Homeಮುಖಪುಟಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗ ಮಾಡಿಕೊಳ್ಳುವ ಅಪಾಯ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಆತಂಕ ವ್ಯಕ್ತಪಡಿಸಿದ್ದು, “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯದಲ್ಲಿ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಆಗುತ್ತಿರುವ ಬಲಾಢ್ಯರ ವ್ಯವಸ್ಥಿತ ಹಸ್ತಕ್ಷೇಪವನ್ನು ಕೊನೆಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸೋನಿಯಾ ಅವರು, “ರಾಜಕೀಯ ಪಕ್ಷಗಳ ನಾಯಕರು ರಾಜಕೀಯ ನಿರೂಪಣೆಗಳಿಗಾಗಿ ಜಾಗತಿಕ ಕಂಪನಿಗಳಾದ ಫೇಸ್‌ಬುಕ್ ಮತ್ತು ಟ್ವಿಟರ್ ಅನ್ನು ಬಳಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಜಾಗತಿಕ ಸಾಮಾಜಿಕ ಮಾಧ್ಯಮ ಕಂಪನಿಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮನಾದ ಅವಕಾಶವನ್ನು ಒದಗಿಸುತ್ತಿಲ್ಲ ಎಂಬುದು ಪದೇ ಪದೇ ಸಾರ್ವಜನಿಕ ಗಮನಕ್ಕೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

‘ಅಲ್ ಜಜೀರಾ’ ಮತ್ತು ‘ದಿ ರಿಪೋಟರ್ಸ್ ಕಲೆಕ್ಟಿವ್‌’ನಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿದ ಅವರು, ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಚುನಾವಣಾ ಜಾಹೀರಾತುಗಳಿಗಾಗಿ ಆಡಳಿತಾರೂಢ ಬಿಜೆಪಿಗೆ ಫೇಸ್‌ಬುಕ್ ಹೆಚ್ಚಿನ ಅವಕಾಶ ನೀಡಿದೆ. ಸರ್ಕಾರದ ವಿರುದ್ಧ ಮಾತನಾಡುತ್ತಿದ್ದ ಎಲ್ಲರ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯ ಬಹಳ ಗಂಭೀರವಾದದ್ದು ಎಂದಿರುವ ಅವರು, “ಅಧಿಕಾರ ಸ್ಥಾಪನೆಗೆ ಸಹಿಕರಿಸುವುದರ ಜೊತೆಗೆ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿರುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಭಾವನಾತ್ಮಕ ಸಂಗತಿಗಳ ತಪ್ಪು ಮಾಹಿತಿ, ನಕಲಿ ಜಾಹೀರಾತಿನ ಮೂಲಕ ಯುವ ಮತ್ತು ಹಿರಿಯರ ಮನಸ್ಸಿನಲ್ಲಿ ದ್ವೇಷ ತುಂಬಲಾಗುತ್ತಿದೆ. ಫೇಸ್ ಬುಕ್ ನಂತಹ ಕಂಪನಿಗಳು ಇದನ್ನು ಅರಿತು ಲಾಭ ಮಾಡಿಕೊಳ್ಳುತ್ತಿವೆ” ಎಂದು ಎಚ್ಚರಿಸಿದ್ದಾರೆ.

“ಅಧಿಕಾರ ಸ್ಥಾಪನೆ, ಫೇಸ್‌ಬುಕ್‌ನಂತಹ ಜಾಗತಿಕ ಸಾಮಾಜಿಕ ಮಾಧ್ಯಮ ಹಾಗೂ ದೈತ್ಯ ಕಂಪನಿಗಳ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಈಗ ಬಹಿರಂಗವಾಗಿರುವ ವರದಿಗಳು ತೋರಿಸುತ್ತವೆ. ಇದು ಪಕ್ಷಪಾತದ ರಾಜಕೀಯವನ್ನು ಮೀರಿದೆ. ಯಾರು ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ” ಎಂದು ಅವರು ಮನವಿ ಮಾಡಿದ್ದಾರೆ.

ಆಲ್‌ಜಜೀರಾ ವರದಿಯಲ್ಲಿ ಏನಿತ್ತು?

ನ್ಯೂ ಎಮರ್ಜಿಂಗ್ ವರ್ಲ್ಡ್ ಆಫ್ ಜರ್ನಲಿಸಂ ಲಿಮಿಟೆಡ್‌ನ ಸಂಕ್ಷಿಪ್ತ ರೂಪವಾಗಿರುವ NEWJ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಗ್ರೂಪ್ ಒಡೆತನದ ಭಾರತದ ಅತಿದೊಡ್ಡ ಟೆಲಿಕಾಂ ಮತ್ತು ಇಂಟರ್ನೆಟ್ ಕಂಪನಿ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ! ಈ ಫೇಸ್‌ಬುಕ್‌ ಪುಟವು ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿದೆ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಾ ಬಿಜೆಪಿಗೆ ರಾಜಕೀಯ ಅನುಕೂಲ ಮಾಡಿಕೊಡುತ್ತಿದೆ ಎಂದು ವಿಸ್ತೃತವಾಗಿ ಆಲ್‌ಜಜೀರಾ ವರದಿ ಮಾಡಿದೆ. (ವರದಿಯ ಅನುವಾದ ‘ಇಲ್ಲಿ’ ಓದಿರಿ)

ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿಯಲ್ಲಿ ಏನಿದೆ?

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಪಿಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ. 2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ ಎಂದು ತಿಳಿದುಬಂದಿದೆ. (ಪೂರ್ಣ ವರದಿ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...