Homeಮುಖಪುಟ‘ರೈತರ ತಂಟೆಗೆ ಹೋಗಬೇಡಿ!’: ಮೋದಿ ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಮೇಘಾಲಯದ ರಾಜ್ಯಪಾಲ

‘ರೈತರ ತಂಟೆಗೆ ಹೋಗಬೇಡಿ!’: ಮೋದಿ ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಮೇಘಾಲಯದ ರಾಜ್ಯಪಾಲ

- Advertisement -
- Advertisement -

ರೈತರ ಭಾರಿ ಪ್ರತಿಭಟನೆಗೆ ಮಂಡಿಯೂರಿ ಒಕ್ಕೂಟ ಸರ್ಕರ ಇತ್ತೀಚೆಗೆ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಿತ್ತು. ಈ ಕೃಷಿ ಕಾನೂನು ಮತ್ತು ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಆಗಾಗ್ಗೆ ಟೀಕೆಗಳನ್ನು ಮಾಡುತ್ತಿದ್ದ ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಇದೀಗ ಮತ್ತೇ ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ರೈತರ ತಂಟೆಗೆ ಹೋಗಬೇಡಿ” ಎಂದು ಹೇಳಿದ್ದಾರೆ.

ಶುಕ್ರವಾರದಂದು ರಾಜಸ್ಥಾನದ ಜೋಧಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸತ್ಯಪಾಲ್‌ ಮಲಿಕ್, “ದೆಹಲಿ ಸರ್ಕಾರವು ರೈತರ ತಂಟೆಗೆ ಹೋಗಬಾರದು ಎಂಬುವುದು ನನ್ನ ಸಲಹೆ. ರೈತರು ಅಪಾಯಕಾರಿ ಜನರಾಗಿದ್ದು, ತಮಗೆ ಬೇಕಾದುದನ್ನು ಮಾತುಕತೆ ಅಥವಾ ಹೋರಾಟದ ಮೂಲಕ ಪಡೆಯುತ್ತಾರೆ. ಒಂದು ವೇಳೆ ಅಗತ್ಯವಿದ್ದರೆ, ಅವರು ಹಿಂಸಾತ್ಮಕವಾಗಿ ತಾವು ಬಯಸಿದ್ದನ್ನು ಸಾಧಿಸುತ್ತಾರೆ” ಎಂದು  ಹೇಳಿದ್ದಾರೆ.

ಬಿಹಾರ, ಗೋವಾ ಮತ್ತು ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ಅವರು ರೈತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ತಾನು ಹುದ್ದೆಯನ್ನು ಕಳೆದುಕೊಳ್ಳಬಹುದಾದರೂ, ಅದಕ್ಕೆ ಹೆದರುವುದಿಲ್ಲ ಎಂದು ಅವರು ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ‘ದೇಶದಲ್ಲಿ ರಾಜ್ಯಪಾಲರು ದುರ್ಬಲರಾಗಿದ್ದು, ಮಾತನಾಡಲಾಗದ ಸ್ಥಿತಿಯಿದೆ’: ರಾಜ್ಯಪಾಲ ಸತ್ಯಪಾಲ್ ಮಲಿಕ್

ಕಳೆದ ವರ್ಷ ಡಿಸೆಂಬರ್‌ನಲ್ಲಿ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಮಲಿಕ್ ಅವರು ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೃಷಿ ಕಾನೂನುಗಳನ್ನು ವಾಪಾಸು ಪಡೆದು ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಒಕ್ಕೂಟ ಸರ್ಕಾರ ಭರವಸೆ ನೀಡಿತ್ತು. ಹೀಗಾಗಿ ರೈತರು ತಮ್ಮ ಒಂದು ವರ್ಷಗಳ ಸುಧೀರ್ಘ ಪ್ರತಿಭಟನೆಯನ್ನು ಕೊನೆಗೊಳಿಸಿದ್ದರು.

“ಕೃಷಿಕರನ್ನು ದಾರಿ ತಪ್ಪಿಸಲು ಆಗುವುದಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವುದು ಹೇಗೆ ಎಂದು ಅವರಿಗೆ ತಿಳಿದಿದೆ. ಅವರಿಗೆ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ, ಅವರು ತಮ್ಮ ಪ್ರತಿಭಟನೆಯನ್ನು ಮತ್ತೆ ಪ್ರಾರಂಭಿಸುತ್ತಾರೆ” ಎಂದು ಮಲಿಕ್ ಹೇಳಿದ್ದಾರೆ.

ತನಗೆ ಒಕ್ಕೂಟ ಸರ್ಕಾರ ವಿರುದ್ದ ಯಾವುದೇ ‘ಹಗೆತನ’ ಹೊಂದಿಲ್ಲ ಎಂದು ಸ್ಪಷ್ಟಪಡಿಸಿರುವ ಮಲಿಕ್‌ ಅವರು, “ನಾನು ದೆಹಲಿಯಲ್ಲಿ ಒಂದೂವರೆ ಕೋಣೆಯ ಮನೆಯಲ್ಲಿ ವಾಸಿಸುತ್ತಿದ್ದೇನೆ. ಹಾಗಾಗಿಯೆ ಪ್ರಧಾನಿ ಮೋದಿಯನ್ನು ಎದುರಿಸಿ ರೈತರ ಸಮಸ್ಯೆಯ ಬಗ್ಗೆ ಮಾತನಾಡಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಕಳೆದ ಜನವರಿಯಲ್ಲಿ ಹೇಳಿಕೆ ನೀಡಿದ್ದ ಮಲಿಕ್ ಅವರು, ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ನಡೆದ ಮಾತುಕತೆಯಲ್ಲಿ ಪ್ರಧಾನಿ ‘ಅಹಂಕಾರದಿಂದ’ ವರ್ತಿಸಿದರು ಎಂದು ಹೇಳಿದ್ದರು. ಅಲ್ಲದೆ, ಅಮಿತ್ ಶಾ ಅವರೊಂದಿಗೆ ಪ್ರಧಾನಿ ಮೋದಿಯ ವರ್ತನೆಯ ಬಗ್ಗೆ ಕೇಳಿದ್ದಾಗ, ಅಮಿತ್‌ ಶಾ ಅವರು, ‘ಪ್ರಧಾನಿ ಮೋದಿ ತನ್ನ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ’ ಎಂದು ಟೀಕಿಸಿದ್ದರು ಎಂದು ಮಲಿಕ್ ಹೇಳಿದ್ದರು.

ಇದನ್ನೂ ಓದಿ:  ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...