Homeಮುಖಪುಟ25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

- Advertisement -
- Advertisement -

ಇಸ್ರೇಲಿ ಮೂಲದ ಸಂಸ್ಥೆಯಾದ NSO ಗ್ರೂಪ್‌‌ನವರು ಬೇಹುಗಾರಿಕಾ ಸಾಫ್ಟ್‌ವೇರ್ ಆದ ಪೆಗಾಸಸ್ ಅನ್ನು ಖರೀದಿಸುವಂತೆ ತಮ್ಮ ಸರ್ಕಾರಕ್ಕೆ ಕೆಲವು ವರ್ಷಗಳ ಹಿಂದೆ ಪ್ರಸ್ತಾಪ ಇಟ್ಟಿದ್ದರು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಆದರೆ ಎನ್‌ಎಸ್‌ಒ ಗ್ರೂಪ್‌ನ ಈ ಪ್ರಸ್ತಾಪವನ್ನು ತಾನು ತಿರಸ್ಕರಿಸಿದ್ದಾಗಿ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, “ಎನ್‌ಎಸ್‌ಒ ತಮ್ಮ ಸಾಫ್ಟ್‌ವೇರ್ (ಪೆಗಾಸಸ್ ಸ್ಪೈವೇರ್) ಅನ್ನು ಮಾರಾಟ ಮಾಡಲು ನಮ್ಮ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದ್ದರು. ಐದು ವರ್ಷಗಳ ಹಿಂದೆಯೇ 25 ಕೋಟಿಗೆ ಬೇಡಿಕೆ ಇಟ್ಟಿದ್ದರು. ಈ ಪ್ರಸ್ತಾಪ ನನಗೆ ಬಂದಿತ್ತು. ಆದರೆ ನಾನು ಅಂತಹ ಸಾಫ್ಟ್‌ವೇರ್‌ಗಳನ್ನು ಖರೀದಿಸಲು ಬಯಸುವುದಿಲ್ಲ ಎಂದು ಎಂದು ಹೇಳಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಇಸ್ರೇಲಿ ಬೇಹುಗಾರಿಕಾ ಸಾಫ್ಟ್‌ವೇರ್‌ ಆಗಿರುವ ಪೆಗಾಸಸ್ ಅನ್ನು ಭಾರತದಲ್ಲಿನ ಕೆಲವು ಜನರ ಕಣ್ಗಾವಲುಗಾಗಿ ಬಳಸಲಾಗಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್‌‌ಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿರುವಾಗಲೆ ಮಮತಾ ಬ್ಯಾನರ್ಜಿ ಅವರು ಈ ಗಂಭೀರ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

“ದೇಶವಿರೋಧಿ ಚಟುವಟಿಕೆಗಳು ಮತ್ತು ಭದ್ರತೆಗಾಗಿ ಅವುಗಳನ್ನು ಬಳಸುವುದು ಬೇರೆಯೆ ವಿಷಯವಾಗಿದೆ. ಆದರೆ ಅದನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಅಧಿಕಾರಿಗಳು ಮತ್ತು ನ್ಯಾಯಾಧೀಶರ ಮೇಲೆ ಬಳಸಲಾಗುತ್ತಿದೆ, ಇದು ಸ್ವೀಕಾರಾರ್ಹವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಪೆಗಾಸಸ್‌ನ ಸಾಲು ಎಂದರೇನು?

ಕಳೆದ ವರ್ಷ, ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವು 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳು ಪೆಗಾಸಸ್ ಸ್ಪೈವೇರ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿವೆ ಎಂದು ವರದಿ ಮಾಡಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಇಬ್ಬರು ಕೇಂದ್ರ ಸಚಿವರ (ಅಶ್ವಿನಿ ವೈಷ್ಣವ್ ಮತ್ತು ಪ್ರಹ್ಲಾದ್ ಪಟೇಲ್) ಫೋನ್ ಸಂಖ್ಯೆಗಳು ಸೋರಿಕೆಯಾದ ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.

ಆದರೆ 2021ರ ಜುಲೈನಲ್ಲಿ ಕೇಂದ್ರ ಸರ್ಕಾರವು ಈ ಬೇಹುಗಾರಿಕೆ ಆರೋಪಗಳನ್ನು ತಳ್ಳಿಹಾಕಿತ್ತು. ಐಟಿ ಸಚಿವಾಲಯವು ಯಾವುದೆ ‘ಅನಧೀಕೃತ ಅನಧಿಕೃತ ಕಣ್ಗಾವಲು ಮಾಡಲಾಗುತ್ತಿಲ್ಲ’ ಇಲ್ಲ ಎಂದು ಹೇಳಿದೆ.

ಈ ಮಧ್ಯೆ, ಇಸ್ರೇಲಿ ಮೂಲದ ಪೆಗಾಸಸ್‌ ತಯಾರಕ ಸಂಸ್ಥೆಯಾದ NSO ಗ್ರೂಪ್, ತನ್ನ ಸ್ಪೈವೇರ್ ‌ಅನ್ನು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳನ್ನು ಎದುರಿಸಲು ಸರ್ಕಾರಿ ಏಜೆನ್ಸಿಗಳಿಗೆ ಮಾತ್ರ ನೀಡುವುದಾಗಿ ಹೇಳಿದ್ದು, ಇದನ್ನು ತಾವು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದಾಗಿ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...