Homeಮುಖಪುಟಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

- Advertisement -
- Advertisement -

ರಾಯ್‌ಪುರ: ಕಾಶ್ಮೀರಿ ಹಿಂದೂಗಳ ವಲಸೆ ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಅರ್ಧಸತ್ಯವನ್ನು ತೋರಿಸುತ್ತದೆ, ಜೊತೆಗೆ ಹಿಂಸೆಯನ್ನು ಹೊರತುಪಡಿಸಿ ಯಾವುದೇ ನೈಜ ಸಂದೇಶವನ್ನು ನೀಡಿಲ್ಲ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಹೇಳಿದ್ದಾರೆ.

ಶಾಸಕರೊಂದಿಗೆ ಸಿನಿಮಾ ನೋಡಿರುವ ಅವರು, ಕಾಶ್ಮೀರದಲ್ಲಿ ಹಿಂದೂಗಳು ಮಾತ್ರವಲ್ಲ, ಬೌದ್ಧರು, ಮುಸ್ಲಿಮರು, ಸಿಖ್ಖರು ಕೂಡ ಹತ್ಯೆಯಾಗಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

“…ಚಿತ್ರವು ಅರ್ಧ ಸತ್ಯವನ್ನು ತೋರಿಸುತ್ತದೆ. ಇದು ಯಾವುದೇ ಪರಿಹಾರವನ್ನು ಸೂಚಿಸುವುದಿಲ್ಲ. ಸುಧಾರಣೆಯ ದಿಕ್ಕಿನಲ್ಲಿ ಯಾವುದೇ ಪ್ರಯತ್ನವನ್ನು ಈ ಸಿನಿಮಾ ಮಾಡಿಲ್ಲ. ಇದು ಯಾವುದೇ ಅರ್ಥವಿಲ್ಲದ ಹಿಂಸೆಯನ್ನು ಮಾತ್ರ ತೋರಿಸುತ್ತದೆ” ಎಂದು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಮಲ್ಟಿಪ್ಲೆಕ್ಸ್‌ನಲ್ಲಿ ವಿಶೇಷ ಪ್ರದರ್ಶನದಲ್ಲಿ ಸಿನಿಮಾ ನೋಡಿದ ಬಳಿಕ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಚಲನಚಿತ್ರವನ್ನು ಶ್ಲಾಘಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಪರ ಎನ್ನುವವರು ಕಾಶ್ಮೀರ್‌ ಫೈಲ್ಸ್‌ ವಿರುದ್ಧ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಪಿ ಸಿಂಗ್ ಪ್ರಧಾನಿಯಾಗಿದ್ದಾಗ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿಯವರ ಬೆಂಬಲದೊಂದಿಗೆ ಕಾಶ್ಮೀರಿ ಪಂಡಿತರ ವಲಸೆ ನಡೆಯಿತು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ತಿಳಿಸಿದ್ದಾರೆ.

”ರಾಜಕೀಯ ಸಂದೇಶ ನೀಡುವ ಪ್ರಯತ್ನ ನಡೆದಿದೆ. ಆಗ ಬಿಜೆಪಿಯ ಬೆಂಬಲದೊಂದಿಗೆ (ಕೇಂದ್ರದಲ್ಲಿ) ಅಧಿಕಾರದಲ್ಲಿದ್ದ ವಿಪಿ ಸಿಂಗ್ ಸರ್ಕಾರವು ಕಾಶ್ಮೀರಿ ಪಂಡಿತರನ್ನು ತಡೆಯಲು ಪ್ರಯತ್ನಿಸಲಿಲ್ಲ. ಬದಲಿಗೆ ಅವರನ್ನು ತೊರೆಯುವಂತೆ ಹೇಳಿತು ಎಂದು ಚಿತ್ರದಲ್ಲಿ ತೋರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಸೇನೆಯನ್ನು ಕೇಂದ್ರದಿಂದ ಅಲ್ಲಿಗೆ ಕಳುಹಿಸಿರಲಿಲ್ಲ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಲೋಕಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಸೇನೆಯನ್ನು ಅಲ್ಲಿಗೆ ಕಳುಹಿಸಲಾಯಿತು” ಎಂದು ಬಾಘೆಲ್ ವಿವರಿಸಿದ್ದಾರೆ.

ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದತ್ತ ತಿರುಗಿಬಿದ್ದಿರುವ ಬಘೇಲ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿದ ನಂತರವೂ ಕಾಶ್ಮೀರಿ ಪಂಡಿತರ ವಿಷಯದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಈ (ಕೇಂದ್ರ) ಸರ್ಕಾರ ಕೇವಲ ರಾಜಕೀಯ ಮಾಡಿದೆ ಮತ್ತು ಕಾಶ್ಮೀರಿ ಪಂಡಿತರಿಗೆ ನೆರವು ನೀಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.

ಛತ್ತೀಸ್‌ಗಢದ ಬಿಜೆಪಿ ಸೇರಿದಂತೆ ಪ್ರತಿಪಕ್ಷ ನಾಯಕರು ಚಿತ್ರ ವೀಕ್ಷಿಸಲು ತಮ್ಮೊಂದಿಗೆ ಬಂದು ಕೂರದಿದ್ದಕ್ಕಾಗಿ ಮುಖ್ಯಮಂತ್ರಿ ಬಾಘೇಲ್‌ ವಿಷಾದ ವ್ಯಕ್ತಪಡಿಸಿದರು. ಯಾರಾದರೂ ಅವರನ್ನು ಎದುರಿಸಿದಾಗ ಅವರು ಓಡಿಹೋಗುತ್ತಾರೆ ಎಂದು ಕುಟುಕಿದ್ದಾರೆ.

ವಿರೋಧ ಪಕ್ಷದ ನಾಯಕ, ಬಿಜೆಪಿಯ ಹಿರಿಯ ನಾಯಕ ಧರ್ಮಲಾಲ್ ಕೌಶಿಕ್ ಅವರು ಛತ್ತೀಸ್‌ಗಢದಲ್ಲಿ ‘ದಿ ಕಾಶ್ಮೀರ ಫೈಲ್ಸ್’ಗೆ ತೆರಿಗೆಯಿಂದ ವಿನಾಯಿತಿ ನೀಡುವ ಬೇಡಿಕೆಯನ್ನು ಇಟ್ಟಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ ಮತ್ತು ಮಧ್ಯಪ್ರದೇಶದಂತಹ ಹಲವಾರು ಬಿಜೆಪಿ ಆಡಳಿತದ ರಾಜ್ಯಗಳು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿವೆ. ಬುಧವಾರ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವೂ ಈ ಘೋಷಣೆ ಮಾಡಿದೆ. ಬಾಘೆಲ್ ನೇರವಾಗಿ ಬೇಡಿಕೆಯನ್ನು ತಿರಸ್ಕರಿಸಿಲ್ಲ. ಆದರೆ ರಾಜ್ಯಗಳಿಗಿಂತ ಹೆಚ್ಚಾಗಿ ಕೇಂದ್ರವು ತನ್ನ ತೆರಿಗೆಯ ಪಾಲನ್ನು ಬಿಟ್ಟುಕೊಡಬೇಕು ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ಶಾಸಕರು ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು (ಮನರಂಜನೆ) ತೆರಿಗೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಚಿತ್ರದ ಮೇಲಿನ ಕೇಂದ್ರ ಜಿಎಸ್‌ಟಿಯನ್ನು ಮನ್ನಾ ಮಾಡಲು ಮಾನ್ಯ ಪ್ರಧಾನ ಮಂತ್ರಿಗಳು ಘೋಷಿಸಬೇಕೆಂದು ನಾನು ವಿನಂತಿಸುತ್ತೇನೆ. ಆಗ ಚಿತ್ರವು ದೇಶಾದ್ಯಂತ ತೆರಿಗೆ ಮುಕ್ತವಾಗಿರುತ್ತದೆ” ಎಂದು ಬಘೇಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾದ ನಂತರ ಅರ್ಧದಷ್ಟು ತೆರಿಗೆ ಪಾಲು ಕೇಂದ್ರಕ್ಕೆ ಹೋಗುತ್ತದೆ ಎಂದು ವಿಧಾನಸಭೆಯಲ್ಲಿ ಅವರು ವಿವರಿಸಿದ್ದಾರೆ. “ಕೇಂದ್ರ ಸರ್ಕಾರ ಈ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಬೇಕು” ಎಂದು ಬಾಘೇಲ್‌ ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...