Homeಮುಖಪುಟಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು!

ಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅದ್ಭುತ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿದ ನಡುವೆ, ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದವರ ಪೈಕಿ 11 ಮಂದಿ ಸೋಲು ಕಂಡಿದ್ದಾರೆ.

ಹಿಂದಿನ ಸರ್ಕಾರದ ಒಟ್ಟು 47 ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಸೋಲು ದೊಡ್ಡ ಆಘಾತ ನೀಡಿದರೆ, ಶಿಕ್ಷಣ, ಕಬ್ಬು ಮತ್ತು ಗ್ರಾಮೀಣಾಭಿವೃದ್ಧಿಯ ಉಸ್ತುವಾರಿ ಸಚಿವರು ಅನೇಕ ಪ್ರಮುಖ ನಾಯಕರು ಸೋಲಿನ ಕಹಿ ಅನುಭವಿಸಿದ್ದಾರೆ. ಸತೀಶ್ ಚಂದ್ರ ದ್ವಿವೇದಿ, ಸಂಗೀತಾ ಬಲ್ವಂತ್ ಬಿಂದ್, ಛತ್ರಪಾಲ್ ಗಂಗ್ವಾರ್, ಸುರೇಶ್ ರಾಣಾ ಮತ್ತು ರಾಜೇಂದ್ರ ಪ್ರತಾಪ್ ಸಿಂಗ್ ‘ಮೋತಿ ಸಿಂಗ್’ ಅವರೂ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಸೋತ ಬಹುತೇಕ ಬಿಜೆಪಿ ಸಚಿವರು ಸಮಾಜವಾದಿ ಪಕ್ಷದ ಅಭ್ಯರ್ಥಿಗಳಿಂದ ಪರಾಭವಗೊಂಡಿದ್ದಾರೆ. ಮೌರ್ಯ ಅವರ ಸೋಲು ಬಿಜೆಪಿಯೊಳಗೆ ಚರ್ಚೆಗೆ ಗ್ರಾಸವಾಗಿದೆ. ಆದಿತ್ಯನಾಥ್ ಸರ್ಕಾರದಲ್ಲಿದ್ದ ಹಿಂದುಳಿದ ವರ್ಗಗಳ ಸಮುದಾಯದ ಬಹುದೊಡ್ಡ ನಾಯಕರಾದ ಕೇಶವ್ ಪ್ರಸಾದ್ ಮೌರ್ಯ, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ  ಹೌದು.

ಕೇಶವ್ ಪ್ರಸಾದ್ ಮೌರ್ಯ

ಕೌಶಂಬಿ ಜಿಲ್ಲೆಯ ಸಿರತು ಕ್ಷೇತ್ರದಲ್ಲಿ ಅಪ್ನಾ ದಳ (ಕಾಮರ್‌ವಾಡಿ) ನಾಯಕಿ ಡಾ. ಪಲ್ಲವಿ ಪಟೇಲ್‌ರಿಂದ ಮೌರ್ಯ ಸೋಲು ಕಂಡಿದ್ದಾರೆ. ಪಲ್ಲವಿ ಪಟೇಲ್ 7,337 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಪ್ನಾ ದಳವು ಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ.

ಕಬ್ಬು ಅಭಿವೃದ್ಧಿ ಮತ್ತು ಕಬ್ಬಿನ ಗಿರಣಿಗಳ ಕೈಗಾರಿಕಾ ಅಭಿವೃದ್ಧಿಯ ಕ್ಯಾಬಿನೆಟ್ ಸಚಿವ ಸುರೇಶ್ ಕುಮಾರ್ ರಾಣಾ ಅವರು ಠಾಣಾ ಭವನ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಅಶ್ರಫ್ ಅಲಿ ಖಾನ್ ವಿರುದ್ಧ 10,806 ಮತಗಳ ಅಂತರದಿಂದ ಸುರೇಶ್‌ಕುಮಾರ್ ಸೋಲು ಕಂಡಿದ್ದಾರೆ. ಆರ್‌ಎಲ್‌ಡಿ ಪಕ್ಷವು ಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡಿದೆ.

