Homeಮುಖಪುಟಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿದ RLD ನಾಯಕ ಜಯಂತ್ ಚೌಧರಿ!

ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿದ RLD ನಾಯಕ ಜಯಂತ್ ಚೌಧರಿ!

ಆರ್‌ಎಲ್‌ಡಿ ಪಕ್ಷವು ಯುಪಿ ಚುನವಣೆಯಲ್ಲಿ ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಜೊತಗೆ ಮೈತ್ರಿ ಮಾಡಿಕೊಂಡಿತ್ತು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಆರ್‌ಎಲ್‌ಡಿ ನಾಯಕ ಜಯಂತ್‌‌ ಚೌಧರಿ ಅವರು, ರಾಜ್ಯದಲ್ಲಿ ತಮ್ಮ ಪಕ್ಷದ ಘಟಕಗಳನ್ನು ವಿಸರ್ಜಿಸುವ ಕುರಿತ ಘೋಷಣೆ ಮಾಡಿದ್ದಾರೆ.

ಜಯಂತ್ ಚೌಧರಿ ಅವರ ಘೋಷಣೆಯನ್ನು ಸೋಮವಾರ ತನ್ನ ಟ್ವಿಟರ್‌ನಲ್ಲಿ ಪ್ರಕಟಿಸಿರುವ ಆರ್‌ಎಲ್‌ಡಿ, “ರಾಷ್ಟ್ರೀಯ ಲೋಕದಳದ ರಾಷ್ಟ್ರೀಯ ಅಧ್ಯಕ್ಷ ಚೌಧರಿ ಜಯಂತ್ ಸಿಂಗ್ ಅವರ ಸೂಚನೆಯಂತೆ ರಾಜ್ಯ, ಪ್ರಾದೇಶಿಕ ಮತ್ತು ಜಿಲ್ಲಾ ಘಟಕಗಳು ಮತ್ತು ಎಲ್ಲಾ ಮುಂಚೂಣಿಯ ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದೆ. ಆದರೆ ಈ ನಿರ್ಧಾರಕ್ಕೆ ಪಕ್ಷವು ಯಾವುದೆ ಕಾರಣವನ್ನು ಬಹಿರಂಗಪಡಿಸಿಲ್ಲ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದರೆ ಆರ್‌ಎಲ್‌ಡಿ ಎಂಟು ಸ್ಥಾನಗಳನ್ನು ಗೆದ್ದಿದೆ. ರಾಜ್ಯದಲ್ಲಿ ಜಯಂತ್ ಚೌಧರಿ ಅವರ ಪಕ್ಷದ ಮತ ಗಳಿಕೆ 2.8%9 ಆಗಿದ್ದರೆ, ಎಸ್‌ಪಿ 32.1% ರಷ್ಟು ಮತಗಳನ್ನು ದಾಖಲಿಸಿದೆ.

ರಾಜ್ಯದ ಚುನಾವಣೆಗೆ ಮುನ್ನ ಜಯಂತ್‌ ಅವರು ಬಿಜೆಪಿ ಮೈತ್ರಿಕೂಟಕ್ಕೆ ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾಗಿ ಹೇಳಿದ್ದರು. “ನಾವು ಪಲ್ಟಿಯಾಗುವ ನಾಣ್ಯ ಅಲ್ಲ. ಬಿಜೆಪಿಯವರು ನಮ್ಮನ್ನು ಹಗುರವಾಗಿ ಪರಿಗಣಿಸಬಾರದು. ನಾವು ನಮ್ಮ ನಿರ್ಧಾರವನ್ನು ಬದಲಾಯಿಸುವುದಿಲ್ಲ. ಲಖಿಂಪುರ ಖೇರಿಯಲ್ಲಿ ಘಟನೆ ನಡೆದಾಗ ಅವರು ಎಲ್ಲಿದ್ದರು? ಜನರ ಮೇಲೆ ಲಾಠಿಚಾರ್ಜ್ ಮಾಡಿದಾಗ ಮತ್ತು ಹತ್ರಾಸ್‌ಗೆ ಹೋಗುವುದನ್ನು ತಡೆದಾಗ ಅವರು ಎಲ್ಲಿದ್ದರು?” ಎಂದು ಅವರು ಲಖಿಂಪುರದಲ್ಲಿ ರೈತರ ಹತ್ಯೆ ಮತ್ತು ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಜಯಂತ್‌ ಕೇಳಿದ್ದರು.

ಜಾಟ್‌ ಸಮುದಾಯದ ನಾಯಕರಾಗಿರುವ ಜಯಂತ್‌ ಚೌದರಿ ಈ ಹಿಂದೆ ರೈತರ ಪ್ರತಿಭಟನೆಯ ಬಗ್ಗೆ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಂದಾಜಿನ ಪ್ರಕಾರ ಜಾಟ್‌ಗಳು ರಾಜ್ಯದ ಜನಸಂಖ್ಯೆಯ 10% ಕ್ಕಿಂತ ಹೆಚ್ಚಿದ್ದಾರೆ. ಪಶ್ಚಿಮ ಯುಪಿ RLD ಯ ಭದ್ರಕೋಟೆ ಎಂದು ನಂಬಲಾಗಿದೆ.

ಕಳೆದ ವಾರ ಅಖಿಲೇಶ್ ಯಾದವ್ ಅವರು ಈ ಬಾರಿಯ ರಾಜ್ಯ ಚುನಾವಣಾ ಫಲಿತಾಂಶಗಳು ಬಿಜೆಪಿಯ ಸ್ಥಾನಗಳನ್ನು ಕಡಿಮೆ ಮಾಡಬಹುದು ಎಂದು ಸಾಬೀತುಪಡಿಸಿದೆ ಎಂದು ಹೇಳಿದ್ದರು. ಕಳೆದ ಬಾರಿ ಮಿತ್ರಪಕ್ಷಗಳೊಂದಿಗೆ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈಗ 273ಕ್ಕೆ ಇಳಿದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...