Homeಮುಖಪುಟಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಅಸಾದುದ್ದೀನ್ ಓವೈಸಿ, ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದರ ಉಲ್ಲಂಘನೆಯಲ್ಲವೇ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

ಹೈಕೋರ್ಟ್‌‌ನ ಮೌಖಿಕ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ನಾನು ಒಪ್ಪುವುದಿಲ್ಲ. ತೀರ್ಪನ್ನು ಒಪ್ಪದಿರುವುದು ನನ್ನ ಹಕ್ಕಾಗಿದ್ದು, ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ ಮುಂದೆ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

“ತೀರ್ಪು ಧರ್ಮ, ಸಂಸ್ಕೃತಿ, ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿರುವುದರಿಂದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮತ್ತು ಇತರ ಧಾರ್ಮಿಕ ಗುಂಪುಗಳ ಸಂಘಟನೆಗಳು ಕೂಡಾ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಓವೈಸಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ರಾಜಕಾರಣ; ಹಿಜಾಬಿನ ಅಪರಾಧೀಕರಣ

“ಸಂವಿಧಾನದ ಪೀಠಿಕೆಯು ಒಬ್ಬನಿಗೆ ಆಲೋಚನೆ, ಅಭಿವ್ಯಕ್ತಿ, ಧಾರ್ಮಿಕ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವಿದೆ ಎಂದು ಹೇಳುತ್ತದೆ. ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ಧಾರ್ಮಿಕ ನಂಬಿಕೆಯಾಗಿದ್ದರೆ, ನಾನು ಸೂಕ್ತವೆಂದು ಭಾವಿಸಿದಂತೆ ಅದನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಇದು ಅಗತ್ಯ ಧಾರ್ಮಿಕ ಆಚರಣೆ ಪರೀಕ್ಷೆಯನ್ನು ಪರಿಶೀಲಿಸುವ ಸಮಯ. ಒಬ್ಬ ಧರ್ಮನಿಷ್ಠ ವ್ಯಕ್ತಿಗೆ, ಎಲ್ಲವೂ ಅತ್ಯಗತ್ಯ. ನಾಸ್ತಿಕನಿಗೆ ಯಾವುದೂ ಅತ್ಯಗತ್ಯವಲ್ಲ. ಶ್ರದ್ಧಾವಂತ ಹಿಂದೂ ಬ್ರಾಹ್ಮಣರಿಗೆ, ಜನಿವಾರ ಅತ್ಯಗತ್ಯ ಆದರೆ ಬ್ರಾಹ್ಮಣೇತರರಿಗೆ ಅದು ಇಲ್ಲದಿರಬಹುದು. ನ್ಯಾಯಾಧೀಶರು ಅತ್ಯಗತ್ಯ ಆಚರಣೆಯನ್ನು ನಿರ್ಧರಿಸಬಹುದು ಎಂಬುದು ಅಸಂಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಒಬ್ಬ ವ್ಯಕ್ತಿ ಒಂದು ಧರ್ಮವನ್ನು ಆಚರಿಸುತ್ತಿದ್ದರೆ, ಅದೇ ಧರ್ಮವನ್ನು ಆಚರಿಸುವ ಇನ್ನೊಬ್ಬ ವ್ಯಕ್ತಿಯ ಅತ್ಯಗತ್ಯ ಧಾರ್ಮಿಕ ಆಚರಣೆಯ ಬಗ್ಗೆ ನಿರ್ಧರಿಸುವ ಹಕ್ಕಿಲ್ಲ. ಆಚರಣೆಗಳು ವ್ಯಕ್ತಿ ಮತ್ತು ದೇವರ ನಡುವೆ ಇರುವಂತಹದ್ದು. ಆಚರಣೆಗಳು ಇತರರಿಗೆ ಹಾನಿಯಾದರೆ ಮಾತ್ರ ಧಾರ್ಮಿಕ ಹಕ್ಕುಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಕು. ತಲೆಗೆ ಹಿಜಾಬ್‌ ಧರಿಸುವುದು ಯಾರಿಗೂ ಹಾನಿ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಸ್ಕಾರ್ಫ್‌ ನಿಷೇಧಿಸುವುದರಿಂದ ಧರ್ಮನಿಷ್ಠ ಮುಸ್ಲಿಂ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಖಂಡಿತವಾಗಿಯೂ ಹಾನಿ ಮಾಡುತ್ತದೆ. ಯಾಕೆಂದರೆ ಇದು ಅವರು ಶಿಕ್ಷಣವನ್ನು ಪಡೆಯುವುದನ್ನು ತಡೆಯುತ್ತದೆ” ಎಂದು ಓವೈಸಿ ಹೇಳಿದ್ದಾರೆ.

