Homeಚಳವಳಿಮಲಯಾಳಂ ಚಲನಚಿತ್ರ ಸೆಟ್‌ಗಳು ‘ಲೈಂಗಿಕ ಕಿರುಕುಳ ವಿರೋಧಿ ಸಮಿತಿ’ ಹೊಂದಿರಬೇಕು: ಹೈಕೋರ್ಟ್ ತೀರ್ಪು

ಮಲಯಾಳಂ ಚಲನಚಿತ್ರ ಸೆಟ್‌ಗಳು ‘ಲೈಂಗಿಕ ಕಿರುಕುಳ ವಿರೋಧಿ ಸಮಿತಿ’ ಹೊಂದಿರಬೇಕು: ಹೈಕೋರ್ಟ್ ತೀರ್ಪು

- Advertisement -
- Advertisement -

ಮಲಯಾಳಂ ಚಲನಚಿತ್ರ ನಿರ್ಮಾಣ ಸಂಸ್ಥೆಗಳು ತಮ್ಮ ಕೆಲಸದ ಸ್ಥಳದಲ್ಲಿ, “ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ-2013”ರ ಪ್ರಕಾರ ‘ಆಂತರಿಕ ಸಮಿತಿ’ಯನ್ನು (IC) ರಚಿಸಬೇಕು ಎಂದು ಕೇರಳ ಹೈಕೋರ್ಟ್ ಗುರುವಾರ ಹೇಳಿದೆ. ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (ಅಮ್ಮ) ಮತ್ತು ಕೇರಳದ ಫಿಲ್ಮ್ ಎಂಪ್ಲಾಯೀಸ್ ಫೆಡರೇಶನ್ (FEFKA) ನಂತಹ ಇತರ ಸಂಸ್ಥೆಗಳಲ್ಲಿ ಕುಂದುಕೊರತೆ ಪರಿಹಾರ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಅವರು ಮನವಿ ಮಾಡಿದ್ದರು.

ಮಲಯಾಳಂ ಚಲನಚಿತ್ರ ಕಲಾವಿದರ ಸಂಘವು ಆಂತರಿಕ ಸಮಿತಿ ರಚನೆಗೆ ಒಪ್ಪಿಗೆ ನೀಡಿದೆ ಮತ್ತು 10 ಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರುವ ಇತರ ಸಿನಿ ಸಂಸ್ಥೆಗಳು ಕಡ್ಡಾಯವಾಗಿ ಆಂತರಿಕ ಸಮಿತಿ ಹೊಂದಿರಬೇಕು ಎಂದು ಪೀಠ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ಪೀಠವು ತೀರ್ಪಿನ ಆಪರೇಟಿವ್ ಭಾಗವನ್ನು ನ್ಯಾಯಾಲಯದಲ್ಲಿ ಓದಿದೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

2017 ರಲ್ಲಿ ಕಲಾವಿದರೊಬ್ಬರ ಮೇಲಿನ ದಾಳಿಯ ಪ್ರಕರಣದ ನಂತರ ‘ವುಮೆನ್ ಇನ್ ಸಿನಿಮಾ ಕಲೆಕ್ಟಿವ್’ ಅನ್ನು ರಚಿಸಲಾಗಿತ್ತು. ಈ ಪ್ರಕರಣದಲ್ಲಿ ಮಲಯಾಳಂನ ಖ್ಯಾತ ದಿಲೀಪ್ ಕುಮಾರ್‌ ಆರೋಪಿಯಾಗಿದ್ದರು. ಮಲಯಾಳಂ ಚಿತ್ರರಂಗದಲ್ಲಿನ ಲಿಂಗ ತಾರತಮ್ಯದ ವಿರುದ್ಧ ಹೋರಾಡಲು ತಾವು ಶ್ರಮಿಸುವುದಾಗಿ ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಸ್ಪಷ್ಟಪಡಿಸಿತ್ತು. ಇದರ ಭಾಗವಾಗಿ, POSH ಕಾಯಿದೆಯ ಪ್ರಕಾರ ಮಲಯಾಳಂ ಚಲನಚಿತ್ರ ಸಂಸ್ಥೆಗಳಲ್ಲಿ ಆಂತರಿಕ ಸಮಿತಿಗಳನ್ನು ಸ್ಥಾಪಿಸಬೇಕೆಂದು ಸಂಸ್ಥೆಯು ಅಕ್ಟೋಬರ್ 2018 ರಲ್ಲಿ ನ್ಯಾಯಾಲಯದ ಮೊರೆ ಹೋಗಿತ್ತು.

