Homeಕರ್ನಾಟಕನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ಕಾಂಗ್ರೆಸ್‌ ಬೆಂಬಲದಿಂದ ಪಿಎಂ, ಸಿಎಂ ಆದವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ: ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಾಗ್ದಾಳಿ

- Advertisement -
- Advertisement -

“ನಮ್ಮದು ಗಾಂಧೀಜಿ ಹಿಂದುತ್ವ, ಇತರ ಪಕ್ಷಗಳದ್ದು ಗೋಡ್ಸೆ ಹಿಂದುತ್ವ” ಎಂದು ಮಾಜಿ ಸಚಿವ, ಸಹಕಾರಿ ಕ್ಷೇತ್ರದ ಧುರೀಣ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ರೈತರ ಬಗರ್‌ ಹುಕುಂ ಸಾಗುವಳಿ ಜಮೀನುಗಳನ್ನು ಬಲವಂತವಾಗಿ ಕಸಿದುಕೊಳ್ಳುವ ಅರಣ್ಯ ಇಲಾಖೆ ಹಾಗೂ ಸರ್ಕಾರದ ಹುನ್ನಾರದ ವಿರುದ್ಧ ಮಧುಗಿರಿ ತಾಲ್ಲೂಕಿನ ಬಂದ್ರೇಹಳ್ಳಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.

ಹಿಂದುತ್ವದ ಬಗ್ಗೆ ಮಾತನಾಡುವವರಿಗೆ ಹೇಳುತ್ತೇನೆ. ನಾವು ಎಲ್ಲರೂ ಹಿಂದೂಗಳೇ. ನಾವೇನು ಕ್ರಿಶ್ಚಿಯನ್‌, ಪಾರ್ಸಿ ಮತ್ಯಾವುದೋ ಧರ್ಮದವರಲ್ಲ. ಆದರೆ ನಾವು ಪ್ರತಿಪಾದನೆ ಮಾಡುವುದು ಮಹಾತ್ಮ ಗಾಂಧೀಜಿಯವರ ಹಿಂದುತ್ವ. ಬೇರೆ ಪಕ್ಷದವರು ಪ್ರತಿಪಾದನೆ ಮಾಡುವುದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವನ್ನು ನಾವು ವಿರೋಧ ಮಾಡಲೇಬೇಕು. ಗಾಂಧಿಯ ಹಿಂದುತ್ವದ ಜನರು ನಾವಾಗಬೇಕು ಎಂದು ಹೇಳಿದ್ದಾರೆ.

ಗೋಡ್ಸೆ ಹಿಂದುತ್ವವನ್ನು ತೋರಿಸಿ ಹಿಂದೂಗಳೆಲ್ಲ ಒಂದೇ ಎನ್ನುವವರು, ಪರಿಶಿಷ್ಟ ಜಾತಿಯವರನ್ನಾಗಲೀ, ನಮ್ಮೊಂದಿಗಾಗಲೀ ಸಂಬಂಧ ಮಾಡಲಿ ನೋಡೋಣ.  ವೋಟ್‌ಗಾಗಿ ಮಾತ್ರ ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ. ಚೀನಾದವರು ಬಂದು ಇಂಡಿಯಾ ದೇಶದಲ್ಲಿ ಕೂತಿದ್ದಾರಲ್ಲ, 58 ಇಂಚಿನ ಎದೆಯವರು, ದೇಶಭಕ್ತರು ಹೋಗಿ ಅವರನ್ನು ಓಡಿಸಲಿ. ದೇಶಭಕ್ತಿಯನ್ನು ಇಲ್ಲಿ ತೋರಿಸುವುದಲ್ಲ ಎಂದು ಟೀಕಿಸಿದ್ದಾರೆ.

