Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....