Homeಮುಖಪುಟಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿದ RLD ನಾಯಕ ಜಯಂತ್ ಚೌಧರಿ!

ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿದ RLD ನಾಯಕ ಜಯಂತ್ ಚೌಧರಿ!

ಆರ್‌ಎಲ್‌ಡಿ ಪಕ್ಷವು ಯುಪಿ ಚುನವಣೆಯಲ್ಲಿ ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಜೊತಗೆ ಮೈತ್ರಿ ಮಾಡಿಕೊಂಡಿತ್ತು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಆರ್‌ಎಲ್‌ಡಿ ನಾಯಕ ಜಯಂತ್‌‌ ಚೌಧರಿ ಅವರು, ರಾಜ್ಯದಲ್ಲಿ ತಮ್ಮ ಪಕ್ಷದ ಘಟಕಗಳನ್ನು ವಿಸರ್ಜಿಸುವ ಕುರಿತ ಘೋಷಣೆ ಮಾಡಿದ್ದಾರೆ.

ಜಯಂತ್ ಚೌಧರಿ ಅವರ ಘೋಷಣೆಯನ್ನು ಸೋಮವಾರ ತನ್ನ ಟ್ವಿಟರ್‌ನಲ್ಲಿ ಪ್ರಕಟಿಸಿರುವ ಆರ್‌ಎಲ್‌ಡಿ, “ರಾಷ್ಟ್ರೀಯ ಲೋಕದಳದ ರಾಷ್ಟ್ರೀಯ ಅಧ್ಯಕ್ಷ ಚೌಧರಿ ಜಯಂತ್ ಸಿಂಗ್ ಅವರ ಸೂಚನೆಯಂತೆ ರಾಜ್ಯ, ಪ್ರಾದೇಶಿಕ ಮತ್ತು ಜಿಲ್ಲಾ ಘಟಕಗಳು ಮತ್ತು ಎಲ್ಲಾ ಮುಂಚೂಣಿಯ ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗುತ್ತಿದೆ” ಎಂದು ಟ್ವೀಟ್ ಮಾಡಿದೆ. ಆದರೆ ಈ ನಿರ್ಧಾರಕ್ಕೆ ಪಕ್ಷವು ಯಾವುದೆ ಕಾರಣವನ್ನು ಬಹಿರಂಗಪಡಿಸಿಲ್ಲ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದರೆ ಆರ್‌ಎಲ್‌ಡಿ ಎಂಟು ಸ್ಥಾನಗಳನ್ನು ಗೆದ್ದಿದೆ. ರಾಜ್ಯದಲ್ಲಿ ಜಯಂತ್ ಚೌಧರಿ ಅವರ ಪಕ್ಷದ ಮತ ಗಳಿಕೆ 2.8%9 ಆಗಿದ್ದರೆ, ಎಸ್‌ಪಿ 32.1% ರಷ್ಟು ಮತಗಳನ್ನು ದಾಖಲಿಸಿದೆ.

ರಾಜ್ಯದ ಚುನಾವಣೆಗೆ ಮುನ್ನ ಜಯಂತ್‌ ಅವರು ಬಿಜೆಪಿ ಮೈತ್ರಿಕೂಟಕ್ಕೆ ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾಗಿ ಹೇಳಿದ್ದರು. “ನಾವು ಪಲ್ಟಿಯಾಗುವ ನಾಣ್ಯ ಅಲ್ಲ. ಬಿಜೆಪಿಯವರು ನಮ್ಮನ್ನು ಹಗುರವಾಗಿ ಪರಿಗಣಿಸಬಾರದು. ನಾವು ನಮ್ಮ ನಿರ್ಧಾರವನ್ನು ಬದಲಾಯಿಸುವುದಿಲ್ಲ. ಲಖಿಂಪುರ ಖೇರಿಯಲ್ಲಿ ಘಟನೆ ನಡೆದಾಗ ಅವರು ಎಲ್ಲಿದ್ದರು? ಜನರ ಮೇಲೆ ಲಾಠಿಚಾರ್ಜ್ ಮಾಡಿದಾಗ ಮತ್ತು ಹತ್ರಾಸ್‌ಗೆ ಹೋಗುವುದನ್ನು ತಡೆದಾಗ ಅವರು ಎಲ್ಲಿದ್ದರು?” ಎಂದು ಅವರು ಲಖಿಂಪುರದಲ್ಲಿ ರೈತರ ಹತ್ಯೆ ಮತ್ತು ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಜಯಂತ್‌ ಕೇಳಿದ್ದರು.

ಜಾಟ್‌ ಸಮುದಾಯದ ನಾಯಕರಾಗಿರುವ ಜಯಂತ್‌ ಚೌದರಿ ಈ ಹಿಂದೆ ರೈತರ ಪ್ರತಿಭಟನೆಯ ಬಗ್ಗೆ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಂದಾಜಿನ ಪ್ರಕಾರ ಜಾಟ್‌ಗಳು ರಾಜ್ಯದ ಜನಸಂಖ್ಯೆಯ 10% ಕ್ಕಿಂತ ಹೆಚ್ಚಿದ್ದಾರೆ. ಪಶ್ಚಿಮ ಯುಪಿ RLD ಯ ಭದ್ರಕೋಟೆ ಎಂದು ನಂಬಲಾಗಿದೆ.

ಕಳೆದ ವಾರ ಅಖಿಲೇಶ್ ಯಾದವ್ ಅವರು ಈ ಬಾರಿಯ ರಾಜ್ಯ ಚುನಾವಣಾ ಫಲಿತಾಂಶಗಳು ಬಿಜೆಪಿಯ ಸ್ಥಾನಗಳನ್ನು ಕಡಿಮೆ ಮಾಡಬಹುದು ಎಂದು ಸಾಬೀತುಪಡಿಸಿದೆ ಎಂದು ಹೇಳಿದ್ದರು. ಕಳೆದ ಬಾರಿ ಮಿತ್ರಪಕ್ಷಗಳೊಂದಿಗೆ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈಗ 273ಕ್ಕೆ ಇಳಿದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ದಿಗ್ವಿಜಯದ ನಡುವೆ ಸೋತ 11 ಮಂದಿ ಸಚಿವರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...