ಹಿಂದುತ್ವದ ಆಧಾರದ ಮೇಲೆ ಜಾತಿ, ಜಾತಿಗಳನ್ನು ಎತ್ತಿಕಟ್ಟಲಾಗುತ್ತಿದೆ. ಐದು ರಾಜ್ಯಗಳಲ್ಲಿ ಗೆದ್ದಿರಬಹುದು. ಅದು ಬೇರೆ ವಿಚಾರ. ವಿರೋಧ ಪಕ್ಷಗಳ ಲೋಪಗಳೂ ಇದಕ್ಕೆ ಕಾರಣವಾಗಿರುತ್ತವೆ. ಆದರೆ ಈ ದೇಶವನ್ನು, ಜನರನ್ನು ಒಡೆಯುವುದು, ದ್ವೇಶವನ್ನು ಹುಟ್ಟುಹಾಕುವುದು ದೇಶಕ್ಕೆ ಅಪಾಯ ಎಂದು ಎಚ್ಚರಿಸಿದ್ದಾರೆ.

ದೇವೇಗೌಡರನ್ನು ಸೆಕ್ಯುಲರ್‌ ಫ್ಯಾಬ್ರಿಕ್ ಅಂತಾರೆ. ಈ ಪದವನ್ನು ಎಲ್ಲಿಂದ ಹಿಡಿದುಕೊಂಡು ಬಂದರೋ ಗೊತ್ತಿಲ್ಲ. ಸೆಕ್ಯೂಲರ್‌ ಫ್ಯಾಬ್ರಿಕ್ ಅಂದರೆ ಏನಪ್ಪ? ಅಲ್ಲಿ ಹೋಗಿ ಮೋದಿಯನ್ನು ಭೇಟಿ ಮಾಡ್ತಾರೆ, ಇಲ್ಲಿ ಗೋ ಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್‌ನಲ್ಲಿ ಬೆಂಬಲ ಕೊಟ್ಟು ಪಾಸ್ ಮಾಡಿಸುತ್ತಾರೆ. ನಂತರ ಮೌರ್ಯ ಸರ್ಕಲ್‌ನಲ್ಲಿ ಕೂತು ಮಸೂದೆ ವಿರುದ್ಧವಾಗಿ ಧರಣಿ ಮಾಡ್ತಾರೆ. ಈ ರೀತಿಯ ಇಬ್ಬಂದಿ ರಾಜಕಾರಣ ಮಾಡುವುದರಿಂದ ದೇಶಕ್ಕೆ ಅಪಾಯವಿದೆ ಎಂದಿದ್ದಾರೆ.

ಹಾನಗಲ್‌, ಬಸವ ಕಲ್ಯಾಣ, ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್‌ನವರು ಮುಸ್ಲಿಮರಿಗೆ ಟಿಕೆಟ್ ನೀಡಿತು. ರಾಮನಗರದಲ್ಲಿ, ಚೆನ್ನಪಟ್ಟಣದಲ್ಲಿ ಮುಸ್ಲಿಮರು ಹೆಚ್ಚಿದ್ದಾರೆ, ಅಲ್ಲಿ ಜೆಡಿಎಸ್ ಮುಸ್ಲಿಮರಿಗೆ ಟಿಕೆಟ್ ಕೊಡಲಿ. ಕಡಿಮೆ ಸಂಖ್ಯೆಯಲ್ಲಿರುವಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿ, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ದರೂ ಜನ ಮತ ಹಾಕಲಿಲ್ಲ ಅನ್ನುತ್ತಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದವರು ಕಾಂಗ್ರೆಸ್‌ ಪಕ್ಷವನ್ನೇ ನಾಶ ಮಾಡುತ್ತೇನೆ ಎನ್ನುತ್ತಾರೆ. 13 ಜನ ಇದ್ದರೆ ಮಾತ್ರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯ. 37 ಜನ ಎಂಎಲ್‌ಎಗಳಿದ್ದರೂ ಕಾಂಗ್ರೆಸ್‌ ಬೆಂಬಲದಿಂದಾಗಿ ಮುಖ್ಯಮಂತ್ರಿಯಾದರು. ಅಧಿಕಾರ ಹೋದ ತಕ್ಷಣ ಕಾಂಗ್ರೆಸ್‌ ಮುಗಿಸುತ್ತೇನೆ ಅಂತಾರೆ. ಇವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ. 274 ಜನ ಎಂಪಿಗಳಿದ್ದರೆ ಮಾತ್ರ ಪ್ರಧಾನಿಯಾಗಲು ಸಾಧ್ಯ. 16 ಜನ ಸದಸ್ಯರಿದ್ದರೂ ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದರು. ಈಗ ಕಾಂಗ್ರೆಸ್ ಮುಗಿಸುತ್ತೇನೆ ಎಂದರೆ ಇವರಿಗೆ ಉಪಕಾರ ಸ್ಮರಣೆ ಇದೆಯಾ? ಸುಳ್ಳು ಹೇಳಿಕೊಂಡು, ಜಾತಿ ಹೇಳಿಕೊಂಡು ಇರುವವರಿಗೆ ಯಶಸ್ಸು ದೊರಕುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

