Homeಮುಖಪುಟಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಅಸಾದುದ್ದೀನ್ ಓವೈಸಿ, ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದರ ಉಲ್ಲಂಘನೆಯಲ್ಲವೇ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

ಹೈಕೋರ್ಟ್‌‌ನ ಮೌಖಿಕ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ನಾನು ಒಪ್ಪುವುದಿಲ್ಲ. ತೀರ್ಪನ್ನು ಒಪ್ಪದಿರುವುದು ನನ್ನ ಹಕ್ಕಾಗಿದ್ದು, ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ ಮುಂದೆ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

“ತೀರ್ಪು ಧರ್ಮ, ಸಂಸ್ಕೃತಿ, ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿರುವುದರಿಂದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮತ್ತು ಇತರ ಧಾರ್ಮಿಕ ಗುಂಪುಗಳ ಸಂಘಟನೆಗಳು ಕೂಡಾ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಓವೈಸಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ರಾಜಕಾರಣ; ಹಿಜಾಬಿನ ಅಪರಾಧೀಕರಣ

“ಸಂವಿಧಾನದ ಪೀಠಿಕೆಯು ಒಬ್ಬನಿಗೆ ಆಲೋಚನೆ, ಅಭಿವ್ಯಕ್ತಿ, ಧಾರ್ಮಿಕ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವಿದೆ ಎಂದು ಹೇಳುತ್ತದೆ. ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ಧಾರ್ಮಿಕ ನಂಬಿಕೆಯಾಗಿದ್ದರೆ, ನಾನು ಸೂಕ್ತವೆಂದು ಭಾವಿಸಿದಂತೆ ಅದನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಇದು ಅಗತ್ಯ ಧಾರ್ಮಿಕ ಆಚರಣೆ ಪರೀಕ್ಷೆಯನ್ನು ಪರಿಶೀಲಿಸುವ ಸಮಯ. ಒಬ್ಬ ಧರ್ಮನಿಷ್ಠ ವ್ಯಕ್ತಿಗೆ, ಎಲ್ಲವೂ ಅತ್ಯಗತ್ಯ. ನಾಸ್ತಿಕನಿಗೆ ಯಾವುದೂ ಅತ್ಯಗತ್ಯವಲ್ಲ. ಶ್ರದ್ಧಾವಂತ ಹಿಂದೂ ಬ್ರಾಹ್ಮಣರಿಗೆ, ಜನಿವಾರ ಅತ್ಯಗತ್ಯ ಆದರೆ ಬ್ರಾಹ್ಮಣೇತರರಿಗೆ ಅದು ಇಲ್ಲದಿರಬಹುದು. ನ್ಯಾಯಾಧೀಶರು ಅತ್ಯಗತ್ಯ ಆಚರಣೆಯನ್ನು ನಿರ್ಧರಿಸಬಹುದು ಎಂಬುದು ಅಸಂಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಒಬ್ಬ ವ್ಯಕ್ತಿ ಒಂದು ಧರ್ಮವನ್ನು ಆಚರಿಸುತ್ತಿದ್ದರೆ, ಅದೇ ಧರ್ಮವನ್ನು ಆಚರಿಸುವ ಇನ್ನೊಬ್ಬ ವ್ಯಕ್ತಿಯ ಅತ್ಯಗತ್ಯ ಧಾರ್ಮಿಕ ಆಚರಣೆಯ ಬಗ್ಗೆ ನಿರ್ಧರಿಸುವ ಹಕ್ಕಿಲ್ಲ. ಆಚರಣೆಗಳು ವ್ಯಕ್ತಿ ಮತ್ತು ದೇವರ ನಡುವೆ ಇರುವಂತಹದ್ದು. ಆಚರಣೆಗಳು ಇತರರಿಗೆ ಹಾನಿಯಾದರೆ ಮಾತ್ರ ಧಾರ್ಮಿಕ ಹಕ್ಕುಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಕು. ತಲೆಗೆ ಹಿಜಾಬ್‌ ಧರಿಸುವುದು ಯಾರಿಗೂ ಹಾನಿ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಸ್ಕಾರ್ಫ್‌ ನಿಷೇಧಿಸುವುದರಿಂದ ಧರ್ಮನಿಷ್ಠ ಮುಸ್ಲಿಂ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಖಂಡಿತವಾಗಿಯೂ ಹಾನಿ ಮಾಡುತ್ತದೆ. ಯಾಕೆಂದರೆ ಇದು ಅವರು ಶಿಕ್ಷಣವನ್ನು ಪಡೆಯುವುದನ್ನು ತಡೆಯುತ್ತದೆ” ಎಂದು ಓವೈಸಿ ಹೇಳಿದ್ದಾರೆ.

