Homeಮುಖಪುಟಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಗೆಲುವು ನ್ಯಾಯಯುತವಲ್ಲ: ಮಾಜಿ ಬಿಜೆಪಿ ನಾಯಕ

ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಗೆಲುವು ನ್ಯಾಯಯುತವಲ್ಲ: ಮಾಜಿ ಬಿಜೆಪಿ ನಾಯಕ

- Advertisement -
- Advertisement -

ಪಶ್ಚಿಮ ಬಂಗಾಳದ 2021 ರ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವು ಸಾಧಿಸಿದ್ದು ನ್ಯಾಯಯುತವಲ್ಲ ಎಂದು ಹೇಳುವ ಮೂಲಕ ಹಿರಿಯ ನಾಯಕ ಜಾಯ್ ಪ್ರಕಾಶ್ ಮಜುಂದಾರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಬಿಜೆಪಿ ನಾಯಜಕ ಸುವೇಂದು ಅಧಿಕಾರಿ ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿರಿಯ ನಾಯಕ ಜಾಯ್ ಪ್ರಕಾಶ್ ಮಜುಂದಾರ್ ಬಿಜೆಪಿಯನ್ನು ತೊರೆದು ಟಿಎಂಸಿಗೆ ಸೇರ್ಪಡೆಯಾದ ಕೆಲವೇ ದಿನಗಳಲ್ಲಿ ಈ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಯನ್ನು ಮಾಜಿ ರಾಜ್ಯ ಸಚಿವ ರಾಜೀವ್ ಬಂಡೋಪಾಧ್ಯಾಯ ಕೂಡ ಪುಷ್ಟಿಕರಿಸಿದ್ದಾರೆ.

ಜಾಯ್ ಪ್ರಕಾಶ್ ಮಜುಂದಾರ್ ಅವರನ್ನು “ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ” ಜನವರಿಯ ಕೊನೆಯ ವಾರದಲ್ಲಿ ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು.

“ನಂದಿಗ್ರಾಮ ಗೆಲ್ಲಲು ಹಲವು ತಂತ್ರಗಳನ್ನು ಬಳಸಬೇಕಾಯಿತು ಎಂದು ಮೇ 2 ರ ರಾತ್ರಿ ಸುವೇಂದು ಅಧಿಕಾರಿ ಹೇಳಿದ್ದು ನನಗೆ ನೆನಪಿದೆ” ಎಂದು ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಯವರ ತೀವ್ರ ಟೀಕಾಕಾರರಾಗಿದ್ದ ಟಿಎಂಸಿಯ ನೂತನ ಉಪಾಧ್ಯಕ್ಷ, ಜಾಯ್ ಪ್ರಕಾಶ್ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸದಂತೆ ಸುವೇಂದುಗೆ ಬಿಜೆಪಿ ನಾಯಕರ ಮನವಿ

“ನಂದಿಗ್ರಾಮ್‌ನಲ್ಲಿ ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿರಲಿಲ್ಲ. ಮಮತಾ ಬ್ಯಾನರ್ಜಿಯವರನ್ನು ಆರಂಭದಲ್ಲಿ ವಿಜೇತ ಎಂದು ಘೋಷಿಸಲಾಗಿತ್ತು, ಆದರೆ, ಕೈ ಚಳಕದಿಂದಾಗಿ ಸುವೇಂದು ಅಧಿಕಾರಿ ಇದ್ದಕ್ಕಿದ್ದಂತೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದರು” ಎಂದು ಮಜುಂದಾರ್ ಹೇಳಿದ್ದಾರೆ.

ಇನ್ನು, ದೊಮ್‌ಜೂರ್‌ನಿಂದ (Domjur) ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋಲುಕಂಡಿದ್ದ ಮಾಜಿ ರಾಜ್ಯ ಸಚಿವ ರಾಜೀವ್ ಬಂಡೋಪಾಧ್ಯಾಯ ಕೂಡ ಜಾಯ್ ಪ್ರಕಾಶ್ ಮಜುಂದಾರ್ ಅವರ ಹೇಳಿಕೆಗಳು 100 ಪ್ರತಿಶತ ನಿಜವೆಂದು ಪ್ರತಿಪಾದಿಸಿದ್ದಾರೆ. “ಸುವೇಂದು ಅಧಿಕಾರಿಯನ್ನು ನ್ಯಾಯಯುತವಾಗಿ ವಿಜೇತ ಎಂದು ಘೋಷಿಸಲಾಗಿಲ್ಲ ಎಂದು ನನಗೆ ತಿಳಿದಿದೆ. ಅದಕ್ಕೆ ನಾನು ಭರವಸೆ ನೀಡಬಲ್ಲೆ” ಎಂದಿದ್ದಾರೆ.

ನಾಯಕರ ವಿವಾದಿತ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಬಂಗಾಳಿ ಭಾಷೆಯಲ್ಲಿ ಟ್ವಿಟರ್ ಪೋಸ್ಟ್‌ ಮಾಡಿ, ತೃಣಮೂಲ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿಯನ್ನು “ಸುಲಿಗೆಕೋರ” ಪಕ್ಷ ನಡೆಸಿದ “ಪ್ರಹಸನ” ಎಂದು ಬಣ್ಣಿಸಿದ್ದಾರೆ. ಸತ್ಯೇಂದ್ರ ನಾಥ್ ದತ್ತಾ ಅವರ ಪ್ರಸಿದ್ಧ ಬಂಗಾಳಿ ಕವಿತೆಯನ್ನು ಹಂಚಿಕೊಂಡಿರುವ ಅವರು, ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.


ಇದನ್ನೂ ಓದಿ: ಬಿಜೆಪಿಯ ಗೆಲುವು ಜನಾದೇಶವಲ್ಲ; ಯಂತ್ರೋಪಕರಣಗಳ ಆದೇಶ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂದ್ರೆ ಬಿಜೆಪಿ ಇರುತ್ತಿದ್ದಿದ್ದರೆ ನ್ಯಾಯಸಮ್ಮತವಾಗಿ ಇದೆಯೇ………..,,?

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....