“ಸಮವಸ್ತ್ರವು ಏಕರೂಪತೆಯನ್ನು ಖಚಿತಪಡಿಸುತ್ತದೆ ಎಂಬುದು ಹೇಗೆ? ಶ್ರೀಮಂತ ಹಾಗೂ ಬಡ ಕುಟುಂಬದಿಂದ ಬಂದವರು ಯಾರೆಂದು ಮಕ್ಕಳಿಗೆ ತಿಳಿಯುವುದಿಲ್ಲವೇ? ಜಾತಿಯ ಹೆಸರುಗಳು ಅವರ ಹಿನ್ನೆಲೆಯನ್ನು ಸೂಚಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ – ರಾಜೇಂದ್ರ ಚೆನ್ನಿ

“ಶಿಕ್ಷಕರು ತಾರತಮ್ಯ ಮಾಡುವುದನ್ನು ತಡೆಯಲು ಸಮವಸ್ತ್ರದ ಕೊಡುಗೆ ಏನು? ವೈವಿಧ್ಯತೆಯನ್ನು ಪ್ರತಿಬಿಂಬಿಸಲು ಶಾಲೆ, ಪೊಲೀಸ್ ಮತ್ತು ಸೇನೆಯ ಸಮವಸ್ತ್ರಗಳಲ್ಲಿ ಸಮಂಜಸವಾದ ಅವಕಾಶಗಳನ್ನು ಜಾಗತಿಕವಾಗಿ ನೀಡಲಾಗಿದೆ. ಹಿಜಾಬ್ ಮತ್ತು ಸಿಖ್ ಪೇಟವನ್ನು ಅನುಮತಿಸಲು ಬೇಕಾಗಿ ಐರ್ಲೆಂಡ್ ಸರ್ಕಾರವು ಪೊಲೀಸ್ ಸಮವಸ್ತ್ರದ ನಿಯಮಗಳನ್ನು ಬದಲಾಯಿಸಿದಾಗ, ಮೋದಿ ಸರ್ಕಾರ ಅದನ್ನು ಸ್ವಾಗತಿಸಿತು. ಹಾಗಾದರೆ ನಮ್ಮ ದೇಶದಲ್ಲಿ ಮತ್ತು ವಿದೇಶದಲ್ಲಿ ಎರಡು ಮಾನದಂಡಗಳು ಯಾಕೆ? ಸಮವಸ್ತ್ರದ್ದೇ ಬಣ್ಣಗಳ ಹಿಜಾಬ್ ಮತ್ತು ಪೇಟಗಳನ್ನು ಧರಿಸಲು ಅನುಮತಿಸಬಹುದಲ್ಲವೆ” ಎಂದು ಓವೈಸಿ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಇದೆಲ್ಲದರ ಪರಿಣಾಮ ಏನಾಗಲಿದೆ? ಮೊದಲನೆಯದಾಗಿ, ಸರ್ಕಾರವು ಅಸ್ತಿತ್ವದಲ್ಲಿಲ್ಲದ ಸಮಸ್ಯೆಯನ್ನು ಸೃಷ್ಟಿಸಿತು. ಈ ಹಿಂದೆ ಮಕ್ಕಳು ಹಿಜಾಬ್, ಬಳೆ ಇತ್ಯಾದಿ ಧರಿಸಿ ಶಾಲೆಗೆ ಹೋಗುತ್ತಿದ್ದರು. ಎರಡನೆಯದಾಗಿ, ಹಿಂಸಾಚಾರವನ್ನು ಪ್ರಚೋದಿಸಿ, ಕೇಸರಿ ಪೇಟಗಳೊಂದಿಗೆ ಹಿಜಾಬ್‌ ವಿರುದ್ದ ಪ್ರತಿಭಟನೆಗಳನ್ನು ನಡೆಸಲಾಯಿತು. ಕೇಸರಿ ಪೇಟಗಳು ‘ಅಗತ್ಯ’ವೇ? ಅಥವಾ ಹಿಜಾಬ್‌ಗೆ ‘ಪ್ರತಿಕ್ರಿಯೆ’ಯಾಗಿ ಮಾತ್ರವೆ ಧರಿಸಲಾಯಿತೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೂರನೆಯದಾಗಿ, ಸರ್ಕಾರಿ ಆದೇಶ ಮತ್ತು ಹೈಕೋರ್ಟ್ ಆದೇಶವು ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದೆ. ಮಾಧ್ಯಮಗಳು, ಪೊಲೀಸರು ಮತ್ತು ಆಡಳಿತ ಮಂಡಳಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕಿರುಕುಳ ನೀಡುವುದನ್ನು ನಾವು ನೋಡಿದ್ದೇವೆ. ಮಕ್ಕಳು ಪರೀಕ್ಷೆ ಬರೆಯುವುದನ್ನು ಸಹ ನಿಷೇಧಿಸಲಾಗಿದೆ. ಇದು ನಾಗರಿಕ ಹಕ್ಕುಗಳ ಸಾಮೂಹಿಕ ಉಲ್ಲಂಘನೆಯಾಗಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಕೊನೆಯದಾಗಿ, ಇದರರ್ಥ ಒಂದು ಧರ್ಮವನ್ನು ಗುರಿಯಾಗಿಸಲಾಗಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದುವೆ ಉಲ್ಲಂಘನೆಯಲ್ಲವೇ? ಸಂಕ್ಷಿಪ್ತವಾಗಿ ಹೈಕೋರ್ಟ್‌ ಆದೇಶವು ಮಕ್ಕಳನ್ನು ಶಿಕ್ಷಣ ಮತ್ತು ಅಲ್ಲಾಹನ ಆಜ್ಞೆಗಳ ನಡುವೆ ಆಯ್ಕೆ ಮಾಡುವಂತೆ ಒತ್ತಾಯಿಸಿದೆ” ಎಂದು ಅವರು ಹೇಳಿದ್ದಾರೆ.