“ಸಮವಸ್ತ್ರವು ಏಕರೂಪತೆಯನ್ನು ಖಚಿತಪಡಿಸುತ್ತದೆ ಎಂಬುದು ಹೇಗೆ? ಶ್ರೀಮಂತ ಹಾಗೂ ಬಡ ಕುಟುಂಬದಿಂದ ಬಂದವರು ಯಾರೆಂದು ಮಕ್ಕಳಿಗೆ ತಿಳಿಯುವುದಿಲ್ಲವೇ? ಜಾತಿಯ ಹೆಸರುಗಳು ಅವರ ಹಿನ್ನೆಲೆಯನ್ನು ಸೂಚಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ – ರಾಜೇಂದ್ರ ಚೆನ್ನಿ

“ಶಿಕ್ಷಕರು ತಾರತಮ್ಯ ಮಾಡುವುದನ್ನು ತಡೆಯಲು ಸಮವಸ್ತ್ರದ ಕೊಡುಗೆ ಏನು? ವೈವಿಧ್ಯತೆಯನ್ನು ಪ್ರತಿಬಿಂಬಿಸಲು ಶಾಲೆ, ಪೊಲೀಸ್ ಮತ್ತು ಸೇನೆಯ ಸಮವಸ್ತ್ರಗಳಲ್ಲಿ ಸಮಂಜಸವಾದ ಅವಕಾಶಗಳನ್ನು ಜಾಗತಿಕವಾಗಿ ನೀಡಲಾಗಿದೆ. ಹಿಜಾಬ್ ಮತ್ತು ಸಿಖ್ ಪೇಟವನ್ನು ಅನುಮತಿಸಲು ಬೇಕಾಗಿ ಐರ್ಲೆಂಡ್ ಸರ್ಕಾರವು ಪೊಲೀಸ್ ಸಮವಸ್ತ್ರದ ನಿಯಮಗಳನ್ನು ಬದಲಾಯಿಸಿದಾಗ, ಮೋದಿ ಸರ್ಕಾರ ಅದನ್ನು ಸ್ವಾಗತಿಸಿತು. ಹಾಗಾದರೆ ನಮ್ಮ ದೇಶದಲ್ಲಿ ಮತ್ತು ವಿದೇಶದಲ್ಲಿ ಎರಡು ಮಾನದಂಡಗಳು ಯಾಕೆ? ಸಮವಸ್ತ್ರದ್ದೇ ಬಣ್ಣಗಳ ಹಿಜಾಬ್ ಮತ್ತು ಪೇಟಗಳನ್ನು ಧರಿಸಲು ಅನುಮತಿಸಬಹುದಲ್ಲವೆ” ಎಂದು ಓವೈಸಿ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಇದೆಲ್ಲದರ ಪರಿಣಾಮ ಏನಾಗಲಿದೆ? ಮೊದಲನೆಯದಾಗಿ, ಸರ್ಕಾರವು ಅಸ್ತಿತ್ವದಲ್ಲಿಲ್ಲದ ಸಮಸ್ಯೆಯನ್ನು ಸೃಷ್ಟಿಸಿತು. ಈ ಹಿಂದೆ ಮಕ್ಕಳು ಹಿಜಾಬ್, ಬಳೆ ಇತ್ಯಾದಿ ಧರಿಸಿ ಶಾಲೆಗೆ ಹೋಗುತ್ತಿದ್ದರು. ಎರಡನೆಯದಾಗಿ, ಹಿಂಸಾಚಾರವನ್ನು ಪ್ರಚೋದಿಸಿ, ಕೇಸರಿ ಪೇಟಗಳೊಂದಿಗೆ ಹಿಜಾಬ್‌ ವಿರುದ್ದ ಪ್ರತಿಭಟನೆಗಳನ್ನು ನಡೆಸಲಾಯಿತು. ಕೇಸರಿ ಪೇಟಗಳು ‘ಅಗತ್ಯ’ವೇ? ಅಥವಾ ಹಿಜಾಬ್‌ಗೆ ‘ಪ್ರತಿಕ್ರಿಯೆ’ಯಾಗಿ ಮಾತ್ರವೆ ಧರಿಸಲಾಯಿತೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೂರನೆಯದಾಗಿ, ಸರ್ಕಾರಿ ಆದೇಶ ಮತ್ತು ಹೈಕೋರ್ಟ್ ಆದೇಶವು ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದೆ. ಮಾಧ್ಯಮಗಳು, ಪೊಲೀಸರು ಮತ್ತು ಆಡಳಿತ ಮಂಡಳಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕಿರುಕುಳ ನೀಡುವುದನ್ನು ನಾವು ನೋಡಿದ್ದೇವೆ. ಮಕ್ಕಳು ಪರೀಕ್ಷೆ ಬರೆಯುವುದನ್ನು ಸಹ ನಿಷೇಧಿಸಲಾಗಿದೆ. ಇದು ನಾಗರಿಕ ಹಕ್ಕುಗಳ ಸಾಮೂಹಿಕ ಉಲ್ಲಂಘನೆಯಾಗಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಕೊನೆಯದಾಗಿ, ಇದರರ್ಥ ಒಂದು ಧರ್ಮವನ್ನು ಗುರಿಯಾಗಿಸಲಾಗಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದುವೆ ಉಲ್ಲಂಘನೆಯಲ್ಲವೇ? ಸಂಕ್ಷಿಪ್ತವಾಗಿ ಹೈಕೋರ್ಟ್‌ ಆದೇಶವು ಮಕ್ಕಳನ್ನು ಶಿಕ್ಷಣ ಮತ್ತು ಅಲ್ಲಾಹನ ಆಜ್ಞೆಗಳ ನಡುವೆ ಆಯ್ಕೆ ಮಾಡುವಂತೆ ಒತ್ತಾಯಿಸಿದೆ” ಎಂದು ಅವರು ಹೇಳಿದ್ದಾರೆ.

