Homeಮುಖಪುಟ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

- Advertisement -
- Advertisement -

ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದಲ್ಲಿ ಸತ್ಯವನ್ನು ತೋರಿಸಲಾಗಿದ್ದು, ಜನರು ತಪ್ಪದೇ ನೋಡಬೇಕು ಎಂದಿದ್ದಾರೆ.

ಕಾಶ್ಮೀರ್‌ ಫೈಲ್ಸ್‌ ಅಷ್ಟೇ ಅಲ್ಲ, ದಲಿತ್‌ ಫೈಲ್ಸ್‌, ಗುಜರಾತ್ ಫೈಲ್ಸ್‌, ನೆಲ್ಲಿ ಫೈಲ್ಸ್‌ ಹೀಗೆ ಹಲವು ಕಥೆಗಳ ಕುರಿತು ಸಿನಿಮಾ ಮಾಡಬೇಕು. ಸರ್ಕಾರ ಒಂದು ಸಿನಿಮಾವನ್ನು ತನ್ನ ಪ್ರೊಪಗಾಂಡಕ್ಕೆ ಬಳಸಬಾರದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ.

ಇದರ ನಡುವೆ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ ಶೀಘ್ರದಲ್ಲೇ ಗುಜರಾತ್ ಫೈಲ್ಸ್ ಎಂಬ ಹೊಸ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ‘ಗುಜರಾತ್ ಫೈಲ್ಸ್‌’ ಸಂಬಂಧ ಎರಡು ಟ್ವೀಟ್‌ ಮಾಡಿದ್ದಾರೆ.

ವಿನೋದ್ ಕಾಪ್ರಿ ಅವರು ತಮ್ಮ ಮೊದಲ ಟ್ವೀಟ್‌ನಲ್ಲಿ ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ್ದು, ‘ಗುಜರಾತ್ ಫೈಲ್ಸ್ ಹೆಸರಿನಲ್ಲಿ, ಕಲೆ ಹಾಗೂ ಸತ್ಯಗಳ ಆಧಾರದ ಮೇಲೆ ಚಲನಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ನಿಮ್ಮ ಪಾತ್ರವನ್ನು ಸಹ ವಿವರವಾಗಿ ತೋರಿಸಲಾಗುತ್ತಿದೆ’ ಎಂದಿದ್ದಾರೆ. ಮುಂದುವರಿದು, ‘ನರೇಂದ್ರ ಮೋದಿ ಜಿ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದಿಲ್ಲ ಎಂದು ನೀವು ಇಂದು ದೇಶದ ಮುಂದೆ ನನಗೆ ಭರವಸೆ ನೀಡುತ್ತೀರಾ?’ ಎಂದು ಕೇಳಿದ್ದಾರೆ.

ಎರಡನೇ ಟ್ವೀಟ್‌ನಲ್ಲಿ, ವಿನೋದ್ ಕಾಪ್ರಿ, “ನನ್ನ ಈ ಟ್ವೀಟ್ ನಂತರ, ನಾನು ಕೆಲವು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಗುಜರಾತ್ ಫೈಲ್ಸ್ ನಿರ್ಮಿಸಲು ಸಿದ್ಧರಾಗಿದ್ದಾರೆ. ಈಗ ಪ್ರಧಾನಿಯವರು ಹೇಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭರವಸೆಯನ್ನು ಈ ಚಿತ್ರಕ್ಕೂ ನೀಡಬೇಕು ಎಂಬ ಭರವಸೆ ಮಾತ್ರ ಅವರಿಗೆ ಬೇಕಾಗಿದೆ” ಎಂದಿದ್ದಾರೆ. ವಿನೋದ್ ಕಾಪ್ರಿ ಅವರ ಈ ಎರಡೂ ಟ್ವೀಟ್‌ಗಳು ಹೆಚ್ಚು ವೈರಲ್ ಆಗುತ್ತಿವೆ.

‘ಕಾಶ್ಮೀರ್‌ ಫೈಲ್ಸ್’ ಎನ್ನುವವರಿಗೆ ‘ದಲಿತ್‌ ಫೈಲ್ಸ್’ ಕಾಣುವುದಿಲ್ಲವೇ?

ಡಿಸೆಂಬರ್‌ 15, 2021ರಲ್ಲಿ ಪ್ರಕಟವಾಗಿರುವ ಸುದ್ದಿ ಇದು. ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಶ್ರೀನಗರ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯ ಡಿಎಸ್‌‌ಪಿ, “1990ರಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 1,724 ಜನರನ್ನು ಕೊಲ್ಲಲಾಗಿದೆ. ಅದರಲ್ಲಿ 89 ಕಾಶ್ಮೀರಿ ಪಂಡಿತರು ಸೇರಿದ್ದಾರೆ. 89 ಕಾಶ್ಮೀರಿ ಪಂಡಿತರನ್ನು ಹೊರತುಪಡಿಸಿ, ಅದೇ ಅವಧಿಯಲ್ಲಿ 1,635 ಇತರ ಧರ್ಮದ ಜನರೂ ಕೊಲೆಯಾಗಿದ್ದಾರೆ” ಎಂದಿದ್ದರು.

ಯಾವುದೇ ಕೊಲೆ, ಅಪರಾಧ ಖಂಡನೀಯ. ಆದರೆ ಕಾಶ್ಮೀರ್ ಫೈಲ್ಸ್ ಎನ್ನುವವವರು ದಲಿತ್ ಫೈಲ್ಸ್‌ಗಳ ಬಗ್ಗೆ ಯಾಕೆ ಮೌನ ವಹಿಸುತ್ತಾರೆ ಎಂದು ಕೇಳಲಾಗುತ್ತಿದೆ. ನ್ಯಾಷನಲ್‌ ಕ್ರೈಮ್‌ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, 2011 ಮತ್ತು 2020ರ ನಡುವೆ ನಡೆದ ದಲಿತರ ಮೇಲಿನ ದೌರ್ಜನ್ಯಗಳ ಸಂಖ್ಯೆ 4,15,821. ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2011ರಲ್ಲಿ ದಲಿತರ ವಿರುದ್ಧ 33,719 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಈ ಸಂಖ್ಯೆ 50,291ಕ್ಕೆ ಏರಿದೆ. ಅಂದರೆ ಒಂದು ದಶಕದ ಅವಧಿಯಲ್ಲಿ ದಲಿತರ ಮೇಲೆ ಹಲ್ಲೆಗಳು ಗಣನೀಯವಾಗಿ ಹೆಚ್ಚಾದವು. ಮುಖ್ಯವಾಗಿ ಕೇಸರಿ ಪಕ್ಷ ಆಡಳಿತವಿರುವಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ದ್ವಿಗುಣವಾಗುತ್ತಿವೆ. ಕಳೆದ ಒಂದು ದಶಕದ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶ (95,751), ಬಿಹಾರ (63,116), ರಾಜಸ್ಥಾನ (58,945), ಮಧ್ಯಪ್ರದೇಶ (44,469) ಮತ್ತು ಆಂಧ್ರಪ್ರದೇಶ (26,881) ರಾಜ್ಯಗಳಲ್ಲಿ ದಾಖಲಾಗಿವೆ. (ವಿವರಗಳಿಗೆ ‘ಇಲ್ಲಿ’ ಓದಿ)


ಇದನ್ನೂ ಓದಿರಿ: ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...