರೆಗೆ ನಿಮಗೆ ಏನೇನು ಸೌಕರ್ಯ ಮಾಡಿಕೊಟ್ಟಿದೆ?

ವೆಂ: ಸರ್ಕಾರದವರು ಹಣ ಕೊಟ್ಟು ಎಲ್ಲರಿಗೂ ಮನೆ ಕಟ್ಟಿಸಿಕೊಟ್ಟು, ಸೊಸೆಗೆ ಕೆಲಸ ಕೊಟ್ರು. ಆದ್ರೆ ಅವಳು ಕೊರಗಿ ಸೀಮೆ ಎಣ್ಣೆ ಸುರುವಿಕೊಂಡು ಸತ್ತಳು. ಸೌಕರ್ಯ ಬಂತು ಆದ್ರೆ ಮಕ್ಕಳು ಬರ್ತಾರೇನಪ್ಪಾ? ನ್ಯಾಯ ಸಿಗ್ತಾದೇನಪ್ಪಾ? ಇಲ್ಲಿ ಇರೋ ಜನರೆಲ್ಲ ನನ್ನ ಮಕ್ಕಳನ್ನ ನೆನೆಸ್ಟೇಕು. ಅವರು ಪ್ರಾಣ ಕೊಟ್ಟು ಇಲ್ಲಿನ ಜನರಿಗೆ ಜೀವನ ಕೊಟ್ರು. ಆದ್ರೆ ನಮ್ಮಂತೋರ್ಗೆ ಸೌಕರ್ಯ ಸಿಗಬೇಕಂದ್ರೆ ಯಾರಾದ್ರು ಸಾಯಲೇಬೇಕಾ?

ಸಂ: ಈ ಹದಿನೈದು ವರ್ಷ ಹೇಗೆ ಜೀವನ ಮಾಡಿದಿರಿ? ಆ ಘಟನೆ ಇನ್ನೂ ನೆನಪಿದೆಯಾ?

ವೆಂ: ಹೀಗೆ ಮಾಡ್ತಾ ಇದಿವಿ. ಎಲ್ಲಾ ನೆನಪಿದೆ, ಕಂಬಾಲಪಲ್ಲಿಗೆ ಮೊದಲ ಮೂರು ವರ್ಷ ಸಮಾಧಿಗೆ ಪೂಜೆ ಮಾಡೋಕೆ ಹೋದೆ. ಆಮೇಲೆ ಮನಸ್ಸಾಗಲಿಲ್ಲ. ನನ್ನ ಮಕ್ಕಳ ಕೊಂದವರ ಮುಖ ನೋಡಿದರೆ ಕಣ್ಣು ಚುಚ್ಚತ್ತೆ, ನೋವಾಗತ್ತೆ, ಶಿಕ್ಷೆ ಕೊಡ್ಸೋಕೆ ಆಗ್ಲಿಲ್ವಲ್ಲ ಅಂತ ನಾಚಿಕೆ ಆಗತ್ತೆ.

ಸಂ: ಹಾಗಾದ್ರೆ ಕಂಬಾಲಪಲ್ಲಿಯ ಜೊತೆ ಸಂಬಂಧವೇ ಇಲ್ಲವೆ?

ವೆಂ: ನಾನು ಹೋಗಲ್ಲ. ನನ್ನ ಸಂಬಂಧಿಕರು ಪ್ರತಿ ವರ್ಷ ಹೋಗಿ ಸಮಾಧಿಗೆ ಪೂಜೆ ಮಾಡಿಕೊಂಡು ಬರುತ್ತಾರೆ ಅಷ್ಟೆ, ಜಮೀನು ಪಾಳು ಬಿದ್ದಿದೆ.

ಸಂ: ನೀವು ಕೋರ್ಟಿನಲ್ಲಿ ಸಾಕ್ಷಿ ಸರಿಯಾಗಿ ಹೇಳಲಿಲ್ಲವಂತಲ್ಲ. ಯಾಕೆ?

ವೆಂ: ನಾನು ಎಲ್ಲಾ ಹೇಳಿದ್ನಪ್ಪ, ಜಡ್ಜ್ ಮುಂದೆ ನಡೆದಿದ್ದೆಲ್ಲಾ ಹೇಳಿದೆ. ಇಂತಿಂತವ್ರೆ ಮಾಡಿದ್ದು ಅಂತ ಹೇಳಿದೆ. ಕೊನೇಲಿ ವಕೀಲ ನಿನಗೆ ಕಣ್ಣು ಸ್ವಲ್ಪ ಮಂಜಲ್ಲವಾ ಅಂತಂದ ಅದಕ್ಕೆ ಹೌದು ಸ್ವಲ್ಪ ಅಂದೆ ಅಷ್ಟೆ. ಇದನ್ನೇ ಮುಂದು ಮಾಡಿ ನಾನು ಹೇಳಿದ್ದನ್ನೆಲ್ಲ ಬಿಟ್ಟುಬಿಟ್ಟವರೆ.

ಸಂ: ಕೊಂದವರು ಯಾರು ಅಂತ ನೆನಪಿದೆಯಾ? ಮರುವಿಚಾರಣೆ ಬಂದ್ರೆ ಸತ್ಯ ಹೇಳ್ತಿರಾ?

