Homeಮುಖಪುಟಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್‌‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ವಾರ ಭಾರೀ ಸೋಲನ್ನು ಅನುಭವಿಸಿದ ಐದು ರಾಜ್ಯಗಳ ತಮ್ಮ ಪಕ್ಷದ ಮುಖ್ಯಸ್ಥರನ್ನು ಮಂಗಳವಾರ ವಜಾಗೊಳಿಸಿದ್ದಾರೆ. ಇದು ಪಕ್ಷದ ‘ಮರುಸಂಘಟನೆ’ಯ ಮೊದಲ ಹೆಜ್ಜೆ ಎಂದು ಕರೆಯಲಾಗಿದೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಎಂಟು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡ ನವಜೋತ್ ಸಿಂಗ್ ಸಿಧು ಕೂಡಾ ರಾಜೀನಾಮೆ ಕೇಳಿದ ನಾಯಕರಲ್ಲಿ ಸೇರಿದ್ದಾರೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ರಾಜ್ಯ ಕಾಂಗ್ರೆಸ್ ಘಟಕಗಳ ‘ಪುನರ್‌ ಸಂಘಟನೆಗೆ ಅನುಕೂಲವಾಗುವಂತೆ’ ರಾಜೀನಾಮೆಗಳನ್ನು ಕೇಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪಂಜಾಬ್‌‌‌ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆ‌ಸ್‌‌ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ (ಎಎಪಿ) ವಿರುದ್ಧ ಸೋತಿದೆ. ಇತರ ನಾಲ್ಕು ರಾಜ್ಯಗಳಲ್ಲಿ ಪ್ರಭಲ ಸ್ಪರ್ಧೆ ನೀಡಲು ಪಕ್ಷವು ವಿಫಲಗೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲವಾದರೆ ದೇಶ ಛಿದ್ರವಾಗುತ್ತದೆ, ಪಕ್ಷ ಸಂಘಟಿಸಿ: ಡಿ.ಕೆ.ಶಿವಕುಮಾರ್‌‌

ಪಂಜಾಬ್‌ನಲ್ಲಿ ಕಾಂಗ್ರೆಸ್‌ ತೀರಾ ಹೀನಾಯವಾಗಿ ಸೋಲುಂಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಿಧು ಅವರು ಅಮರಿಂದರ್ ಸಿಂಗ್ ಮತ್ತು ನಿರ್ಗಮಿತ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಘರ್ಷಣೆ ಮಾಡಿದ್ದರಿಂದ ಕಾಂಗ್ರೆಸ್ ಆಂತರಿಕವಾಗಿ ಕುಸಿಯಿತು ಎಂದು ವಿಶ್ಲೇಷಿಸಲಾಗಿದೆ.

ರಾಜ್ಯಗಳಲ್ಲಿ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ಭಾನುವಾರ ನಡೆದ ಕಾಂಗ್ರೆಸ್ ನಾಯಕತ್ವದ ಸಭೆಯ ನಂತರ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂಬ ಸೋನಿಯಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಹಿರಿಯ ನಾಯಕರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಸೋನಿಯಾ ಗಾಂಧಿ ಅವರು ತಮ್ಮ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಪಕ್ಷದ ನಾಯಕರು ಹೇಳುವಂತೆ, ಸೋನಿಯಾ ಗಾಂಧಿ ಅವರು ರಾಜೀನಾಮೆ ಪ್ರಸ್ತಾಪವನ್ನು ‘ಪಕ್ಷದ ಹಿತಾಸಕ್ತಿಗಾಗಿ ತ್ಯಾಗ’ ಎಂದು ಪ್ರಸ್ತುತಪಡಿಸಿದರು. ಆದರೆ ಅದನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

“ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕುಟುಂಬ ಸದಸ್ಯರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪಕ್ಷಕ್ಕಾಗಿ ತಮ್ಮ ಹುದ್ದೆಗಳನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು, ಆದರೆ ನಾವೆಲ್ಲರೂ ಇದನ್ನು ತಿರಸ್ಕರಿಸಿದ್ದೇವೆ” ಎಂದು ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಹುಲ್ ಗಾಂಧಿ ಅವರು ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿಲ್ಲ.

