Homeಕರ್ನಾಟಕಪೊಲೀಸರ ದೌರ್ಜನ್ಯಕ್ಕೆ ಎಎಪಿ ಖಂಡನೆ: ಮೃತರ ಕುಟುಂಬಕ್ಕೆ ಕೋಟಿ ರೂ. ಪರಿಹಾರಕ್ಕೆ ಆಗ್ರಹ

ಪೊಲೀಸರ ದೌರ್ಜನ್ಯಕ್ಕೆ ಎಎಪಿ ಖಂಡನೆ: ಮೃತರ ಕುಟುಂಬಕ್ಕೆ ಕೋಟಿ ರೂ. ಪರಿಹಾರಕ್ಕೆ ಆಗ್ರಹ

- Advertisement -
- Advertisement -

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಆಮ್‌ ಆದ್ಮಿ ಪಾರ್ಟಿ ಮುಖಂಡರನ್ನು ಬಂಧಿಸಿದ್ದಲ್ಲದೇ, ಗುರುತರ ಆರೋಪ ಹೊರಿಸಿ ಮೊಕದ್ದಮೆ ದಾಖಲಿಸಿರುವ ಪೊಲೀಸರ ನಡೆಯನ್ನು ಎಎಪಿ ಖಂಡಿಸಿದ್ದು, ಈ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿದೆ.

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, “ಸರ್ಕಾರ ಹಾಗೂ ಬಿಬಿಎಂಪಿಯ ನಿರ್ಲಕ್ಷ್ಯದಿಂದಾಗಿ ರಸ್ತೆಗುಂಡಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಬಲಿಯಾಗಿರುವುದನ್ನು ಖಂಡಿಸಿ ಸೋಮವಾರ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದೆವು. ಈ ವೇಳೆ ಪೊಲೀಸರು ಎಎಪಿಯ 14 ಮುಖಂಡರನ್ನು ಬಂಧಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸ್ಥಳೀಯ ಬಿಜೆಪಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಚಿತಾವಣೆಯಿಂದಾಗಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಪೊಲೀಸರ ದೌರ್ಜನ್ಯವನ್ನು ಗೃಹಸಚಿವರು ಹಾಗೂ ಮಾನವ ಹಕ್ಕುಗಳ ಆಯೋಗದಲ್ಲಿ ಪ್ರಶ್ನಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

“ಅಶ್ವಿನ್‌ರವರನ್ನು ಬಲಿಪಡೆದ ರಸ್ತೆಗುಂಡಿ ಹುಟ್ಟಿಕೊಳ್ಳಲು ಸ್ಥಳೀಯ ಶಾಸಕರು, ಬಿಬಿಎಂಪಿ ಆಯುಕ್ತರು ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರೇ ನೇರ ಕಾರಣ. ಈ ಮೂವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಭ್ರಷ್ಟ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ನಮ್ಮನ್ನು ಬಂಧಿಸಿದ ಪೊಲೀಸರಿಗೆ ಸಮಾಜದ ಬಗ್ಗೆ ಕಾಳಜಿಯಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಿ. ಅಶ್ವಿನ್‌ ಕುಟುಂಬಕ್ಕೆ ಸಿಎಂ ಬಸವರಾಜ್‌ ಬೊಮ್ಮಾಯಿಯವರು ಶೀಘ್ರವೇ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು” ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಮಾತನಾಡಿ, “ಉತ್ತಮ ರಸ್ತೆಗಾಗಿ ಬೆಂಗಳೂರಿನ ಜನತೆ ವಿವಿಧ ರೀತಿಯ ತೆರಿಗೆ ಕಟ್ಟುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಗುಂಡಿರಹಿತ ರಸ್ತೆಗಳನ್ನು ನಿರ್ಮಿಸಿಕೊಡುವುದು ಸರ್ಕಾರದ ಆದ್ಯ ಕರ್ತ್ಯವ್ಯ. ಆದರೆ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದಲ್ಲಿ ತುಂಬಿರುವ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಂದಾಗಿ ರಸ್ತೆಗಳು ಯಮಸ್ವರೂಪಿ ಆಗಿವೆ. ಗುಂಡಿ ಮುಚ್ಚಲು ತಾಕತ್ತಿಲ್ಲ ಸರ್ಕಾರವು ಪ್ರಶ್ನಿಸುವವರ ಬಾಯಿ ಮುಚ್ಚಿಸಲು ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಇಂತಹ ಕುತಂತ್ರಕ್ಕೆ ಆಮ್‌ ಆದ್ಮಿ ಪಾರ್ಟಿಯು ಹೆದರುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಹಾಗೂ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು,ವಿಜಯ್ ಶಾಸ್ತ್ರಿಮಠ, ಸುಹಾಸಿನಿ ಪಣಿರಾಜ್ ಇನ್ನಿತರ ನಾಯಕರುಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...