Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...