Homeಚಳವಳಿಮಲಯಾಳಂ ಚಲನಚಿತ್ರ ಸೆಟ್‌ಗಳು ‘ಲೈಂಗಿಕ ಕಿರುಕುಳ ವಿರೋಧಿ ಸಮಿತಿ’ ಹೊಂದಿರಬೇಕು: ಹೈಕೋರ್ಟ್ ತೀರ್ಪು

ಮಲಯಾಳಂ ಚಲನಚಿತ್ರ ಸೆಟ್‌ಗಳು ‘ಲೈಂಗಿಕ ಕಿರುಕುಳ ವಿರೋಧಿ ಸಮಿತಿ’ ಹೊಂದಿರಬೇಕು: ಹೈಕೋರ್ಟ್ ತೀರ್ಪು

- Advertisement -
- Advertisement -

ಮಲಯಾಳಂ ಚಲನಚಿತ್ರ ನಿರ್ಮಾಣ ಸಂಸ್ಥೆಗಳು ತಮ್ಮ ಕೆಲಸದ ಸ್ಥಳದಲ್ಲಿ, “ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ-2013”ರ ಪ್ರಕಾರ ‘ಆಂತರಿಕ ಸಮಿತಿ’ಯನ್ನು (IC) ರಚಿಸಬೇಕು ಎಂದು ಕೇರಳ ಹೈಕೋರ್ಟ್ ಗುರುವಾರ ಹೇಳಿದೆ. ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಮತ್ತು ಕೇರಳದ ಫಿಲ್ಮ್ ಎಂಪ್ಲಾಯೀಸ್ ಫೆಡರೇಶನ್ (FEFKA) ನಂತಹ ಇತರ ಸಂಸ್ಥೆಗಳಲ್ಲಿ ಕುಂದುಕೊರತೆ ಪರಿಹಾರ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಅವರು ಮನವಿ ಮಾಡಿದ್ದರು.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘವು ಆಂತರಿಕ ಸಮಿತಿ ರಚನೆಗೆ ಒಪ್ಪಿಗೆ ನೀಡಿದೆ ಮತ್ತು 10 ಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರುವ ಇತರ ಸಿನಿ ಸಂಸ್ಥೆಗಳು ಕಡ್ಡಾಯವಾಗಿ ಆಂತರಿಕ ಸಮಿತಿ ಹೊಂದಿರಬೇಕು ಎಂದು ಪೀಠ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ಪೀಠವು ತೀರ್ಪಿನ ಆಪರೇಟಿವ್ ಭಾಗವನ್ನು ನ್ಯಾಯಾಲಯದಲ್ಲಿ ಓದಿದೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

2017 ರಲ್ಲಿ ಕಲಾವಿದರೊಬ್ಬರ ಮೇಲಿನ ದಾಳಿಯ ಪ್ರಕರಣದ ನಂತರ ‘ವುಮೆನ್ ಇನ್ ಸಿನಿಮಾ ಕಲೆಕ್ಟಿವ್’ ಅನ್ನು ರಚಿಸಲಾಗಿತ್ತು. ಈ ಪ್ರಕರಣದಲ್ಲಿ ಮಲಯಾಳಂನ ಖ್ಯಾತ ದಿಲೀಪ್ ಕುಮಾರ್‌ ಆರೋಪಿಯಾಗಿದ್ದರು. ಮಲಯಾಳಂ ಚಿತ್ರರಂಗದಲ್ಲಿನ ಲಿಂಗ ತಾರತಮ್ಯದ ವಿರುದ್ಧ ಹೋರಾಡಲು ತಾವು ಶ್ರಮಿಸುವುದಾಗಿ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಸ್ಪಷ್ಟಪಡಿಸಿತ್ತು. ಇದರ ಭಾಗವಾಗಿ, POSH ಕಾಯಿದೆಯ ಪ್ರಕಾರ ಮಲಯಾಳಂ ಚಲನಚಿತ್ರ ಸಂಸ್ಥೆಗಳಲ್ಲಿ ಆಂತರಿಕ ಸಮಿತಿಗಳನ್ನು ಸ್ಥಾಪಿಸಬೇಕೆಂದು ಸಂಸ್ಥೆಯು ಅಕ್ಟೋಬರ್ 2018 ರಲ್ಲಿ ನ್ಯಾಯಾಲಯದ ಮೊರೆ ಹೋಗಿತ್ತು.

ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಆರಂಭದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದಾಗ, ಕೇರಳ ರಾಜ್ಯ ಸರ್ಕಾರ ಮತ್ತು ಮಲಯಾಳಂ ಚಲನಚಿತ್ರ ಕಲಾವಿದರ ಸಂಘವನ್ನು ಪ್ರತಿವಾದಿಗಳಾಗಿ ಹೆಸರಿಸಲಾಗಿತ್ತು. ಸಾಂವಿಧಾನಿಕ ಹಕ್ಕುಗಳ ಸಂಶೋಧನೆ ಮತ್ತು ವಕೀಲರ ಕೇಂದ್ರವು ನಂತರ ಅರ್ಜಿಯನ್ನು ಸೇರಿಕೊಂಡು, ಅದರ ವ್ಯಾಪ್ತಿಯನ್ನು ವಿಸ್ತರಿಸಿದೆ. ಮಾಧ್ಯಮ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳಲ್ಲಿ ಆಂತರಿಕ ಸಮಿತಿಗಳನ್ನು ರಚಿಸಬೇಕು ಎಂದು ಅದು ಹೇಳಿದೆ.

 

View this post on Instagram

 

A post shared by Geetu Mohandas (@geetu_mohandas)

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ಇದರ ನಂತರ ಕೇರಳದ ಮಹಿಳಾ ಆಯೋಗವು ಈ ವಿಷಯದಲ್ಲಿ ಅರ್ಜಿಯನ್ನು ಸಲ್ಲಿಸಿ, ಮನವಿಯನ್ನು ಮತ್ತೆ ಬಲಪಡಿಸಿತು. ವಿಶಾಕಾ ಮಾರ್ಗಸೂಚಿಗಳು ಮತ್ತು POSH ಕಾಯಿದೆಗೆ ಅನುಗುಣವಾಗಿ ಮಲಯಾಳಂ ಚಲನಚಿತ್ರ ಕಲಾವಿದರ ಸಂಘವು ಆಂತರಿಕ ಸಮಿತಿ ಸ್ಥಾಪಿಸುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಆಯೋಗವು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.

ಗುರುವಾರ ನ್ಯಾಯಾಲಯ ನೀಡಿದ ಆದೇಶದ ಆಪರೇಟಿವ್ ಭಾಗದಲ್ಲಿ, ಚಲನಚಿತ್ರ ಸಂಸ್ಥೆಗಳನ್ನು ಹೊರತುಪಡಿಸಿ, ಮಾಧ್ಯಮ ಸಂಸ್ಥೆಗಳು ಸಹ ಪೋಷ್ ಕಾಯ್ದೆಯ ಪ್ರಕಾರ  ಆಂತರಿಕ ಸಮಿತಿಗಳನ್ನು ಹೊಂದಲು ಸೂಚಿಸಲಾಗಿದೆ.

ಹಲವು ವರ್ಷಗಳಿಂದ ಸಮಿತಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ, ಅರ್ಜಿಯ ಆದೇಶವನ್ನು ಪ್ರಕಟಿಸುವ ಮುನ್ನವೇ ಕಳೆದ ವಾರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ. ಆದಾಗ್ಯೂ, ಈ ಆಂತರಿಕ ಸಮಿತಿಗೆ ಅಗತ್ಯವಿರುವಂತೆ ಬಾಹ್ಯ ಸದಸ್ಯರನ್ನು ಹೊಂದಿಲ್ಲ ಮತ್ತು ಇದನ್ನು ನಂತರ ಮಾಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತದ ವಿವಿಧ ಭಾಷೆಗಳ ಇತ್ತೀಚಿನ ಸಿನಿಮಾಗಳಲ್ಲಿ ದಲಿತ ಕಥನಗಳು; ಭಾಗ-1 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...