“ನಮಾಜ್‌, ಹಿಜಾಬ್, ರೋಜಾ ಇತ್ಯಾದಿ ಕಟ್ಟುಪಾಡುಗಳ ಜೊತೆಗೆ ಶಿಕ್ಷಣ ಪಡೆಯಬೇಕು ಎಂಬುವುದು ಮುಸ್ಲಿಮರಿಗೆ ಅಲ್ಲಾಹನ ಆಜ್ಞೆಯಾಗಿದೆ. ಈಗ ಸರ್ಕಾರ ಮುಸ್ಲಿಂ ಹುಡುಗಿಯರಿಗೆ ಅವುಗಳ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ. ಇಲ್ಲಿಯವರೆಗೆ ನ್ಯಾಯಾಂಗವು ಮಸೀದಿ ಮತ್ತು ಗಡ್ಡವನ್ನು ಇಟ್ಟುಕೊಳ್ಳುವುದು ಅತ್ಯಗತ್ಯವಲ್ಲ ಎಂದು ತೀರ್ಪು ನೀಡಿದೆ. ಈಗ ಹಿಜಾಬ್ ಅನಿವಾರ್ಯವಲ್ಲ ಎಂದು ತೀರ್ಪು ನೀಡಿದೆ. ನಂಬಿಕೆಗಳನ್ನು ಮುಕ್ತವಾಗಿ ಆಚರಿಸುವುದರಲ್ಲಿ ಇನ್ನು ಯಾವುದು ಉಳಿದಿದೆ? ಹಿಜಾಬ್ ಧರಿಸುವ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಕಾನೂನುಬದ್ಧಗೊಳಿಸಲು ಈ ತೀರ್ಪು ಬಳಸಲ್ಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿಷೇಧ ಎತ್ತಿ ಹಿಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...