Homeಮುಖಪುಟಉತ್ತರ ರೈಲ್ವೆಗೆ 13 ಸಾವಿರ ಕೋಟಿ ರೂ., ದಕ್ಷಿಣಕ್ಕೆ ಕೇವಲ 59 ಕೋಟಿ ರೂ.: ಸದನದಲ್ಲಿ...

ಉತ್ತರ ರೈಲ್ವೆಗೆ 13 ಸಾವಿರ ಕೋಟಿ ರೂ., ದಕ್ಷಿಣಕ್ಕೆ ಕೇವಲ 59 ಕೋಟಿ ರೂ.: ಸದನದಲ್ಲಿ ಒಕ್ಕೂಟ ಸರ್ಕಾರದ ಅನ್ಯಾಯ ಬಿಚ್ಚಿಟ್ಟ ಸಂಸದೆ ಕನಿಮೋಳಿ

- Advertisement -
- Advertisement -

ತಮಿಳುನಾಡು ಸಂಸದೆ ಕನಿಮೋಳಿ ಅವರು ಒಕ್ಕೂಟ ಸರ್ಕಾರವು ದಕ್ಷಿಣ ಭಾರತಕ್ಕೆ ನೀಡುತ್ತಿರುವ ‘ಕಡಿಮೆ’ ಹಣ ಹಂಚಿಕೆ ಕುರಿತು ವ್ಯಂಗ್ಯವಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ ಅವರು 2022 ರ ಬಜೆಟ್ ಮೇಲಿನ ಚರ್ಚೆಯ ಬಗ್ಗೆ ಮಾತನಾಡುತ್ತಾ, “ಉತ್ತರ ಭಾರತದ ರೈಲ್ವೆಗೆ 13,200 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ, ಆದರೆ ದಕ್ಷಿಣಕ್ಕೆ 59 ಕೋಟಿ ರೂ ಮಾತ್ರ ನೀಡಲಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕನಿಮೋಳಿ ಅವರು ದಕ್ಷಿಣ ಮತ್ತು ಉತ್ತರ ಭಾರತಕ್ಕೆ ಬಜೆಟ್ ಹಂಚಿಕೆಯಲ್ಲಿ ಮಾಡಿರುವ ವ್ಯತ್ಯಾಸವನ್ನು ಹೇಳುತ್ತಿದ್ದಂತೆ, ಉಳಿದ ಸಂಸದರು “ನಾಚಿಕೆ, ಅವಮಾನ” ಎಂದು ಕೂಗುವ ಮೂಲಕ ಅವರ ಮಾತುಗಳಿಗೆ ಧ್ವನಿ ಸೇರಿಸಿ ಒಕ್ಕೂಟ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾಗಕ್ಕೆ ನೀಡಿದ ಮೊತ್ತ ಮತ್ತು ಅದಕ್ಕೆ ವಿರುದ್ಧವಾಗಿ ಉತ್ತರಕ್ಕೆ ನೀಡಿರುವ ಮೂಲಸೌಕರ್ಯ ಸೌಲಭ್ಯಗಳಿಗೆ ನೀಡಲಾದ ಮೊತ್ತದ ನಡುವೆ ಭಾರಿ ವ್ಯತ್ಯಾಸವಿದೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌ 

“ಉತ್ತರ ರೈಲ್ವೆಗೆ ಏನು ನೀಡಲಾಗಿದೆ ಮತ್ತು ದಕ್ಷಿಣವನ್ನು ಹೇಗೆ ಪರಿಗಣಿಸಲಾಗುತ್ತಿದೆ ಎಂಬುದರ ನಡುವಿನ ಅಸಮಾನತೆ ಮತ್ತು ವ್ಯತ್ಯಾಸಗಳನ್ನು ಪರಿಶೀಲಿಸಲು ನಾನು ಸಚಿವರನ್ನು ಕೇಳುತ್ತೇನೆ” ಎಂದು ಕನಿಮೋಳಿ ನೇರವಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಉದ್ದೇಶಿಸಿ ಟೀಕಿಸಿದ್ದಾರೆ.

“ನೀವು ಭಾರತವನ್ನು ಒಂದು ರಾಷ್ಟ್ರ ಎಂದು ಹೇಳುತ್ತಲೇ ಇರುತ್ತೀರಿ. ರೈಲ್ವೇ ಕೂಡ ಒಂದು ರಾಷ್ಟ್ರ ಎಂಬುದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಲೋಕಸಭೆಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ಅವರ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

2022-23ನೇ ಸಾಲಿನ ಬಜೆಟ್ ಕೇವಲ ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿದೆ ಎಂದು ಹಲವರು ಟೀಕಿಸಿದ್ದಾರೆ. ಆದಾಗ್ಯೂ, ಮೂಲಸೌಕರ್ಯ ನಿಧಿಗಳನ್ನು ಸಮಾನ ರೀತಿಯಲ್ಲಿ ವಿತರಿಸಲಾಗುತ್ತಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಡಿಎಂಕೆ ಸಂಸದೆಯೂ ಆಗಿರುವ ಕನಿಮೋಳಿ ಅವರು, ರೈಲ್ವೇಯಲ್ಲಿ ಖಾಲಿ ಇರುವ ದೊಡ್ಡ ಹುದ್ದೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ದಕ್ಷಿಣ ಭಾರತೀಯರಿಗೆ ಈ ಉದ್ಯೋಗಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ. “ಅವರನ್ನು ದೂರವಿಡುವ ಪ್ರಯತ್ನ ನಡೆಯುತ್ತಿದೆ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಎರಡನೇ ದಿನದಂದು ಲೋಕಸಭೆಯಲ್ಲಿ ರೈಲ್ವೆ ಸಚಿವಾಲಯದ ಅನುದಾನದ ಬೇಡಿಕೆಗಳ ಕುರಿತು ಚರ್ಚೆಗಳು ನಡೆದವು. ಸದನದ ಕಲಾಪವನ್ನು ರಾತ್ರಿ 11 ಗಂಟೆಯವರೆಗೆ ವಿಸ್ತರಿಸಲಾಯಿತು.

ಇದನ್ನೂ ಓದಿ: ಬಿಜೆಪಿ ಎಂದಿಗೂ ತಮಿಳು ಕೋಟೆಯನ್ನು ಭೇದಿಸಲು ಸಾಧ್ಯವಿಲ್ಲ: ಕನಿಮೋಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....