“ನಮಾಜ್‌, ಹಿಜಾಬ್, ರೋಜಾ ಇತ್ಯಾದಿ ಕಟ್ಟುಪಾಡುಗಳ ಜೊತೆಗೆ ಶಿಕ್ಷಣ ಪಡೆಯಬೇಕು ಎಂಬುವುದು ಮುಸ್ಲಿಮರಿಗೆ ಅಲ್ಲಾಹನ ಆಜ್ಞೆಯಾಗಿದೆ. ಈಗ ಸರ್ಕಾರ ಮುಸ್ಲಿಂ ಹುಡುಗಿಯರಿಗೆ ಅವುಗಳ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ. ಇಲ್ಲಿಯವರೆಗೆ ನ್ಯಾಯಾಂಗವು ಮಸೀದಿ ಮತ್ತು ಗಡ್ಡವನ್ನು ಇಟ್ಟುಕೊಳ್ಳುವುದು ಅತ್ಯಗತ್ಯವಲ್ಲ ಎಂದು ತೀರ್ಪು ನೀಡಿದೆ. ಈಗ ಹಿಜಾಬ್ ಅನಿವಾರ್ಯವಲ್ಲ ಎಂದು ತೀರ್ಪು ನೀಡಿದೆ. ನಂಬಿಕೆಗಳನ್ನು ಮುಕ್ತವಾಗಿ ಆಚರಿಸುವುದರಲ್ಲಿ ಇನ್ನು ಯಾವುದು ಉಳಿದಿದೆ? ಹಿಜಾಬ್ ಧರಿಸುವ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಕಾನೂನುಬದ್ಧಗೊಳಿಸಲು ಈ ತೀರ್ಪು ಬಳಸಲ್ಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿಷೇಧ ಎತ್ತಿ ಹಿಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...