Homeಮುಖಪುಟಉತ್ತರ ಪ್ರದೇಶ ಚುನಾವಣೆ: ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಬಿಜೆಪಿ ಅಭ್ಯರ್ಥಿಗಳಿವರು!

ಉತ್ತರ ಪ್ರದೇಶ ಚುನಾವಣೆ: ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಬಿಜೆಪಿ ಅಭ್ಯರ್ಥಿಗಳಿವರು!

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸುವ ಮೂಲಕ ಸತತ ಎರಡನೇ ಭಾರಿ ಅಧಿಕ್ಕಾರಕ್ಕೇರಿದೆ. ಆ ಮೂಲಕ 40 ವರ್ಷಗಳ ನಂತರ ಸತತ ಎರಡನೇ ಭಾರಿಗೆ ಆಯ್ಕೆಯಾದ ದಾಖಲೆ ಮಾಡಿದೆ. ಇದರ ಜೊತೆಗೆ ಪಕ್ಷದ ಹಲವು ಅಭ್ಯರ್ಥಿಗಳು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ. ಸಾಹಿಬಾಬಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಶರ್ಮಾ ಎಂಬುವವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಮದ ಗೆಲುವು ಸಾಧಿಸಿದ್ದಾರೆ. ಯುಪಿ ಸಿಎಂ ಆದಿತ್ಯನಾಥ್ ಸಹ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ವಿಜಯಿಯಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ:

1. ಬಿಜೆಪಿಯ ಸಾಹಿಬಾಬಾದ್ ಕ್ಷೇತ್ರದ ಅಭ್ಯರ್ಥಿ ಸುನಿಲ್ ಕುಮಾರ್ ಶರ್ಮಾ ಅವರು ಸಮಾಜವಾದಿ ಪಕ್ಷದ ಅಮರ್ಪಾಲ್ ಶರ್ಮಾ ಅವರನ್ನು 2.14 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.

2. ಬಿಜೆಪಿಯ ಪಂಕಜ್ ಸಿಂಗ್ ಅವರು ತಮ್ಮ ನೋಯ್ಡಾ ಕ್ಷೇತ್ರದಲ್ಲಿ 1.81 ಲಕ್ಷ ಮತಗಳ ಅಂತರದಿಂದ ಸಮಾಜವಾದಿ ಪಕ್ಷದ ಸುನೀಲ್ ಚೌಧರಿ ಅವರನ್ನು ಸೋಲಿಸಿದ್ದಾರೆ.

3. ಮೀರತ್ ಕ್ಯಾಂಟ್‌ನಲ್ಲಿ ಬಿಜೆಪಿ ಅಭ್ಯರ್ಥಿ ಅಮಿತ್ ಅಗರ್ವಾಲ್ 1.18 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಮನೀಶ್ ಅಲವತ್ ಕೇವಲ 43,960 ಮತಗಳನ್ನಷ್ಟೆ ಗಳಿಸಿದ್ದಾರೆ.

4. ಬಿಜೆಪಿಯ ಪುರುಷೋತ್ತಮ್ ಖಂಡೇಲ್ವಾಲ್ ಅವರು ಆಗ್ರಾ ಉತ್ತರ ಕ್ಷೇತ್ರದಲ್ಲಿ 1.12 ಲಕ್ಷ ಮತಗಳ ಅಂತರದಿಂದ ಬಿಎಸ್‌ಪಿಯ ಶಬ್ಬೀರ್ ಅಬ್ಬಾಸ್‌ರವರನ್ನು ಸೋಲಿಸಿದ್ದಾರೆ.

5. ಮೆಹ್ರೋನಿ ಸ್ಥಾನದಿಂದ ಬಿಜೆಪಿಯ ಮನೋಹರ್ ಲಾಲ್ 1.1 ಲಕ್ಷ ಮತಗಳ ಅಂತರದಿಂದ  ಗೆದ್ದಿದ್ದಾರೆ. ಇಲ್ಲಿ ಬಿಎಸ್‌ಪಿ ಎರಡನೇ ಸ್ಥಾನ ಪಡೆದಿದೆ.

6. ಮಥುರಾದಿಂದ ಬಿಜೆಪಿಯ ಶ್ರೀಕಾಂತ್ ಶರ್ಮಾ 1.08 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಎರಡನೇ ಸ್ಥಾನ ಪಡೆದಿದ್ದಾರೆ.

7. ಲಲಿತ್‌ಪುರದ ಬಿಜೆಪಿ ಅಭ್ಯರ್ಥಿ ರಾಮರತನ್ ಕುಶ್ವಾಹ 1.07 ಮತಗಳ ಅಂತರದಿಂದ ಬಿಎಸ್‌ಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

8. ಬಿಜೆಪಿಯ ಅತುಲ್ ಗರ್ಗ್ ಘಾಜಿಯಾಬಾದ್‌ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ವಿರುದ್ಧ 1.05 ಮತಗಳ ಅಂತರದಿಂದ ಗೆದ್ದಿದ್ದಾರೆ.

9. ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ (ನಗರ) 1.03 ಲಕ್ಷ ಮತಗಳಿಂದ ಗೆದ್ದಿದ್ದಾರೆ.

10. ಬಿಜೆಪಿಯ ಅಂಜುಲಾ ಸಿಂಗ್ ಮಹೂರ್ ಅವರು ಹತ್ರಾಸ್‌ನಲ್ಲಿ ಬಿಎಸ್‌ಪಿಯ ಸಂಜೀವ್ ಕುಮಾರ್ ಅವರನ್ನು 1 ಲಕ್ಷ ಮತಗಳಿಂದ ಸೋಲಿಸಿದರು.


ಇದನ್ನೂ ಓದಿ: ಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...