2023ರ ಚುನಾವಣೆಯಲ್ಲಿ ಮತ ಕೇಳಲು ಬಂದಿಲ್ಲ. ಚುನಾವಣೆಯಲ್ಲಿ ಮತ ಕೇಳಿ ಎಂಎಲ್‌ಎ ಆಗಬಹುದು. ಎಂಎಲ್‌ಎ ಎಂದು ಕರೆಸಿಕೊಳ್ಳುವ ಚಟವಿಲ್ಲ. ಜನರ ಹೃದಯದಲ್ಲಿ ಸ್ಥಾನ ಬಯಸುತ್ತೇನೆ. ವಿಧಾನಸಭೆಯಲ್ಲಿ ಅಲ್ಲ. ಎಲ್ಲ ಅಪಪ್ರಚಾರದ ನಡುವೆ 70,000 ಮತದಾರರು ನನಗೆ ಮತ ಹಾಕಿದ್ದೀರಿ. ದುಡ್ಡು ಹಾಗೂ ಜಾತಿ ಮೀರಿ ಬೆಂಬಲ ನೀಡಿದ್ದೀರಿ. ದುಡ್ಡಿದ್ದರೆ ಸಾಕು ಮಧುಗಿರಿಯಲ್ಲಿ ಗೆದ್ದು ಬಿಡ್ತಾರೆ ಎಂಬ ಭಾವನೆ ಹೊರಗಡೆ ಬೆಳೆದುಬಿಟ್ಟಿದೆ. ಇದನ್ನು ಹೋಗಲಾಡಿಸಬೇಕು ಎಂದು ಮನವಿ ಮಾಡಿದ್ದಾರೆ.

2008ರಲ್ಲಿ 500 ಮತಗಳ ಅಂತರದಲ್ಲಿ ಸೋಲು ಕಂಡೆ. ಅದಕ್ಕೆ ಕಾರಣಗಳು ಬೇರೆ ಇರಬಹುದು. ಮುಂದಿನ ಚುನಾವಣೆಯಲ್ಲಿ 1,000 ಮತಗಳ ಅಂತರದಲ್ಲಿ ಸೋತೆ. ನನಗೆ ಆಗಲೂ ಬೇಸರವಾಗಲಿಲ್ಲ. 2018 ಸೋತ ಮೇಲೆ ಮತ್ತೆ ಚುನಾವಣೆಯತ್ತ ತಲೆಯೂ ಹಾಕಬಾರದು ಎಂದುಕೊಂಡಿದ್ದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲ ಗೌರವ ತಂದಿರಿ. ನಾವು ಬಿಜೆಪಿಗೆ ಮತ ಹಾಕಿಸಿಲ್ಲ. ಆದರೆ ಜಿ.ಎಸ್‌.ಬಸವರಾಜು ಅವರಿಗೆ ಮತ ಹಾಕಿಸಿದೆವು ಅಷ್ಟೇ. ಯಾಕೆಂದರೆ ಬಸವರಾಜು ಅವರು ಹಳೆಯ ಕಾಂಗ್ರೆಸ್ಸಿಗರು. ಅವರು ಜನಪರವಾಗಿರುತ್ತಾರೆಂದು ಮತ ಹಾಕಿಸಿದ್ದೇವೆ. ಅದರಲ್ಲಿ ಎರಡನೇ ಮಾತಿಲ್ಲ. ಬಸವರಾಜು ಬಿಜೆಪಿಯವರು ಎಂದು ನಾವು ಭಾವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್ ವಿವಾದದ ಸುತ್ತ ದ್ವೇಷದ ಹುತ್ತ; ಹಿಂದುತ್ವದಲ್ಲಿ ಬಿರುಕು ಮತ್ತು ನಂಜಿನ ನೀರಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...