Homeಕರ್ನಾಟಕಪ್ರೊ.ಗಣೇಶ ದೇವಿಯವರ 'ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ' ಪುಸ್ತಕ ಬಿಡುಗಡೆ

ಪ್ರೊ.ಗಣೇಶ ದೇವಿಯವರ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕ ಬಿಡುಗಡೆ

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ.

- Advertisement -
- Advertisement -

ಖ್ಯಾತ ಚಿಂತಕ ಮತ್ತು ಭಾಷಾ ಶಾಸ್ತ್ರಜ್ಞ ಪ್ರೊ.ಗಣೇಶ ದೇವಿಯವರು ಬರೆದ ಮಹಾಭಾರತ – ದಿ ಎಪಿಕ್ ಎಂಡ್ ನೇಶನ್’ ಪುಸ್ತಕದ ಕನ್ನಡ ಅನುವಾದವಾದ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕವು ಮಾರ್ಚ್ 19ರ ಇದೇ ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ.

ಸಮಗ್ರ ಮಹಾಭಾರತವನ್ನು ಅಖಂಡವಾಗಿ ಗ್ರಹಿಸಿದ ರಾಜಶೇಖರ, ಅಭಿನವಗುಪ್ತ, ಅರವಿಂದರು ಮೊದಲಾದವರಿರುವ ಪೌರ್ವಾತ್ಯ ಮಹಾಭಾರತ ವ್ಯಾಖ್ಯಾನ ಪರಂಪರೆಯನ್ನು ಗಣೇಶ ದೇವಿಯವರು ಮುಂದುವರೆಸಿದ್ದಾರೆ. ಆ ಮೂಲಕ ಸಮಕಾಲೀನ ಭಾರತಕ್ಕೆ ಪ್ರಸ್ತುತವಾದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳವ ಪ್ರಯತ್ನ ಪುಸ್ತಕದಲ್ಲಿದೆ. ಸದ್ಯ ಮುನ್ನೆಲೆಗೆ ಬರಲು ಹಪಹಪಿಸುತ್ತಿರುವ ಮತ್ತು ಅಧಿಕೃತಗೊಳ್ಳಲು ಎಲ್ಲಾ ಉಪಕರಣಗಳನ್ನೂ ಬಳಸುತ್ತಿರುವ ರಾಷ್ಟ್ರ, ಚರಿತ್ರೆ ಮತ್ತು ಸಮಾಜದ ಕಲ್ಪನೆಗಳನ್ನು ರಾಷ್ಟ್ರೀಯ ಕಾವ್ಯವೆಂದು ಮನ್ನಣೆ ಪಡೆದಿರುವ ಮಹಾಭಾರತಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎನ್ನುವುದು ದೇವಿಯವರ ಮಹಾಭಾರತ ವ್ಯಾಖಾನದ ಕೇಂದ್ರ ಗ್ರಹೀತಗಳಲ್ಲೊಂದು. ಅಂದರೆ ವಸಾಹತುಶಾಹಿ ವಿಕಲ್ಪಗಳಿಗೆ ನೇತುಬಿದ್ದಿರುವ ವರ್ತಮಾನದ ರಾಜಕೀಯಕ್ಕೆ ಪರಂಪರೆಯ ವಿವೇಕವನ್ನು ನೆನಪಿಸುವ ಉದ್ದೇಶದ ಕೃತಿಯಿದು. ಈ ಮಹತ್ವದ ಕೃತಿಯನ್ನು ಡಾ.ಎಂ.ಜಿ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ ಪ್ರಕಟಿಸಿದೆ.

ಮಾರ್ಚ್ 19ರ ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಎನ್.ಆರ್.ಕಾಲೊನಿಯ 3ನೆಯ ಮುಖ್ಯ ರಸ್ತೆಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ವಿಮರ್ಶಕ. ಚಿಂತಕ ಪ್ರೊ.ಸಿ.ಎನ್.ರಾಮಚಂದ್ರನ್ ಪುಸ್ತಕ ಬಿಡುಗಡೆಗೊಳಿಸಿ ವಿಮರ್ಶಾತ್ಮಕ ಪರಿಚಯ ಮಾಡಿಕೊಡಲಿದ್ದಾರೆ. ಕರ್ತೃ ಪ್ರೊ. ಗಣೇಶ ದೇವಿ ಮತ್ತು ಕನ್ನಡಕ್ಕೆ ಅನುವಾದಿಸಿರುವ ಡಾ.ಎಂ.ಜಿ ಹೆಗಡೆ ಯವರ ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸುತ್ತಾರೆ.

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ. ಎರಡು ಕಡೆ ಈ ಪುಸ್ತಕ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಅಪ್ಪು ನುಡಿನಮನ; ಮಿಂಚಿ ಮರೆಯಾದ ಜನಮನದ ಹುಡುಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...