Homeಕರ್ನಾಟಕಹಿಜಾಬ್ ತೀರ್ಪು: ಸುಪ್ರೀಂಕೋರ್ಟ್ ಮೆಟ್ಟಿಲೇರಲಿರುವ ವಿದ್ಯಾರ್ಥಿನಿಯರು

ಹಿಜಾಬ್ ತೀರ್ಪು: ಸುಪ್ರೀಂಕೋರ್ಟ್ ಮೆಟ್ಟಿಲೇರಲಿರುವ ವಿದ್ಯಾರ್ಥಿನಿಯರು

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಪರವಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರಿಗೆ ನಿರಾಸೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.

ಹಿಜಾಬ್‌ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವ ಹೈಕೋರ್ಟ್‌, ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿ, ರಾಜ್ಯ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ತೀರ್ಪಿನ ಬಗ್ಗೆ ಮಾತನಾಡಿರುವ ವಿದ್ಯಾರ್ಥಿನಿಯರ ಪರವಾಗಿ ವಾದ ಮಂಡಿಸಿದ ವಕೀಲರಾದ ಕೆ.ವಿ.ಧನಂಜಯ್, “ಹೈಕೋರ್ಟ್‌ನ ಸಂಪೂರ್ಣ ಆದೇಶ ಹೊರಬಿದ್ದ ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುತ್ತೇವೆ” ಎಂದು ತಿಳಿಸಿದ್ದಾರೆ.

ಮತ್ತೊಬ್ಬ ವಕೀಲರಾದ ಶಾಹುಲ್ ಅವರು ಕೂಡಾ, “ವಿವರವಾದ ಆದೇಶ ಬಂದ ನಂತರ ಅದನ್ನು ವಿಶ್ಲೇಷಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾರೆ.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...