Homeಮುಖಪುಟಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗ ಮಾಡಿಕೊಳ್ಳುವ ಅಪಾಯ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಆತಂಕ ವ್ಯಕ್ತಪಡಿಸಿದ್ದು, “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯದಲ್ಲಿ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಆಗುತ್ತಿರುವ ಬಲಾಢ್ಯರ ವ್ಯವಸ್ಥಿತ ಹಸ್ತಕ್ಷೇಪವನ್ನು ಕೊನೆಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸೋನಿಯಾ ಅವರು, “ರಾಜಕೀಯ ಪಕ್ಷಗಳ ನಾಯಕರು ರಾಜಕೀಯ ನಿರೂಪಣೆಗಳಿಗಾಗಿ ಜಾಗತಿಕ ಕಂಪನಿಗಳಾದ ಫೇಸ್‌ಬುಕ್ ಮತ್ತು ಟ್ವಿಟರ್ ಅನ್ನು ಬಳಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಜಾಗತಿಕ ಸಾಮಾಜಿಕ ಮಾಧ್ಯಮ ಕಂಪನಿಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮನಾದ ಅವಕಾಶವನ್ನು ಒದಗಿಸುತ್ತಿಲ್ಲ ಎಂಬುದು ಪದೇ ಪದೇ ಸಾರ್ವಜನಿಕ ಗಮನಕ್ಕೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

‘ಅಲ್ ಜಜೀರಾ’ ಮತ್ತು ‘ದಿ ರಿಪೋಟರ್ಸ್ ಕಲೆಕ್ಟಿವ್‌’ನಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿದ ಅವರು, ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಚುನಾವಣಾ ಜಾಹೀರಾತುಗಳಿಗಾಗಿ ಆಡಳಿತಾರೂಢ ಬಿಜೆಪಿಗೆ ಫೇಸ್‌ಬುಕ್ ಹೆಚ್ಚಿನ ಅವಕಾಶ ನೀಡಿದೆ. ಸರ್ಕಾರದ ವಿರುದ್ಧ ಮಾತನಾಡುತ್ತಿದ್ದ ಎಲ್ಲರ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯ ಬಹಳ ಗಂಭೀರವಾದದ್ದು ಎಂದಿರುವ ಅವರು, “ಅಧಿಕಾರ ಸ್ಥಾಪನೆಗೆ ಸಹಿಕರಿಸುವುದರ ಜೊತೆಗೆ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿರುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಭಾವನಾತ್ಮಕ ಸಂಗತಿಗಳ ತಪ್ಪು ಮಾಹಿತಿ, ನಕಲಿ ಜಾಹೀರಾತಿನ ಮೂಲಕ ಯುವ ಮತ್ತು ಹಿರಿಯರ ಮನಸ್ಸಿನಲ್ಲಿ ದ್ವೇಷ ತುಂಬಲಾಗುತ್ತಿದೆ. ಫೇಸ್ ಬುಕ್ ನಂತಹ ಕಂಪನಿಗಳು ಇದನ್ನು ಅರಿತು ಲಾಭ ಮಾಡಿಕೊಳ್ಳುತ್ತಿವೆ” ಎಂದು ಎಚ್ಚರಿಸಿದ್ದಾರೆ.

“ಅಧಿಕಾರ ಸ್ಥಾಪನೆ, ಫೇಸ್‌ಬುಕ್‌ನಂತಹ ಜಾಗತಿಕ ಸಾಮಾಜಿಕ ಮಾಧ್ಯಮ ಹಾಗೂ ದೈತ್ಯ ಕಂಪನಿಗಳ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಈಗ ಬಹಿರಂಗವಾಗಿರುವ ವರದಿಗಳು ತೋರಿಸುತ್ತವೆ. ಇದು ಪಕ್ಷಪಾತದ ರಾಜಕೀಯವನ್ನು ಮೀರಿದೆ. ಯಾರು ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ” ಎಂದು ಅವರು ಮನವಿ ಮಾಡಿದ್ದಾರೆ.

ಆಲ್‌ಜಜೀರಾ ವರದಿಯಲ್ಲಿ ಏನಿತ್ತು?

ನ್ಯೂ ಎಮರ್ಜಿಂಗ್ ವರ್ಲ್ಡ್ ಆಫ್ ಜರ್ನಲಿಸಂ ಲಿಮಿಟೆಡ್‌ನ ಸಂಕ್ಷಿಪ್ತ ರೂಪವಾಗಿರುವ NEWJ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಗ್ರೂಪ್ ಒಡೆತನದ ಭಾರತದ ಅತಿದೊಡ್ಡ ಟೆಲಿಕಾಂ ಮತ್ತು ಇಂಟರ್ನೆಟ್ ಕಂಪನಿ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ! ಈ ಫೇಸ್‌ಬುಕ್‌ ಪುಟವು ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿದೆ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಾ ಬಿಜೆಪಿಗೆ ರಾಜಕೀಯ ಅನುಕೂಲ ಮಾಡಿಕೊಡುತ್ತಿದೆ ಎಂದು ವಿಸ್ತೃತವಾಗಿ ಆಲ್‌ಜಜೀರಾ ವರದಿ ಮಾಡಿದೆ. (ವರದಿಯ ಅನುವಾದ ‘ಇಲ್ಲಿ’ ಓದಿರಿ)

ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿಯಲ್ಲಿ ಏನಿದೆ?

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಪಿಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ. 2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ ಎಂದು ತಿಳಿದುಬಂದಿದೆ. (ಪೂರ್ಣ ವರದಿ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...