Homeಮುಖಪುಟಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ...

ಮಹಾರಾಷ್ಟ್ರ: ಶರದ್ ಪವಾರ್‌ಗೆ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದ ಬಿಜೆಪಿ ಶಾಸಕರ ಮೇಲೆ ಪ್ರಕರಣದ ದಾಖಲು

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆ ಎಂದು ಹೇಳಿಕೆ ನೀಡಿದ ಮಹಾರಾಷ್ಟ್ರದ ಬಿಜೆಪಿ ಶಾಸಕರಾದ ನಿತೇಶ್ ರಾಣೆ ಮತ್ತು ಅವರ ಸಹೋದರರಾದ ನಿಲೇಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ.

ಕಳೆದ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ ನಿತೇಶ್ ರಾಣೆ, “ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿಯ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಬಂಧಿಸಿದ್ದರೂ ಶರದ್ ಪವಾರ್ ಏಕೆ ಅವರ ರಾಜೀನಾಮೆ ಕೇಳಿಲ್ಲ” ಎಂದು ಪ್ರಶ್ನಿಸಿದ್ದರು. ಮುಂದುವರೆದು ಶರದ್ ಪವಾರ್ ಭಾರತದಿಂದ ಪರಾರಿಯಾಗಿರುವ ದಾವೂದ್ ಇಬ್ರಾಹಿಂಗೆ ಸಹ ಸಹಾಯ ಮಾಡುತ್ತಾರೆ ಎಂದು ಆರೋಪಿಸಿದ್ದರು.

ಶರದ್ ಪವಾರ್‌ರವರು ನವಾಬ್ ಮಲಿಕ್ ರಾಜೀನಾಮೆ ಏಕೆ ಪಡೆದಿಲ್ಲ? ಶರದ್ ಪವಾರ್ ಮತ್ತು ದಾವೂದ್ ಇಬ್ರಾಹಿಂ ನಡುವೆ ಸಂಬಂಧವಿದೆಯೆ? ಶರದ್ ಪವಾರ್ ದಾವೂದ್ ಇಬ್ರಾಹಿಂ ಪರ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ನನಗೆ ಸಂದೇಹವಿದೆ. ಮಹಾರಾಷ್ಟ್ರ ಸರ್ಕಾರ ಮತ್ತು ಶರದ್ ಪವಾರ್ ಜಿ ಅವರಿಗೆ ದಾವೂದ್ ಇಬ್ರಾಹಿಂ ಬಗ್ಗೆ ತುಂಬಾ ಪ್ರೀತಿ ಇದ್ದರೆ, ಅವರು ತಮ್ಮ ಕ್ಯಾಬಿನ್‌ನಿಂದ ಗಾಂಧೀಜಿ ಫೋಟೋ ತೆಗೆದು ದಾವೂದ್ ಇಬ್ರಾಹಿಂ ಫೋಟೊ ಹಾಕಿಕೊಳ್ಳಲಿ. ನಾವು ಈ ಸರ್ಕಾರವನ್ನು ಬಯಲಿಗೆಳೆದುದ್ದಕ್ಕೆ ನಮ್ಮ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ನಿಲೇಶ್ ರಾಣೆ ಹೇಳಿದ್ದರು.

ಎನ್‌ಸಿಪಿ ಪದಾಧಿಕಾರಿ ಶ್ರೀನಿವಾಸ್ ಅವರ ನೀಡಿದ ದೂರಿನ ಆಧಾರದ ಮೇಲೆ ಈ ಸಹೋದರರ ವಿರುದ್ಧ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ 120-ಬಿ (ಕ್ರಿಮಿನಲ್ ಪಿತೂರಿ), 499 (ಮಾನನಷ್ಟ), 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ ನಿತೇಶ್ ರಾಣೆ ಮತ್ತ ನಿಲೇಶ್ ರಾಣೆ ಸಹೋದರರು ಶರದ್ ಪವಾರ್ ವಿರುದ್ಧ ಮಾತನಾಡಿರುವ ಕೆಲವು ವಿಡಿಯೋ ತುಣುಕುಗಳನ್ನು ದೂರುದಾರರು ಪೊಲೀಸರಿಗೆ ಸಲ್ಲಿಸಿದ್ದಾರೆ.

ಈ ಕುರಿತು ಇಂದು ಪ್ರತಿಕ್ರಿಯಿಸಿರುವ ಶಾಸಕ ನಿತೇಶ್ ರಾಣೆ, “ನಾವು ಯಾವ ಅಪರಾಧ ಮಾಡಿದ್ದೀವಿ ಎಂದು ನಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಗೊತ್ತಿಲ್ಲ. ನಾವು ಗಲಭೆ ಸೃಷ್ಟಿಸುವ ಕೆಲಸ ಮಾಡಿಲ್ಲ. ನಾವು ಹಿಂದುತ್ವದ ಪರ ಮಾತನಾಡುವುದು ತಪ್ಪೆ? ತಪ್ಪೆಂದರೆ ಅದನ್ನು 100 ಸಲ ಮಾಡಲು ಸಿದ್ದರಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ಮುಕ್ ಹಿಂದೂ ಎನ್ನುವ ಕಾರಣಕ್ಕೆ ರಾಜೀನಾಮೆ ಪಡೆಯಲಾಯಿತೆ? ಮುಸ್ಲಿಂ ನವಾಬ್ ಮಲ್ಲಿಕ್ ರಾಜೀನಾಮೆ ಏಕೆ ಪಡೆಯುವುದಿಲ್ಲ ಎಂದು ನಾನು ಪ್ರಶ್ನಿಸಿದೆ. ಆತ ಮುಸ್ಲಿಮ್ ಆದ ಕಾರಣ ದಾವೂದ್ ಇಬ್ರಾಹಿಂ ಜೊತೆ ಸಂಬಂಧವಿದೆಯೇ ಎಂದು ಪ್ರಶ್ನಿಸಿದ್ದು ತಪ್ಪೆ ಎಂದು ನಿತೇಶ್ ರಾಣೆ ಹೇಳಿದ್ದಾರೆ.


ಇದನ್ನೂ ಓದಿ: ಪೋನ್ ಕದ್ದಾಲಿಕೆ ಪ್ರಕರಣ: ಇಂದು ದೇವೇಂದ್ರ ಫಡ್ನಾವಿಸ್‌ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...