Homeಮುಖಪುಟ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

- Advertisement -
- Advertisement -

ಮೂರು ತಿಂಗಳ ಹಿಂದೆ ಅಂಗೀಕರಿಸಿದ ‘ಲಿಂಚಿಂಗ್‌ ವಿರೋಧಿ ಮಸೂದೆ’ಯನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು ಸಹಿ ಹಾಕಲು ನಿರಾಕರಿಸಿದ್ದು ರಾಜ್ಯ ಸರ್ಕಾರಕ್ಕೆ ವಾಪಾಸು ಕಳುಹಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ. ಜಾರ್ಖಂಡ್‌ ವಿಧಾನಸಭೆಯು ಡಿಸೆಂಬರ್‌ 12 ರಂದು ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ, 2021 ಅನ್ನು ಅಂಗೀಕರಿಸಿತ್ತು.

ಆದರೆ, ‘ಗುಂಪು’ (Mob-ಗುಂಪು) ಪದದ ವ್ಯಾಖ್ಯಾನವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ರಮೇಶ್‌‌‌ ಬೈಸ್‌‌ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. (ಮಾಬ್‌ ಲಿಂಚಿಂಗ್ ಅನ್ನು ಕನ್ನಡದಲ್ಲಿ ‘ಗುಂಪು ಹತ್ಯೆ’ ಎಂದು ಬರೆಯಲಾಗುತ್ತದೆ)

ಇದನ್ನೂ ಓದಿ: ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಳೆದ ಡಿಸೆಂಬರ್‌ನಲ್ಲಿ, ಬಿಜೆಪಿ ಶಾಸಕ ಅಮಿತ್ ಕುಮಾರ್ ಮಂಡಲ್ ಅವರು ‘ಗುಂಪು’ ಎಂಬ ಪದವನ್ನು ಸರಿಯಾಗಿ ವ್ಯಾಖ್ಯಾನಿಸಲಾಗಿಲ್ಲ ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಧೇಯಕವನ್ನು ವಿಧಾನಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾಗ ಬಿಜೆಪಿ ಅದನ್ನು ವಿರೋಧಿಸಿ, ತುಷ್ಟೀಕರಣ ರಾಜಕಾರಣ ಮಾಡುವ ಯತ್ನ ಎಂದು ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರು, ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರಯ. ‘ನಾವು ಗುಂಪು ಹತ್ಯೆ(ಮಾಬ್‌ ಲಿಂಚ್‌) ಕಾಯಿದೆಯ ಬಗ್ಗೆ ಮಾತನಾಡುತ್ತಿದ್ದೇವೆ, ಅದು ಮುಸ್ಲಿಂ ಹತ್ಯೆ ಕಾಯಿದೆಯೊ, ಆದಿವಾಸಿ ಹತ್ಯೆ ಕಾಯಿದೆಯೊ ಅಥವಾ ಹಿಂದೂ ಹತ್ಯೆ ಕಾಯಿದೆಯೊ ಅಲ್ಲ…ಗುಂಪು ಅಂದರೆ ಗುಂಪು ಅಷ್ಟೆ” ಎಂದು ಅವರು ಕೇಳಿದ್ದರು.

ಫೆಬ್ರವರಿ 11 ರಂದು, ಬುಡಕಟ್ಟು ಸಮುದಾಯಗಳ ಪ್ರತಿನಿಧಿಯಾಗಿ ‘ಜಂಜಾಟಿ ಸುರಕ್ಷಾ ಮಂಚ್’ ಎಂಬ ಸಂಘಟನೆಯ ಕೆಲವು ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ರಾಜ್ಯಪಾಲರೊಂದಿಗೆ ಮಸೂದೆಯನ್ನು ಅನುಮೋದಿಸದಂತೆ ಕೇಳಿಕೊಂಡಿದ್ದರು. ಈ ಮಸೂದೆಯು ಬುಡಕಟ್ಟು ಸಮುದಾಯದ ವಿಶೇಷ ಕಾನೂನು ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್ ಹಿರಿಯ ವಕೀಲ ಎಸ್.ಬಾಲನ್ ಅವರೊಂದಿಗೆ ಸಂದರ್ಶನ; ಮನುವಾದಕ್ಕೆ ಅಂಬೇಡ್ಕರ್ ಎಂದರೆ ಅಸಹನೆ 

ಈ ಮಸೂದೆಯು ‘ಲಿಂಚಿಗ್‌‌’ ಅನ್ನು, “ಧರ್ಮ, ಜನಾಂಗ, ಜಾತಿ, ಲಿಂಗ, ಹುಟ್ಟಿದ ಸ್ಥಳ, ಭಾಷೆ, ಆಹಾರ ಪದ್ಧತಿಗಳು, ಲೈಂಗಿಕ ದೃಷ್ಟಿಕೋನ, ರಾಜಕೀಯ ಸಂಬಂಧ, ಜನಾಂಗೀಯತೆ ಅಥವಾ ಯಾವುದೇ ಇತರ ಹಿನ್ನಲೆಯ ಆಧಾರದ ಮೇಲೆ ಜನರ ಗುಂಪು ನಡೆಸುವ ಏಕಾಏಕಿ ಅಥವಾ ಯೋಜಿತವಾಗಿರುವ ಯಾವುದೇ ಹಿಂಸಾಚಾರದ ಅಥವಾ ಹತ್ಯೆಯ ಕೃತ್ಯ ಅಥವಾ ಸರಣಿ ಕೃತ್ಯ” ಎಂದು ವ್ಯಾಖ್ಯಾನಿಸಿತ್ತು.

ಮಾಬ್‌ ಲಿಂಚಿಂಗ್‌ ಅಲ್ಲಿ ತೊಡಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದು ಮತ್ತು ಅಪರಾಧದ ತೀವ್ರತೆಗೆ ಅನುಗುಣವಾಗಿ 3 ಲಕ್ಷ ರೂ. ನಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಒಂದು ವೇಳೆ ಮಾಬ್‌ ಲಿಂಚ್‌ ಸಮಯದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟರೆ, ಅಪರಾಧಿಗಳಿಗೆ 25 ಲಕ್ಷ ರೂ. ದಂಡ ವಿಧಸಬಹುದಾಗಿದೆ.

ಮಸೂದೆಯ ಅಡಿಯಲ್ಲಿರುವ ಎಲ್ಲಾ ಅಪರಾಧಗಳನ್ನು ಕಾಗ್‌‌ನೈಸಬಲ್, ಜಾಮೀನು ರಹಿತ ಮತ್ತು ಸಂಯೋಜಿತವಲ್ಲದಂತೆ ಮಾಡಲಾಗಿದೆ. ಮಾಬ್‌ ಲಿಂಚಿಂ‌ಗ್‌ ಅನ್ನು ಯೋಜಿಸುವ, ಬೆಂಬಲಿಸುವ ಅಥವಾ ಪ್ರಯತ್ನಿಸುವ ವ್ಯಕ್ತಿಗಳನ್ನು ಶಿಕ್ಷಿಸಲು ಇದು ಅವಕಾಶ ನೀಡಿದೆ.

ಮಸೂದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತರೆ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಮಣಿಪುರದ ನಂತರ ಗುಂಪು ಹಿಂಸಾಚಾರದ ವಿರುದ್ಧ ಕಾನೂನನ್ನು ಅಂಗೀಕರಿಸಿದ ಭಾರತದ ನಾಲ್ಕನೇ ರಾಜ್ಯವಾಗಿ ಜಾರ್ಖಂಡ್ ಆಗಲಿದೆ.

ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...