Homeಮುಖಪುಟಮುಚ್ಚಿದ ಕವರ್‌ಗಳಲ್ಲಿ ದಾಖಲೆ ಸಲ್ಲಿಸುವ ಕ್ರಮವನ್ನು ಟೀಕಿಸಿದ ಸುಪ್ರೀಂಕೋರ್ಟ್!

ಮುಚ್ಚಿದ ಕವರ್‌ಗಳಲ್ಲಿ ದಾಖಲೆ ಸಲ್ಲಿಸುವ ಕ್ರಮವನ್ನು ಟೀಕಿಸಿದ ಸುಪ್ರೀಂಕೋರ್ಟ್!

- Advertisement -
- Advertisement -

ಎರಡು ಪ್ರತ್ಯೇಕ ವಿಚಾರಣೆಗಳ ಸಂದರ್ಭದಲ್ಲಿ, ಸರ್ಕಾರಗಳ ‘ಮುಚ್ಚಿದ ಕವರ್‌ ನ್ಯಾಯಶಾಸ್ತ್ರ’ದ ಕ್ರಮವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಟೀಕಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಕ್ರಮದಂತೆ ಸರ್ಕಾರಗಳು ಮತ್ತು ಅದರ ಏಜೆನ್ಸಿಗಳು ಮೊಹರು ಮಾಡಿದ ಲಕೋಟೆಗಳಲ್ಲಿ ದಾಖಲೆಗಳನ್ನು ನ್ಯಾಯಾಧೀಶರಿಗೆ ಸಲ್ಲಿಸುತ್ತವೆ. ಈ ದಾಖಲೆಗಳಲ್ಲಿ ಇರುವ ವಿಷಯಗಳನ್ನು ಎದುರು ವಾದಿಸುತ್ತಿರುವ ಪಕ್ಷದವರೊಂದಿಗೆ ಹಂಚಿಕೊಳ್ಳುವುದಿಲ್ಲ.

ದಿ ಹಿಂದೂ ಪ್ರಕಾರ, ಪ್ರಕರಣವು ಹೆಚ್ಚು ಸೂಕ್ಷ್ಮವಾಗಿದ್ದು, ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಬಹುದು ಎಂಬ ಆಧಾರದ ಮೇಲೆ ನಡೆಯನ್ನು ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್ 

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಬಿಹಾರ ಸರ್ಕಾರದ ವಿರುದ್ಧ ವ್ಯಕ್ತಿಯೊಬ್ಬರು ಸಲ್ಲಿಸಿದ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆ ನಡೆಸುವಾಗ, ಮುಚ್ಚಿದ ಕವರ್‌ನಲ್ಲಿ ದಾಖಲೆಗಳನ್ನು ಸ್ವೀಕರಿಸಲು ನಿರಾಕರಿಸಿದರು.

“ಯಾವುದೇ ಸೀಲ್ಡ್ ಕವರ್‌ಗಳನ್ನು ನೀಡಬೇಡಿ, ಅದನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ, ನನಗೆ ಯಾವುದೇ ಸೀಲ್ಡ್ ಕವರ್ ಬೇಡ” ಎಂದು ನ್ಯಾಯಮೂರ್ತಿ ರಮಣ ಹೇಳಿದ್ದಾರೆ ಎಂದು ಲೈಲಾ ವೆಬ್‌ಸೈಟ್‌ ವರದಿ ಮಾಡಿದೆ.

ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಟಿವಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿಚಾರಣೆಯ ಸಮಯದಲ್ಲಿ ‘ಮುಚ್ಚಿದ ಕವರ್’ ಅನ್ನು ಅವಲಂಬಿಸುವುದು ಸರಿಯೆ ಎಂಬುವುದನ್ನು ಪರಿಶೀಲಿಸುವುದಾಗಿ ಹೇಳಿದೆ.

‘ಸೀಲ್ಡ್ ಕವರ್ ನ್ಯಾಯಶಾಸ್ತ್ರವನ್ನು ನಾನು ತುಂಬಾ ವಿರೋಧಿಸುತ್ತೇನೆ’ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇದನ್ನೂ ಓದಿ:  ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ

ಮೀಡಿಯಾ ಒನ್ ಪ್ರಕರಣದಲ್ಲಿ, ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಕೇರಳ ಹೈಕೋರ್ಟ್ ಮಾರ್ಚ್ 2 ರಂದು ಸುದ್ದಿ ವಾಹಿನಿಯ ಮೇಲಿನ ಒಕ್ಕೂಟ ಸರ್ಕಾರದ ನಿಷೇಧವನ್ನು ಎತ್ತಿ ಹಿಡಿದಿತ್ತು. ಒಕ್ಕೂಟ ಸರ್ಕಾರ ನೀಡಿರುವ ಕೆಲವು ಗೌಪ್ಯ ಕಡತಗಳು ಚಾನೆಲ್ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಹೇಳಿದ್ದರು.

ಇದರ ನಂತರ ಚಾನೆಲ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಮೀಡಿಯಾ ಒನ್ ಟಿವಿಯ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಫೈಲ್‌ಗಳನ್ನು ಪ್ರಸ್ತುತಪಡಿಸುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿತು. ಕಡತಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ನಿಷೇಧಕ್ಕೆ ತಡೆಯಾಜ್ಞೆ ನೀಡಿದೆ.

ಒಕ್ಕೂಟ ಸರ್ಕಾರವು ತಮ್ಮ ನಿರ್ಧಾರವನ್ನು ರಕ್ಷಿಸಿಕೊಳ್ಳುವ ಕಾರಣಗಳನ್ನು ಚಾನೆಲ್‌ಗೆ ಬಹಿರಂಗಪಡಿಸಬೇಕು ಎಂದು ನ್ಯಾಯಾಲಯವು ಸರ್ಕಾರಕ್ಕೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. “ಫೈಲ್‌ಗಳನ್ನು ಬಹಿರಂಗಪಡಿಸುವಲ್ಲಿ ತೊಂದರೆ ಏನಿದೆ?” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಕೀಲ ನ್ಯಾಯಾಲಯಕ್ಕೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...