Homeಮುಖಪುಟಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗ ಮಾಡಿಕೊಳ್ಳುವ ಅಪಾಯ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಆತಂಕ ವ್ಯಕ್ತಪಡಿಸಿದ್ದು, “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯದಲ್ಲಿ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಆಗುತ್ತಿರುವ ಬಲಾಢ್ಯರ ವ್ಯವಸ್ಥಿತ ಹಸ್ತಕ್ಷೇಪವನ್ನು ಕೊನೆಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸೋನಿಯಾ ಅವರು, “ರಾಜಕೀಯ ಪಕ್ಷಗಳ ನಾಯಕರು ರಾಜಕೀಯ ನಿರೂಪಣೆಗಳಿಗಾಗಿ ಜಾಗತಿಕ ಕಂಪನಿಗಳಾದ ಫೇಸ್‌ಬುಕ್ ಮತ್ತು ಟ್ವಿಟರ್ ಅನ್ನು ಬಳಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಜಾಗತಿಕ ಸಾಮಾಜಿಕ ಮಾಧ್ಯಮ ಕಂಪನಿಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮನಾದ ಅವಕಾಶವನ್ನು ಒದಗಿಸುತ್ತಿಲ್ಲ ಎಂಬುದು ಪದೇ ಪದೇ ಸಾರ್ವಜನಿಕ ಗಮನಕ್ಕೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

‘ಅಲ್ ಜಜೀರಾ’ ಮತ್ತು ‘ದಿ ರಿಪೋಟರ್ಸ್ ಕಲೆಕ್ಟಿವ್‌’ನಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿದ ಅವರು, ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಚುನಾವಣಾ ಜಾಹೀರಾತುಗಳಿಗಾಗಿ ಆಡಳಿತಾರೂಢ ಬಿಜೆಪಿಗೆ ಫೇಸ್‌ಬುಕ್ ಹೆಚ್ಚಿನ ಅವಕಾಶ ನೀಡಿದೆ. ಸರ್ಕಾರದ ವಿರುದ್ಧ ಮಾತನಾಡುತ್ತಿದ್ದ ಎಲ್ಲರ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯ ಬಹಳ ಗಂಭೀರವಾದದ್ದು ಎಂದಿರುವ ಅವರು, “ಅಧಿಕಾರ ಸ್ಥಾಪನೆಗೆ ಸಹಿಕರಿಸುವುದರ ಜೊತೆಗೆ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿರುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಭಾವನಾತ್ಮಕ ಸಂಗತಿಗಳ ತಪ್ಪು ಮಾಹಿತಿ, ನಕಲಿ ಜಾಹೀರಾತಿನ ಮೂಲಕ ಯುವ ಮತ್ತು ಹಿರಿಯರ ಮನಸ್ಸಿನಲ್ಲಿ ದ್ವೇಷ ತುಂಬಲಾಗುತ್ತಿದೆ. ಫೇಸ್ ಬುಕ್ ನಂತಹ ಕಂಪನಿಗಳು ಇದನ್ನು ಅರಿತು ಲಾಭ ಮಾಡಿಕೊಳ್ಳುತ್ತಿವೆ” ಎಂದು ಎಚ್ಚರಿಸಿದ್ದಾರೆ.

“ಅಧಿಕಾರ ಸ್ಥಾಪನೆ, ಫೇಸ್‌ಬುಕ್‌ನಂತಹ ಜಾಗತಿಕ ಸಾಮಾಜಿಕ ಮಾಧ್ಯಮ ಹಾಗೂ ದೈತ್ಯ ಕಂಪನಿಗಳ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಈಗ ಬಹಿರಂಗವಾಗಿರುವ ವರದಿಗಳು ತೋರಿಸುತ್ತವೆ. ಇದು ಪಕ್ಷಪಾತದ ರಾಜಕೀಯವನ್ನು ಮೀರಿದೆ. ಯಾರು ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ” ಎಂದು ಅವರು ಮನವಿ ಮಾಡಿದ್ದಾರೆ.

ಆಲ್‌ಜಜೀರಾ ವರದಿಯಲ್ಲಿ ಏನಿತ್ತು?

ನ್ಯೂ ಎಮರ್ಜಿಂಗ್ ವರ್ಲ್ಡ್ ಆಫ್ ಜರ್ನಲಿಸಂ ಲಿಮಿಟೆಡ್‌ನ ಸಂಕ್ಷಿಪ್ತ ರೂಪವಾಗಿರುವ NEWJ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಗ್ರೂಪ್ ಒಡೆತನದ ಭಾರತದ ಅತಿದೊಡ್ಡ ಟೆಲಿಕಾಂ ಮತ್ತು ಇಂಟರ್ನೆಟ್ ಕಂಪನಿ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ! ಈ ಫೇಸ್‌ಬುಕ್‌ ಪುಟವು ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿದೆ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಾ ಬಿಜೆಪಿಗೆ ರಾಜಕೀಯ ಅನುಕೂಲ ಮಾಡಿಕೊಡುತ್ತಿದೆ ಎಂದು ವಿಸ್ತೃತವಾಗಿ ಆಲ್‌ಜಜೀರಾ ವರದಿ ಮಾಡಿದೆ. (ವರದಿಯ ಅನುವಾದ ‘ಇಲ್ಲಿ’ ಓದಿರಿ)

ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿಯಲ್ಲಿ ಏನಿದೆ?

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಪಿಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ. 2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ ಎಂದು ತಿಳಿದುಬಂದಿದೆ. (ಪೂರ್ಣ ವರದಿ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...