ವುಮೆನ್ ಇನ್ ಸಿನಿಮಾ ಕಲೆಕ್ಟಿವ್ ಆರಂಭದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದಾಗ, ಕೇರಳ ರಾಜ್ಯ ಸರ್ಕಾರ ಮತ್ತು ಮಲಯಾಳಂ ಚಲನಚಿತ್ರ ಕಲಾವಿದರ ಸಂಘವನ್ನು ಪ್ರತಿವಾದಿಗಳಾಗಿ ಹೆಸರಿಸಲಾಗಿತ್ತು. ಸಾಂವಿಧಾನಿಕ ಹಕ್ಕುಗಳ ಸಂಶೋಧನೆ ಮತ್ತು ವಕೀಲರ ಕೇಂದ್ರವು ನಂತರ ಅರ್ಜಿಯನ್ನು ಸೇರಿಕೊಂಡು, ಅದರ ವ್ಯಾಪ್ತಿಯನ್ನು ವಿಸ್ತರಿಸಿದೆ. ಮಾಧ್ಯಮ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳಲ್ಲಿ ಆಂತರಿಕ ಸಮಿತಿಗಳನ್ನು ರಚಿಸಬೇಕು ಎಂದು ಅದು ಹೇಳಿದೆ.

 

View this post on Instagram

 

A post shared by Geetu Mohandas (@geetu_mohandas)

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ಇದರ ನಂತರ ಕೇರಳದ ಮಹಿಳಾ ಆಯೋಗವು ಈ ವಿಷಯದಲ್ಲಿ ಅರ್ಜಿಯನ್ನು ಸಲ್ಲಿಸಿ, ಮನವಿಯನ್ನು ಮತ್ತೆ ಬಲಪಡಿಸಿತು. ವಿಶಾಕಾ ಮಾರ್ಗಸೂಚಿಗಳು ಮತ್ತು POSH ಕಾಯಿದೆಗೆ ಅನುಗುಣವಾಗಿ ಮಲಯಾಳಂ ಚಲನಚಿತ್ರ ಕಲಾವಿದರ ಸಂಘವು ಆಂತರಿಕ ಸಮಿತಿ ಸ್ಥಾಪಿಸುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಆಯೋಗವು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.

ಗುರುವಾರ ನ್ಯಾಯಾಲಯ ನೀಡಿದ ಆದೇಶದ ಆಪರೇಟಿವ್ ಭಾಗದಲ್ಲಿ, ಚಲನಚಿತ್ರ ಸಂಸ್ಥೆಗಳನ್ನು ಹೊರತುಪಡಿಸಿ, ಮಾಧ್ಯಮ ಸಂಸ್ಥೆಗಳು ಸಹ ಪೋಷ್ ಕಾಯ್ದೆಯ ಪ್ರಕಾರ  ಆಂತರಿಕ ಸಮಿತಿಗಳನ್ನು ಹೊಂದಲು ಸೂಚಿಸಲಾಗಿದೆ.

ಹಲವು ವರ್ಷಗಳಿಂದ ಸಮಿತಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ, ಅರ್ಜಿಯ ಆದೇಶವನ್ನು ಪ್ರಕಟಿಸುವ ಮುನ್ನವೇ ಕಳೆದ ವಾರ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ. ಆದಾಗ್ಯೂ, ಈ ಆಂತರಿಕ ಸಮಿತಿಗೆ ಅಗತ್ಯವಿರುವಂತೆ ಬಾಹ್ಯ ಸದಸ್ಯರನ್ನು ಹೊಂದಿಲ್ಲ ಮತ್ತು ಇದನ್ನು ನಂತರ ಮಾಡಲಾಗುವುದು ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತದ ವಿವಿಧ ಭಾಷೆಗಳ ಇತ್ತೀಚಿನ ಸಿನಿಮಾಗಳಲ್ಲಿ ದಲಿತ ಕಥನಗಳು; ಭಾಗ-1 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...