Homeಮುಖಪುಟದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

- Advertisement -
- Advertisement -

ಇನ್‌ಸ್ಟಾಗ್ರಾಮ್‌ನ ಮಾತೃ ಕಂಪನಿ ಮೆಟಾ ತನ್ನ ವೇದಿಕೆಗಳಲ್ಲಿ ತನ್ನ ಮಿಲಿಟರಿ ಸೇರಿದಂತೆ ರಷ್ಯಾದ ವಿರುದ್ಧ ಹಿಂಸಾಚಾರಕ್ಕೆ ನೀಡಿರುವ ಕರೆಗಳನ್ನು ಅನುಮತಿಸಿದೆ ಎಂದು ಆರೋಪಿಸಿ ಸೋಮವಾರದಂದು ರಷ್ಯಾದಲ್ಲಿ ಇನ್‌ಸ್ಟಾಗ್ರಾಮ್‌ ಆಪ್‌ ಬಳಕೆಗೆ ತಡೆಯೊಡ್ಡಲಾಗಿದೆ.

ದೇಶದಲ್ಲಿ ಇನ್‌ಸ್ಟಾಗ್ರಾಮ್‌ ಬಳಕೆದಾರರಿಗೆ ಮುಂಬರುವ ಪರಿಸ್ಥಿತಿ ಕುರಿತು ತಿಳಿಸಲಾಗಿರುವುದರಿಂದ ಈ ನಡೆ ಅನಿವಾರ್ಯವಾಗಿತ್ತು. ಉಕ್ರೇನ್‌ ವಿರುದ್ಧ ನಡೆಸಲಾಗುತ್ತಿರುವ ಯುದ್ಧದ ಮಧ್ಯೆ ರಷ್ಯಾದಲ್ಲಿ ತನ್ನ ಎಲ್ಲಾ ಸೇವೆಗಳನ್ನು ಮಧ್ಯೆರಾತ್ರಿಯ ನಂತರ ಭಾನುವಾರ ಮುಚ್ಚಲಾಗುವುದು ಎಂದು ಇನ್‌ಸ್ಟಾಗ್ರಾಮ್‌ ತಿಳಿಸಿದೆ.

ರಷ್ಯಾದ ಇನ್‌ಸ್ಟಾಗ್ರಾಮ್‌ ಮುಖ್ಯಸ್ಥ ಆಡಮ್ ಮೊಸ್ಸೆರಿ, ಈ ನಿರ್ಧಾರದಿಂದ ಇನ್‌ಸ್ಟಾಗ್ರಾಮ್‌ಗೆ ಎಂಟು ಕೋಟಿ ಬಳಕೆದಾರರು ಕಡಿತಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ರಷ್ಯಾದಲ್ಲಿ ಫೇಸ್ಬುಕ್, ಟ್ವಿಟರ್ ಮತ್ತು ಟಿಕ್‌ಟಾಕ್ ನಂತಹ ವೇದಿಕೆಗಳು ಹೆಚ್ಚು ಜನಪ್ರಿಯವಾಗಿವೆ.

ಇದನ್ನೂ ಓದಿ: ರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP ಸರ್ಕಾರ!

ಮುಚ್ಚುವ ಮೊದಲು ತಮ್ಮ ವಿಡಿಯೊ ಮತ್ತು ಪೋಟೋಗಳನ್ನು ಇನ್ಸ್ಟಾಗ್ರಾಮ್‌ನಿಂದ ತೆಗೆದುಕೊಳ್ಳುವಂತೆ ಸ್ಟೇಟ್ ಕಮ್ಯೂನಿಕೇಶನ್ಸ್ ರೆಗ್ಯುಲೇಟರ್‌ ಬಳಕೆದಾರರಿಗೆ ಇಮೇಲ್ ಸಂದೇಶ ಕಳುಹಿಸಿದ್ದು, ರಷ್ಯಾ ನಿರ್ಮಿತ ಜಾಲತಾಣಗಳನ್ನ ಬಳಸಿ ಪ್ರೋತ್ಸಾಹಿಸಲು ಕೇಳಿಕೊಂಡಿದೆ.

ರಷ್ಯಾ ಈ ಹಿಂದೆ ಮಾರ್ಚ್‌ ಮೊದಲ ವಾರದಲ್ಲಿ ಟ್ವೀಟರ್ ಫೇಸ್‌ಬುಕ್‌ಗಳನ್ನು ನಿರ್ಬಂಧಿಸಿತ್ತು. ಇದೀಗ ಇನ್‌ಸ್ಟಾಗ್ರಾಮ್‌ ಮೇಲೆ ಕೂಡಾ ನಿರ್ಬಂಧ ಹೇರಿದೆ. ಉಕ್ರೇನ್‌ನಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ರಷ್ಯನ್ನರಿಗೆ ಲಭ್ಯವಾಗುವ ಮಾಹಿತಿಯನ್ನು ನಿಯಂತ್ರಿಸಲು ರಷ್ಯಾ ಕ್ರಮ ಜರುಗಿಸಿದೆ ಎಂದು ವರದಿಯಾಗಿವೆ.

ರಷ್ಯಾದ ಮಾಧ್ಯಮ ನಿಯಂತ್ರಕವು ಪ್ರಕಟಿಸಿದ ನಿರ್ಭಂದಿತ ಆನ್‌ಲೈನ್ ಪಟ್ಟಿಯಲ್ಲಿ ಇನ್‌ಸ್ಟಾಗ್ರಾಮ್‌ ಸೋಮವಾರದಂದು ಕಾಣಿಸಿಕೊಂಡಿದೆ.

ರಷ್ಯಾದಲ್ಲಿ VPN ಇಲ್ಲದೆ ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್ ಬಳಕೆಗೆ ಸಿಗುತ್ತಿಲ್ಲ ಎಂದು AFP ಪತ್ರಕರ್ತರು ಹೇಳಿದ್ದಾರೆ. ಫೇಸ್‌‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ರಷ್ಯಾದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿದ್ದು, ಅದರಲ್ಲೂ ಇನ್‌ಸ್ಟಾಗ್ರಾಮ್‌ ಯುವ ರಷ್ಯನ್ನರ ನಡುವೆ ಅತ್ಯಂತ ಜನಪ್ರಿಯ ಸಾಮಾಜಿಕ ಮಾದ್ಯಮವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...