Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...