Homeಕರ್ನಾಟಕಬಳ್ಳಾರಿ ವಿವಿ: ಶುಲ್ಕ ಪಾವತಿಸಿದರೂ ಸುಲಿಗೆ- ವಿದ್ಯಾರ್ಥಿಗಳ ಆರೋಪ

ಬಳ್ಳಾರಿ ವಿವಿ: ಶುಲ್ಕ ಪಾವತಿಸಿದರೂ ಸುಲಿಗೆ- ವಿದ್ಯಾರ್ಥಿಗಳ ಆರೋಪ

- Advertisement -
- Advertisement -

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಗಳನ್ನು ವಿತರಿಸಲು ಬಳ್ಳಾರಿ ವಿವಿ ವ್ಯಾಪ್ತಿಯ ಕಾಲೇಜುಗಳು ತೊಂದರೆ ನೀಡುತ್ತಿವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆರೋಪಿಸಿದೆ.

ಬಳ್ಳಾರಿ ವಿವಿ ವ್ಯಾಪ್ತಿಯ ಕಾಲೇಜುಗಳ 2020-21ನೇ ಸಾಲಿನ ಪದವಿ, ಸ್ನಾತಕೋತ್ತರ  ವಿದ್ಯಾರ್ಥಿಗಳಿಗೆ 6 ತಿಂಗಳಾದರೂ ಅಂಕಪಟ್ಟಿ ನೀಡಿರುವುದಿಲ್ಲ. ದಾಖಲಾತಿ ಸಂದರ್ಭದಲ್ಲಿ ಶುಲ್ಕ ಪೂರ್ತಿಯಾಗಿ ಭರಿಸಿಲ್ಲ ಎನ್ನುವ ನೆಪ ಹೇಳಲಾಗುತ್ತಿದೆ. ಸರ್ಕಾರದಿಂದ ಯಾವುದೇ ರೀತಿಯ ದುಡ್ಡು ಬಂದಿಲ್ಲ ಎಂದು ಅಂಕಪಟ್ಟಿಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಅಸಲಿಗೆ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಸಂದರ್ಭದಲ್ಲಿ ವಿವಿ/ಕಾಲೇಜುಗಳು ಹೊರಡಿಸಿದ ಆದೇಶದಂತೆಯೇ ಶುಲ್ಕ ಪಾವತಿ ಮಾಡಿದ್ದಾರೆ. ಇದೀಗ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಪಡೆಯಲು ಅಂಕಪಟ್ಟಿ ಇಲ್ಲದೆ ತೊಂದರೆ ಆಗುತ್ತಿದೆ‌. ಅಲ್ಲದೇ ಪದವಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಪ್ರವೇಶಾತಿಗೂ ಅಡಚಣೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿವಿ ಅಥವಾ ಕಾಲೇಜಿನ ಹಣದ ಕೊರತೆಯನ್ನು ಬಡ ವಿದ್ಯಾರ್ಥಿಗಳ ಮೇಲೆ, ಪೋಷಕರ ಮೇಲೆ ಹಾಕುತ್ತಿರುವುದು ಅತ್ಯಂತ ಅಮಾನವೀಯ ನಡೆ. ಪ್ರವೇಶ ಸಂದರ್ಭದಲ್ಲಿ ಒಂದು ರೀತಿ, ಅಂಕ ಪಟ್ಟಿ ನೀಡುವಾಗ ಮತ್ತೊಂದು ನೀತಿ ವರ್ತಿಸುತ್ತಿರುವುದು ವಿದ್ಯಾರ್ಥಿಗಳಿಗೆ ಮಾಡುವ ಮೋಸವಾಗಿದೆ‌ ಎಂದು ಕೆವಿಎಸ್‌ ಆಕ್ರೋಶ ಹೊರಹಾಕಿದೆ.

ಪ್ರೊತ್ಸಾಹ ಧನ ಮತ್ತು ಶೈಕ್ಷಣಿಕ ಜೀವನವನ್ನು ಗಮನದಲ್ಲಿಟ್ಟುಕೊಂಡು ಈ ಕೂಡಲೇ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನೀಡಿ ವಿದ್ಯಾರ್ಥಿ ಹಿತ ಕಾಯಬೇಕು. ಒಂದು ವೇಳೆ ಅಂಕಪಟ್ಟಿಗಳನ್ನು ಕೊಡದಿದ್ದರೆ ಮುಂದೆ ಎಲ್ಲಾ ವಿದ್ಯಾರ್ಥಿಗಳು ಸೇರಿ ಕಾಲೇಜು ಮತ್ತು ವಿಶ್ವವಿದ್ಯಾಲಯದ ಮುಂದೆ ದೊಡ್ಡ ಹೋರಾಟ ನಡೆಸುತ್ತೇವೆ ಎಂದು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಪತ್ರ ಕೊಡಲಾಯಿತು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತ ದುರುಗೇಶ್ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಯ ಕುಲಪತಿಯವರಿಗೆ ಮನವಿ ಮಾಡಲಾಗುವುದು. ಪ್ರಾಂಶುಪಾಲರು ವಿದ್ಯಾರ್ಥಿಗಳ ಹಿತ ಕಾಯದಿದ್ದರೆ ಹೋರಾಟ ರೂಪಿಸಲಾಗುವುದು. ಶುಲ್ಕ ಪಾವತಿಸುವಂತೆ ಪೀಡಿಸುತ್ತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವುದು ಅಕ್ಷಮ್ಯ” ಎಂದರು.

ವಿದ್ಯಾರ್ಥಿ ಮುಖಂಡರಾದ ಶರಣಪ್ಪ, ಪಂಪಾಪತಿ, ಕಾಳಿಂಗರಾಜು, ಹನುಮರೆಡ್ಡಿ, ಭೀಮಪ್ಪ, ಯಮನೂರು ಮತ್ತಿತರು ಹಾಜರಿದ್ದರು.


ಇದನ್ನೂ ಓದಿರಿ: ಡಾ. ಸುಧಾಕರ್ ಅವರೇ, ವಿಜ್ಞಾನಿ ಮತ್ತು ಜ್ಯೋತಿಷಿ ಇಬ್ಬರೂ ಸಮರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ವಿ.ವಿ. ಯಲ್ಲೂ ಇದೇ ಮಾದರಿಯಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳಿಂದ ಹಣ ಪೀಕುತ್ತಾರೆ.

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...