ವೆಂ: ಹೇಳ್ತಿನಿ. ಪ್ರತಿಯೊಬ್ಬ ಕೊಲೆಗಾರರ ಹೆಸರನ್ನೂ ಹೇಳ್ತಿನಿ. ಪತ್ತೆ ಹಚ್ಚುತ್ತೀನಿ. ಯಾರೇ ಆಗ್ಲಿ ಕೊಲೆಗಾರರಿಗೆ ಶಿಕ್ಷೆ ಆಗಬೇಕಲ್ವಾ? ಆವತ್ತು ಸಾಪುಲು ನರಸಪ್ಪ ನನ್ನ ಕಾಪಾಡದೇ ಇದ್ದಿದ್ದರೆ ನಾನು ಇವತ್ತು ಬದುಕ್ತಾ ಇರಲಿಲ್ಲ.

ಸಂ: ನ್ಯಾಯ ಸಿಗದೇ ಇದ್ದದ್ದಕ್ಕೆ ನಿಮಗೆ ಯಾರ ಮೇಲೆ ಬೇಸರವಿದೆ? ಪೊಲೀಸ್, ಸಂಘಟನೆ, ನ್ಯಾಯಾಲಯ, ಸರ್ಕಾರ?

ವೆಂ: ಅವರನ್ನ ಯಾರು ಪೊಲೀಸ್ ಅಂದಿದ್ದು? ಅವರು ಮಾಡಿದ ಅನ್ಯಾಯ ಅವರೇ ಅನುಭವಿಸುತ್ತಾರೆ. ಸಂಘದವರು ಆರಂಭದಲ್ಲಿ ಜೊತೇಲಿ ಇದ್ರು. ಆಮೇಲೆ ಅವರೂ ಕೈ ಬಿಟ್ಟು, ಈಗ ವೆಂಕಟೇಶಪ್ಪ ಬಂದು ಹೋಗ್ತಾ ಕ್ಷೇಮ ವಿಚಾರಿಸಿಕೊಳ್ತಾರೆ. ಎಲ್ಲ ವಿಚಾರ ಅವರೇ ಹೇಳ್ತಾರೆ. ಇನ್ಯಾರು ಬರೋದಿಲ್ಲ. ನಮ್ಮನ್ನ ಮಾತಾಡ್ಸೋರೆ ಇಲ್ಲ.

ಸಂ: ಕೊನೆಯದಾಗಿ ಏನು ಹೇಳೋಕೆ ಇಷ್ಟ ಪಡ್ತೀರಾ?

ವೆಂ: ಏನು ಹೇಳಲಿ? ಮಿನಿಸ್ಟರ್, ಪೊಲೀಸ್, ತಹಶಿಲ್ದಾರ್, ಡಿ.ಸಿ ಎಲ್ಲಾ ಬಂದ್ರು. ಏನು ಮಾಡಿದ್ರು? ಏನು ಮಾಡ್ಲಿಲ್ಲ. ನನ್ನ ಕಣ್ಣ ಮುಂದೆ ಬಾಗಿಲು ಹಾಕಿ ಬೆಂಕಿ ಇಟ್ರಪ್ಪ ಪೋಲಿಸು ಅಲ್ಲೆ ಇದ್ರು. ಅವರಿಗೆ ಎಲ್ಲಾ ಗೊತ್ತು. ಹಿಂದೆ ನನ್ನ ದೊಡ್ಡ ಮಗ ಸತ್ತಾಗ್ಲು ನ್ಯಾಯ ಸಿಗಲಿಲ್ಲ. ನನ್ನ ಮಗ ಶ್ರೀರಾಮ ಹುಲಿಯಂಗಿದ್ದವನ್ನ ಸಾಯಿಸಿಬಿಟ್ರು. ರಾಜ ಮಹಾರಾಜರೇ ಹೋದ್ರು. ನನ್ನ ಪ್ರಾಣ ಹೋದ್ರು ಸರಿ ಕೋರ್ಟಲ್ಲಿ ಸತ್ಯ ಹೇಳ್ತಿನಿ. ಆದ್ರೆ ನಂಗೆ ಸಪೋರ್ಟ್ ಮಾಡೋರು ಯಾರು? ನಿಮ್ಮಂತೋರು ಆಗಾಗ ಬಂದು ಸಾಯೋ ಮುದುಕನಿಗೆ ಶಕ್ತಿ ಕೊಡ್ಬೇಕು.


ಇದನ್ನೂ ಓದಿ; ಬುದ್ಧ ಗುರು ವಿಷ್ಣುವಿನ ಅವತಾರವಲ್ಲ, ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಕಂಬಾಲಪಲ್ಲಿ ನರಮೇದದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಶಿಕ್ಷೆ ಆಗಬೇಕು.

  2. ಕಂಬಾಲ ಪಲ್ಲಿಯ ಘಟನೆ ನಡೆದು 22ವರ್ಷ ಆದರೂ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದರೆ ನ್ಯಾಯಾಂಗ ವ್ಯವಸ್ಥೆ ಏನು ಮಾಡುತ್ತಿದೆ ಎಂದು ತಿಳಿಯುತ್ತಿಲ್ಲ. ಉಳಿದ ಒಬ್ಬ ವ್ಯಕ್ತಿಯು ತೀರಿ ಹೋಗಿದ್ದಾರೆ ನ್ಯಾಯ ಯಾರಿಗೆ ????

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...