Homeಕರ್ನಾಟಕಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಹಿನ್ನಲೆ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ!

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಹಿನ್ನಲೆ; ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ!

- Advertisement -
- Advertisement -

ರಾಜ್ಯ ಹೈಕೋರ್ಟ್ ಮಂಗಳವಾರ ಬೆಳಿಗ್ಗೆ ಹಿಜಾಬ್ ವಿಚಾರದಲ್ಲಿ ತನ್ನ ತೀರ್ಪು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯ ಕೆಲವು ಭಾಗಗಳಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಜೊತೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮಾರ್ಚ್ 15 ರಿಂದ 21 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ಸಭೆಗಳು, ಪ್ರತಿಭಟನೆಗಳು ಮತ್ತು ಆಚರಣೆಗಳನ್ನು ನಿಷೇಧಿಸಿ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಸೋಮವಾರ ಸಂಜೆ ಹೈಕೋರ್ಟ್ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಫೆಬ್ರವರಿ 25 ರಂದು, ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೈಬುನ್ನಿಸಾ ಮೊಹಿದೀನ್ ಖಾಝಿ ಅವರ ಪೂರ್ಣ ಪೀಠವು ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಮುಸ್ಲಿಂ ಹುಡುಗಿಯರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು.

ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿ ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕನ್ನು ಪ್ರತಿಪಾದಿಸಿ, ಫೆಬ್ರವರಿ ಐದರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದು ಮಾಡಬೇಕು ಎಂದು ನ್ಯಾಯಾಲಯವನ್ನು ವಿನಂತಿಸಿದ್ದರು. ಇದನ್ನು ವಿರೋಧಿಸಿ ಸರ್ಕಾರದ ಪರವಾಗಿ ವಾದಿಸಿದ್ದ ಅಡ್ವೊಕೇಟ್ ಜನರಲ್ ಅವರು, ಸರ್ಕಾರದ ಆದೇಶವು ನಿರುಪದ್ರವವಾಗಿದ್ದು ಮತ್ತು ಧಾರ್ಮಿಕ ವೇಷಭೂಷಣವನ್ನು ನಿಷೇಧಿಸಲು ನಿರ್ದೇಶಿಸಿಲ್ಲ. ಸಮವಸ್ತ್ರಗಳನ್ನು ಸೂಚಿಸುವ ಅಧಿಕಾರವನ್ನು ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದೇವೆ ಎಂದು ಹೇಳಿದ್ದರು.

ಆದಾಗ್ಯೂ, ಸರ್ಕಾರಿ ಆದೇಶದ ಕೆಲವು ಭಾಗಗಳು ಅನಗತ್ಯವಾಗಿತ್ತು ಎಂದು ಅಡ್ವೊಕೇ‌ಟ್‌ ಜನರಲ್‌ ಒಪ್ಪಿಕೊಂಡಿದ್ದಾರೆ. ಜೊತೆಗೆ, ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಹೇಳಿದೆ.

ಆರಂಭದಲ್ಲಿ ಏಕ ನ್ಯಾಯಾಪೀಠ ಅರ್ಜಿಗಳ ವಿಚಾರಣೆ ನಡೆಸಿತ್ತು. ನಂತರ ನ್ಯಾಯಮೂರ್ತಿ ದೀಕ್ಷಿತ್ ಅವರು ಪ್ರಕರಣವನ್ನು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿದರು.

ಇಂದು ಹೈಕೋರ್ಟ್ ಆದೇಶ ನೀಡಿದರೂ ಪ್ರಕರಣವು ಸುಪ್ರೀಂಕೋರ್ಟ್‌ಗೆ ಹೋಗುವ ನಿರೀಕ್ಷೆಯಿದೆ. ಫೆಬ್ರವರಿ 11 ರಂದು, ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧದ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಜೊತೆಗೆ ವಿವಾದವನ್ನು ದೊಡ್ಡ ಮಟ್ಟದಲ್ಲಿ ಹರಡದಂತೆ ಅರ್ಜಿದಾರರನ್ನು ಕೇಳಿಕೊಂಡಿತ್ತು.

“ಪ್ರಕರಣದ ಬಗ್ಗೆ ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ…ರಾಜ್ಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಏನು ನಡೆಯುತ್ತಿದೆ ಎಂದು ನಮಗೆ ತಿಳಿದಿದೆ. ಹೀಗಾಗಿ ಪ್ರಕರಣವನ್ನು ದೆಹಲಿಗೆ ತರುವುದು ಸರಿಯೇ. ರಾಷ್ಟ್ರೀಯ ಮಟ್ಟದ ಸಮಸ್ಯೆಗಳು ಮತ್ತು ಎಲ್ಲವುಗಳ ಬಗ್ಗೆಯೂ ನೀವು ಯೋಚಿಸಬೇಕು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ ಅವರು ಉಡುಪಿಯ ವಿದ್ಯಾರ್ಥಿಗಳನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲ ದೇವದತ್ತ್ ಕಾಮತ್‌ಗೆ ತಿಳಿಸಿದ್ದರು.

ಈ ವೇಳೆ ಕಾಮತ್ ಅವರು ನ್ಯಾಯಾಲಯವು ಪರಿಶೀಲಿಸಬೇಕಾದ ಕಾನೂನು ಸಮಸ್ಯೆಗಳನ್ನು ಒಳಗೊಂಡಿರುವುದರಿಂದ ಪ್ರಕರಣವನ್ನು ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿದಾಗ, ನ್ಯಾಯಮೂರ್ತಿ ರಮಣ ಅವರು, “ಖಂಡಿತವಾಗಿಯೂ, ನಾವು ಪರಿಶೀಲಿಸುತ್ತೇವೆ. ತಪ್ಪಿದ್ದರೆ ಖಂಡಿತ ರಕ್ಷಿಸುತ್ತೇವೆ. ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ನಾವು ರಕ್ಷಿಸಬೇಕಾಗಿದೆ…ನೋಡೋಣ. ಸೂಕ್ತ ಸಮಯದಲ್ಲಿ, ಖಂಡಿತವಾಗಿಯೂ ನಾವು ಹಸ್ತಕ್ಷೇಪ ಮಾಡುತ್ತೇವೆ. ಯಾವಾಗ ಬೇಕೋ ಆಗ ನೋಡೋಣ” ಎಂದು ಹೇಳಿದ್ದರು.

ರಾಜ್ಯದ ಶಾಲೆಗಳಲ್ಲಿ ಹತ್ತನೇ ತರಗತಿ ಪರೀಕ್ಷೆಗಳು ಮಾರ್ಚ್ 28 ರಂದು ಪ್ರಾರಂಭವಾಗಲಿದ್ದು, ಪದವಿ ಪೂರ್ವ ಪರೀಕ್ಷೆಗಳು ಎಪ್ರಿಲ್‌ನಲ್ಲಿ ನಡೆಯಲಿವೆ.

ಇದನ್ನೂ ಓದಿ: ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣ: ಮಂಗಳವಾರ ರಾಜ್ಯ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....