Homeಮುಖಪುಟ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

- Advertisement -
- Advertisement -

ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದಲ್ಲಿ ಸತ್ಯವನ್ನು ತೋರಿಸಲಾಗಿದ್ದು, ಜನರು ತಪ್ಪದೇ ನೋಡಬೇಕು ಎಂದಿದ್ದಾರೆ.

ಕಾಶ್ಮೀರ್‌ ಫೈಲ್ಸ್‌ ಅಷ್ಟೇ ಅಲ್ಲ, ದಲಿತ್‌ ಫೈಲ್ಸ್‌, ಗುಜರಾತ್ ಫೈಲ್ಸ್‌, ನೆಲ್ಲಿ ಫೈಲ್ಸ್‌ ಹೀಗೆ ಹಲವು ಕಥೆಗಳ ಕುರಿತು ಸಿನಿಮಾ ಮಾಡಬೇಕು. ಸರ್ಕಾರ ಒಂದು ಸಿನಿಮಾವನ್ನು ತನ್ನ ಪ್ರೊಪಗಾಂಡಕ್ಕೆ ಬಳಸಬಾರದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ.

ಇದರ ನಡುವೆ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ ಶೀಘ್ರದಲ್ಲೇ ಗುಜರಾತ್ ಫೈಲ್ಸ್ ಎಂಬ ಹೊಸ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ‘ಗುಜರಾತ್ ಫೈಲ್ಸ್‌’ ಸಂಬಂಧ ಎರಡು ಟ್ವೀಟ್‌ ಮಾಡಿದ್ದಾರೆ.

ವಿನೋದ್ ಕಾಪ್ರಿ ಅವರು ತಮ್ಮ ಮೊದಲ ಟ್ವೀಟ್‌ನಲ್ಲಿ ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ್ದು, ‘ಗುಜರಾತ್ ಫೈಲ್ಸ್ ಹೆಸರಿನಲ್ಲಿ, ಕಲೆ ಹಾಗೂ ಸತ್ಯಗಳ ಆಧಾರದ ಮೇಲೆ ಚಲನಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ನಿಮ್ಮ ಪಾತ್ರವನ್ನು ಸಹ ವಿವರವಾಗಿ ತೋರಿಸಲಾಗುತ್ತಿದೆ’ ಎಂದಿದ್ದಾರೆ. ಮುಂದುವರಿದು, ‘ನರೇಂದ್ರ ಮೋದಿ ಜಿ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದಿಲ್ಲ ಎಂದು ನೀವು ಇಂದು ದೇಶದ ಮುಂದೆ ನನಗೆ ಭರವಸೆ ನೀಡುತ್ತೀರಾ?’ ಎಂದು ಕೇಳಿದ್ದಾರೆ.

ಎರಡನೇ ಟ್ವೀಟ್‌ನಲ್ಲಿ, ವಿನೋದ್ ಕಾಪ್ರಿ, “ನನ್ನ ಈ ಟ್ವೀಟ್ ನಂತರ, ನಾನು ಕೆಲವು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಗುಜರಾತ್ ಫೈಲ್ಸ್ ನಿರ್ಮಿಸಲು ಸಿದ್ಧರಾಗಿದ್ದಾರೆ. ಈಗ ಪ್ರಧಾನಿಯವರು ಹೇಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭರವಸೆಯನ್ನು ಈ ಚಿತ್ರಕ್ಕೂ ನೀಡಬೇಕು ಎಂಬ ಭರವಸೆ ಮಾತ್ರ ಅವರಿಗೆ ಬೇಕಾಗಿದೆ” ಎಂದಿದ್ದಾರೆ. ವಿನೋದ್ ಕಾಪ್ರಿ ಅವರ ಈ ಎರಡೂ ಟ್ವೀಟ್‌ಗಳು ಹೆಚ್ಚು ವೈರಲ್ ಆಗುತ್ತಿವೆ.

‘ಕಾಶ್ಮೀರ್‌ ಫೈಲ್ಸ್’ ಎನ್ನುವವರಿಗೆ ‘ದಲಿತ್‌ ಫೈಲ್ಸ್’ ಕಾಣುವುದಿಲ್ಲವೇ?

ಡಿಸೆಂಬರ್‌ 15, 2021ರಲ್ಲಿ ಪ್ರಕಟವಾಗಿರುವ ಸುದ್ದಿ ಇದು. ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಶ್ರೀನಗರ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯ ಡಿಎಸ್‌‌ಪಿ, “1990ರಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 1,724 ಜನರನ್ನು ಕೊಲ್ಲಲಾಗಿದೆ. ಅದರಲ್ಲಿ 89 ಕಾಶ್ಮೀರಿ ಪಂಡಿತರು ಸೇರಿದ್ದಾರೆ. 89 ಕಾಶ್ಮೀರಿ ಪಂಡಿತರನ್ನು ಹೊರತುಪಡಿಸಿ, ಅದೇ ಅವಧಿಯಲ್ಲಿ 1,635 ಇತರ ಧರ್ಮದ ಜನರೂ ಕೊಲೆಯಾಗಿದ್ದಾರೆ” ಎಂದಿದ್ದರು.

ಯಾವುದೇ ಕೊಲೆ, ಅಪರಾಧ ಖಂಡನೀಯ. ಆದರೆ ಕಾಶ್ಮೀರ್ ಫೈಲ್ಸ್ ಎನ್ನುವವವರು ದಲಿತ್ ಫೈಲ್ಸ್‌ಗಳ ಬಗ್ಗೆ ಯಾಕೆ ಮೌನ ವಹಿಸುತ್ತಾರೆ ಎಂದು ಕೇಳಲಾಗುತ್ತಿದೆ. ನ್ಯಾಷನಲ್‌ ಕ್ರೈಮ್‌ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, 2011 ಮತ್ತು 2020ರ ನಡುವೆ ನಡೆದ ದಲಿತರ ಮೇಲಿನ ದೌರ್ಜನ್ಯಗಳ ಸಂಖ್ಯೆ 4,15,821. ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2011ರಲ್ಲಿ ದಲಿತರ ವಿರುದ್ಧ 33,719 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಈ ಸಂಖ್ಯೆ 50,291ಕ್ಕೆ ಏರಿದೆ. ಅಂದರೆ ಒಂದು ದಶಕದ ಅವಧಿಯಲ್ಲಿ ದಲಿತರ ಮೇಲೆ ಹಲ್ಲೆಗಳು ಗಣನೀಯವಾಗಿ ಹೆಚ್ಚಾದವು. ಮುಖ್ಯವಾಗಿ ಕೇಸರಿ ಪಕ್ಷ ಆಡಳಿತವಿರುವಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ದ್ವಿಗುಣವಾಗುತ್ತಿವೆ. ಕಳೆದ ಒಂದು ದಶಕದ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶ (95,751), ಬಿಹಾರ (63,116), ರಾಜಸ್ಥಾನ (58,945), ಮಧ್ಯಪ್ರದೇಶ (44,469) ಮತ್ತು ಆಂಧ್ರಪ್ರದೇಶ (26,881) ರಾಜ್ಯಗಳಲ್ಲಿ ದಾಖಲಾಗಿವೆ. (ವಿವರಗಳಿಗೆ ‘ಇಲ್ಲಿ’ ಓದಿ)


ಇದನ್ನೂ ಓದಿರಿ: ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...