Homeಕರ್ನಾಟಕಪೊಲೀಸರ ದೌರ್ಜನ್ಯಕ್ಕೆ ಎಎಪಿ ಖಂಡನೆ: ಮೃತರ ಕುಟುಂಬಕ್ಕೆ ಕೋಟಿ ರೂ. ಪರಿಹಾರಕ್ಕೆ ಆಗ್ರಹ

ಪೊಲೀಸರ ದೌರ್ಜನ್ಯಕ್ಕೆ ಎಎಪಿ ಖಂಡನೆ: ಮೃತರ ಕುಟುಂಬಕ್ಕೆ ಕೋಟಿ ರೂ. ಪರಿಹಾರಕ್ಕೆ ಆಗ್ರಹ

- Advertisement -
- Advertisement -

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಬಂಧಿಸಿದ್ದಲ್ಲದೇ, ಗುರುತರ ಆರೋಪ ಹೊರಿಸಿ ಮೊಕದ್ದಮೆ ದಾಖಲಿಸಿರುವ ಪೊಲೀಸರ ನಡೆಯನ್ನು ಎಎಪಿ ಖಂಡಿಸಿದ್ದು, ಈ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿದೆ.

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, “ಸರ್ಕಾರ ಹಾಗೂ ಬಿಬಿಎಂಪಿಯ ನಿರ್ಲಕ್ಷ್ಯದಿಂದಾಗಿ ರಸ್ತೆಗುಂಡಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಬಲಿಯಾಗಿರುವುದನ್ನು ಖಂಡಿಸಿ ಸೋಮವಾರ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದೆವು. ಈ ವೇಳೆ ಪೊಲೀಸರು ಎಎಪಿಯ 14 ಮುಖಂಡರನ್ನು ಬಂಧಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸ್ಥಳೀಯ ಬಿಜೆಪಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಚಿತಾವಣೆಯಿಂದಾಗಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಪೊಲೀಸರ ದೌರ್ಜನ್ಯವನ್ನು ಗೃಹಸಚಿವರು ಹಾಗೂ ಮಾನವ ಹಕ್ಕುಗಳ ಆಯೋಗದಲ್ಲಿ ಪ್ರಶ್ನಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

“ಅಶ್ವಿನ್‌ರವರನ್ನು ಬಲಿಪಡೆದ ರಸ್ತೆಗುಂಡಿ ಹುಟ್ಟಿಕೊಳ್ಳಲು ಸ್ಥಳೀಯ ಶಾಸಕರು, ಬಿಬಿಎಂಪಿ ಆಯುಕ್ತರು ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರೇ ನೇರ ಕಾರಣ. ಈ ಮೂವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಭ್ರಷ್ಟ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ನಮ್ಮನ್ನು ಬಂಧಿಸಿದ ಪೊಲೀಸರಿಗೆ ಸಮಾಜದ ಬಗ್ಗೆ ಕಾಳಜಿಯಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಿ. ಅಶ್ವಿನ್‌ ಕುಟುಂಬಕ್ಕೆ ಸಿಎಂ ಬಸವರಾಜ್‌ ಬೊಮ್ಮಾಯಿಯವರು ಶೀಘ್ರವೇ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು” ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಮಾತನಾಡಿ, “ಉತ್ತಮ ರಸ್ತೆಗಾಗಿ ಬೆಂಗಳೂರಿನ ಜನತೆ ವಿವಿಧ ರೀತಿಯ ತೆರಿಗೆ ಕಟ್ಟುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಗುಂಡಿರಹಿತ ರಸ್ತೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಆದ್ಯ ಕರ್ತ್ಯವ್ಯ. ಆದರೆ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದಲ್ಲಿ ತುಂಬಿರುವ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಂದಾಗಿ ರಸ್ತೆಗಳು ಯಮಸ್ವರೂಪಿ ಆಗಿವೆ. ಗುಂಡಿ ಮುಚ್ಚಲು ತಾಕತ್ತಿಲ್ಲ ಸರ್ಕಾರವು ಪ್ರಶ್ನಿಸುವವರ ಬಾಯಿ ಮುಚ್ಚಿಸಲು ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಇಂತಹ ಕುತಂತ್ರಕ್ಕೆ ಆಮ್‌ ಆದ್ಮಿ ಪಾರ್ಟಿಯು ಹೆದರುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಹಾಗೂ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು,ವಿಜಯ್ ಶಾಸ್ತ್ರಿಮಠ, ಸುಹಾಸಿನಿ ಪಣಿರಾಜ್ ಇನ್ನಿತರ ನಾಯಕರುಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...