ನಾಲ್ಕೂವರೆ ಗಂಟೆಗಳ ಸಭೆಯ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಉಳಿಯುತ್ತಾರೆ ಮತ್ತು ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಲು ‘ಪರಿಣಾಮಕಾರಿ ಮತ್ತು ತಕ್ಷಣದ ಕ್ರಮಗಳನ್ನು’ ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದೆ.

ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಸೇರಿದಂತೆ ತನ್ನ ಎಲ್ಲಾ ಮಾಜಿ ನಾಯಕರ ವೀಡಿಯೊವನ್ನು ಪಕ್ಷವು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಿದೆ. ಇದು ಪಕ್ಷದಲ್ಲಿ ಗಾಂಧಿ ಕುಟುಂಬವು ಅಧಿಕಾರದಲ್ಲಿ ಉಳಿಯುತ್ತದೆ ಎಂದು ಸೂಚಿಸುತ್ತದೆ.

ಕಾಂಗ್ರೆಸ್ “ಭಿನ್ನಮತೀಯರು” ಅಥವಾ G-23 ನಾಯಕರ ಗುಂಪು ಸೋನಿಯಾ ಗಾಂಧಿಯವರಿಗೆ ವ್ಯಾಪಕವಾದ ಸಾಂಸ್ಥಿಕ ಬದಲಾವಣೆ ಮಾಡುವಂತೆ ಕರೆ ನೀಡಿದ್ದಾರೆ. ಜಿ -23 ರ ಪ್ರಮುಖ ಸದಸ್ಯರಾದ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಗಾಂಧಿಗಳು ಪಕ್ಕಕ್ಕೆ ಸರಿದು, ಪಕ್ಷವನ್ನು ಮುನ್ನಡೆಸಲು ಬೇರೆ ನಾಯಕರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಲೆ ಉತ್ತಮ ನಾಯಕತ್ವ ಇಲ್ಲದೆ ಕೆಳಗಿನ ನಾಯಕತ್ವ ಬೆಳೆಯದು. ದೇಶ ಇಂದು ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಹೊರಬರಲು, ದೂರಗಾಮಿ ನೋಟ, ಗುರಿ ಮತ್ತು ಅದನ್ನು ಜನಮನದಲ್ಲಿ ಸ್ಥಾಪಿಸಿ ಹೋರಾಟದ ಕಿಚ್ಚು ಹಚ್ಚುವಲ್ಲಿ ಕಾಂಗ್ರೆಸ್ ನಾಯಕತ್ವ ಸೋತಿದೆ ಒಮ್ಮೆ ಅಲ್ಲ, ಅನೇಕ ಬಾರಿ! ಆದ್ದರಿಂದ, ಕಾಂಗ್ರೆಸ್ ಪರ್ಯಾಯ ರಾಜಕಾರಣದ ಶಕ್ತಿಯಾಗಿ ಏಳಲು ಮೊದಲು, ಕಾಂಗ್ರೆಸ್ ನ ಕೇಂದ್ರ ನಾಯಕತ್ವ ತೆರೆದ ಮನಸ್ಸಿನಿಂದ ಯೋಚಿಸಿ, ಕೆಳಗಿಳಿದು, ಹುಮ್ಮನಸ್ಸಿನಿಂದ ಪಕ್ಷ ಕಟ್ಟುವ ನಾಯಕತ್ವವನ್ನು ರೂಪಿಸಲು ಅನುವು ಮಾಡಿಕೊಡಬೇಕು. ಕಾಂಗ್ರೆಸ್ ನ ಮತ್ತು ಮುಖ್ಯವಾಗಿ, ದೇಶದ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಎಂಬುದು ನನ್ನ ನಮ್ರ ಅನಿಸಿಕೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...