ಗ್ರಾಮೀಣಾಭಿವೃದ್ಧಿ ಸಚಿವ ರಾಜೇಂದ್ರ ಪ್ರತಾಪ್ ಸಿಂಗ್ ‘ಮೋತಿ ಸಿಂಗ್’ ಅವರು ಪ್ರತಾಪ್‌ಗಢದ ಪಟ್ಟಿ ಕ್ಷೇತ್ರದಲ್ಲಿ ಎಸ್‌ಪಿಯ ರಾಮ್ ಸಿಂಗ್ ವಿರುದ್ಧ 22,051 ಮತಗಳ ಅಂತರದಲ್ಲಿ ಸೋತಿದ್ದಾರೆ.

ಎಸ್‌ಪಿಯ ಹಿರಿಯ ನಾಯಕ, ಉತ್ತರ ಪ್ರದೇಶ ವಿಧಾನಸಭೆಯ ಮಾಜಿ ಸ್ಪೀಕರ್ ಮಾತಾ ಪ್ರಸಾದ್ ಪಾಂಡೆ ಅವರು ಬಿಜೆಪಿ ಸಚಿವ ಸತೀಶ್ ಚಂದ್ರ ದ್ವಿವೇದಿ ಅವರನ್ನು ಸಿದ್ಧಾರ್ಥನಗರ ವ್ಯಾಪ್ತಿಯಲ್ಲಿ ಬರುವ ಇಟ್ವಾ ಕ್ಷೇತ್ರದಲ್ಲಿ 1,662 ಮತಗಳ ಅಂತರದಿಂದ ಸೋಲಿಸಿದ್ದಾರೆ. ದ್ವಿವೇದಿ ಅವರು ಆದಿತ್ಯನಾಥ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣದ ರಾಜ್ಯ ಸಚಿವರಾಗಿದ್ದರು.

ಸಂಸದೀಯ ವ್ಯವಹಾರಗಳು, ಗ್ರಾಮೀಣಾಭಿವೃದ್ಧಿ ಮತ್ತು ಸಮಗ್ರ ಗ್ರಾಮಾಭಿವೃದ್ಧಿಯ ಕಿರಿಯ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರು ಬಲ್ಲಿಯಾ ಜಿಲ್ಲೆಯ ಬೈರಿಯಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್‌ಪಿ ಅಭ್ಯರ್ಥಿ ಜೈಪ್ರಕಾಶ್ ಅಂಚಲ್ ವಿರುದ್ಧ ಶುಕ್ಲಾ ಅವರು 12,951 ಮತಗಳಿಂದ ಸೋತಿದ್ದಾರೆ.

ಲೋಕೋಪಯೋಗಿ ಖಾತೆ ರಾಜ್ಯ ಸಚಿವರಾದ ಚಂದ್ರಿಕಾ ಪ್ರಸಾದ್ ಉಪಾಧ್ಯಾಯ ಅವರು ಚಿತ್ರಕೂಟ ಕ್ಷೇತ್ರದಲ್ಲಿ ಎಸ್‌ಪಿಯ ಅನಿಲ್ ಕುಮಾರ್ ವಿರುದ್ಧ 20,876 ಮತಗಳ ಅಂತರದಿಂದ ಸೋತಿದ್ದಾರೆ.

ಕಂದಾಯ ಖಾತೆಯ ರಾಜ್ಯ ಸಚಿವ ಛತ್ರಪಾಲ್ ಸಿಂಗ್ ಅವರು ಬರೇಲಿಯ ಬಹೇರಿ ಸ್ಥಾನವನ್ನು ಎಸ್‌ಪಿಯ ಅತೌರ್ ರೆಹಮಾನ್ ವಿರುದ್ಧ ಸೋಲು ಕಂಡಿದ್ದಾರೆ. ಸಿಂಗ್ ಅವರನ್ನು ರೆಹಮಾನ್ 3,355 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಿರಿಯ ಸಚಿವ ರಣವೇಂದ್ರ ಸಿಂಗ್ ಅವರು ಫತೇಪುರ್ ಜಿಲ್ಲೆಯ ಹುಸೈಂಗಂಜ್ ಕ್ಷೇತ್ರವನ್ನು ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಎಸ್‌ಪಿಯ ಉಷಾ ಮೌರ್ಯ ಅವರು 25,181 ಮತಗಳ ಅಂತರದಿಂದ ಗೆದ್ದಿದ್ದಾರೆ.

