Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...