Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...