ಮತ್ತೊಬ್ಬ ಕಿರಿಯ ಸಚಿವರಾದ ಡಾ. ಸಂಗೀತಾ ಬಲವಂತ್ ಅವರು ಗಾಜಿಪುರ ಕ್ಷೇತ್ರದಿಂದ 1,692 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಸಂಗೀತಾ ಅವರು ಸಹಕಾರಿ ಖಾತೆಯ ರಾಜ್ಯ ಸಚಿವರಾಗಿದ್ದರು. ಎಸ್‌ಪಿಯ ಜೈ ಕಿಶನ್ ಸಾಹು ಅವರು ಗೆಲುವು ಸಾಧಿಸಿದ್ದಾರೆ.

ಕಿರಿಯ ಕೃಷಿ ಸಚಿವರಾದ ಲಖನ್ ಸಿಂಗ್ ರಜಪೂತ್ ಅವರು ದಿಬಿಯಾಪುರದಲ್ಲಿ ಎಸ್ಪಿಯ ಅಭ್ಯರ್ಥಿ ಪ್ರದೀಪ್ ಕುಮಾರ್ ಯಾದವ್ ವಿರುದ್ಧ ಸೋಲು ಕಂಡಿದ್ದಾರೆ. ರಜಪೂತ್ ಅವರು ಕೇವಲ 473 ಮತಗಳ ಅಂತರದಿಂದ ಪರಾಜಿತರಾಗಿದ್ದಾರೆ. ಕ್ರೀಡೆ, ಯುವಜನ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಚಿವ ಉಪೇಂದ್ರ ತಿವಾರಿ ಅವರು ಫೆಫ್ನಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎಸ್ಪಿಯ ಸಂಗ್ರಾಮ್ ಸಿಂಗ್ ಅವರು 19,354 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಚುನಾವಣೆ ಒಂದು ತಿಂಗಳು ಬಾಕಿ ಇರುವಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಸ್‌ಪಿಗೆ ಸೇರ್ಪಡೆಯಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಮೌರ್ಯ ಮತ್ತು ಸೈನಿ ಅವರು ಕ್ರಮವಾಗಿ ಕುಶಿನಗರದ ಫಾಜಿಲ್‌ನಗರ, ಸಹರಾನ್‌ಪುರ ಜಿಲ್ಲೆಯ ನಾಕುರ್‌ನಿಂದ ಸ್ಪರ್ಧಿಸಿ ಸೋತಿದ್ದಾರೆ. ಒಬಿಸಿ ಸಮುದಾಯದ ನಾಯಕರಾಗಿರುವ ಮೌರ್ಯ ಅವರನ್ನು ಬಿಜೆಪಿ ಅಭ್ಯರ್ಥಿ ಸುರೇಂದ್ರ ಕುಮಾರ್ ಕುಶ್ವಾಹ ಅವರು ಫಾಜಿಲ್‌ನಗರದಲ್ಲಿ 45,580 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದರು. ಆದಿತ್ಯನಾಥ್ ಅವರ ಸಂಪುಟದಲ್ಲಿ ಮೌರ್ಯ ಕಾರ್ಮಿಕ ಸಚಿವರಾಗಿದ್ದರು.

ಸೈನಿ ಕೂಡ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಮುಖೇಶ್ ಚೌಧರಿ ವಿರುದ್ಧ 315 ಮತಗಳ ಅಂತರದಿಂದ ಪರಾಭವಗೊಂಡರು. ಸೈನಿ ಅವರು ಆಹಾರ ಭದ್ರತೆ ಮತ್ತು ಔಷಧ ನಿರ್ವಹಣೆಯ ಸಚಿವರಾಗಿದ್ದರು.


ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...