Homeಅಂಕಣಗಳುರಾಸಲೀಲೆಯ ರಾಜಕೀಯ

ರಾಸಲೀಲೆಯ ರಾಜಕೀಯ

- Advertisement -
- Advertisement -

ವಿಧಾನಸಭೆಯಲ್ಲಿ ವಿರೋಧ ಪಕ್ಷವನ್ನು ಸರಿಯಾಗಿ ಜಾಡಿಸಿದ ಕುಮಾರಣ್ಣನ ಹಾವಭಾವ ಮತ್ತು ಭಾಷೆಯನ್ನು ಮೆಚ್ಚಿಕೊಂಡ ಬಿಜೆಪಿಗಳು ಅವರಿಗೆ ಭರ್ಜರಿ ಭೋಜನ ಹಾಕಿದರಂತಲ್ಲಾ. ಕುಮಾರಣ್ಣನನ್ನು ಮಧ್ಯದಲ್ಲಿ ಕೂರಿಸಿಕೊಂಡು ಅಕ್ಕಪಕ್ಕದಲ್ಲಿ ಎಡೂರಪ್ಪ ಮತ್ತು ಬೊಮ್ಮಾಯಿ ಕುಳಿತು ವಿಶೇಷ ಕಾಳಜಿಯಿಂದ ಉಣ್ಣಿಸುತ್ತಿರುವುದನ್ನು ನೋಡಿದ ಭೋಜನಪ್ರಿಯ ಬಿಜೆಪಿಗಳೇ ದಂಗುಬಡಿದು ಹೋದರಂತಲ್ಲಾ. ಕುಮಾರಣ್ಣನ ಮಾತುಗಳನ್ನು ಮಾಜಿ ಪ್ರಧಾನಿಗಳೇ ಮೆಚ್ಚಿಕೊಂಡ ಮೇಲೆ, ಅವರಿಗೆ ಊಟಹಾಕಿ ಉಪಚರಿಸುವುದು ನಮ್ಮ ಕರ್ತವ್ಯ ಎಂದು ಭಾವಿಸಿದ ಬೊಮ್ಮಾಯಿ, ಕುಮಾರಣ್ಣನ ಇಷ್ಟದ ಭೋಜನ ಬಡಿಸುತ್ತಿರಬೇಕಾದರೆ ಇದನ್ನ ನೋಡಿದ ಚನ್ನಪಟ್ಟಣದ ಮಾಜಿ ಮಂತ್ರಿಯಾದ ಯೋಗೇಶ್ವರ್‌ಗೆ ಹೊಟ್ಟೆಯುರಿಯುಂಟಾಗಿ, ’ನಮ್ಮ ಪಾರ್ಟಿಯವರಿಗೇನು ಬಂದಿದೆ, ನನ್ನನ್ನು ಸೋಲಿಸಿದವನನ್ನು ಕರೆದು ಊಟ ಹಾಕುತ್ತಿರಬೇಕಾದರೆ ಇದು ನನ್ನ ವಿರುದ್ಧದ ಷಡ್ಯಂತ್ರವಲ್ಲವೇ’ ಎಂದು ಭಾವಿಸಿದರಂತಲ್ಲಾ. ಕೂಡಲೆ, ತಾನೂ ಕೂಡ ಎಡೂರಪ್ಪನ ವಿರುದ್ಧ ಪಿತೂರಿ ನಡೆಸಿ, ದೆಹಲಿ ಮಟ್ಟದವರೆಗೂ ಹೋಗಿ, ವಿಜಯೇಂದ್ರನ ಹಾವಳಿ ವಿಪರೀತವಾಗಿದೆ ಎಂದು ದೂರು ಹೇಳಿ, ಅಂತೂ ಪರೀಕ್ಷೆ ಬರೆದಿದ್ದೇನೆಂದು ರಿಸಲ್ಟಿಗಾಗಿ ಕಾಯುತ್ತಿರಬೇಕಾದರೆ, ಎಡೂರಪ್ಪ ಇಳಿದು ಬೊಮ್ಮಾಯಿ ಏರಿದ ಮೇಲೆ ಯೋಗೇಶ್ವರನ ಮಂತ್ರಿಗಿರಿಯೇ ಹೋಯ್ತಂತಲ್ಲಾ. ಥೂತ್ತೇರಿ.

*****

ಸುಮ್ಮನೆ ಮಾತಿಗೆ ಹೇಳೋದಾದ್ರೆ ಎಡೂರಪ್ಪನ ಟೀಮು ಕುಮಾರಣ್ಣನ ಋಣದಲ್ಲಿದೆಯಂತಲ್ಲಾ. ಧರ್ಮರಾಯನ ಸರಕಾರದಂತೆ ನಡೆದುಕೊಂಡು ಹೋಗುತ್ತಿದ್ದ ಧರ್ಮಸಿಂಗ್ ಸರಕಾರವನ್ನ ಕೆಡವಿ ಎಮ್ಮೆಲ್ಲೆಗಳನ್ನೆಲ್ಲಾ ರೆಸಾರ್ಟಿನಿಂದ ಜಮೀರ್ ಅಹಮದ್ದನ ನ್ಯಾಷನಲ್ ಟ್ರಾವಲ್ ಬಸ್‌ನಲ್ಲಿ ತಂದು ವಿಧಾನಸೌಧದ ಮುಂದೆ ಸುರಿದುಕೊಂಡು, ಕುಮಾರಣ್ಣ ಮುಖ್ಯಮಂತ್ರಿಯಾಗಿ ಎಡೂರಪ್ಪ ಉಪಮುಖ್ಯಮಂತ್ರಿಯಾದ ಘಟನೆ ಸಾಮಾನ್ಯವೆ. ಪವರಿಲ್ಲದೆ ಮನೆಗೆ ಹೋಗುವ ಸ್ಥಿತಿಯಲ್ಲಿದ್ದ ಎಡೂರಪ್ಪ ಉಪಮುಖ್ಯಮಂತ್ರಿಯಾದದ್ದೂ ಅಲ್ಲದೆ, ಮೂರುಬಾರಿ ಮುಖ್ಯಮಂತ್ರಿಯಾದುದ್ದರಲ್ಲಿ ಕುಮಾರಣ್ಣನ ಕಾಂಟ್ರಿಬ್ಯೂಷನ್ ಕಡಿಮೆಯೇ! ಇದೆಲ್ಲಾ ನೆನಸಿಕೊಂಡು ಬಿಜೆಪಿಗಳು ಮತ್ತು ದಳದವರು ಖುಷಿಯಿಂದ ಮೆಲುಕು ಹಾಕುತ್ತಿರುವಾಗಲೇ ಇತಿಹಾಸ ಮರುಕಳಿಸಿದಂತೆ ಕುಮಾರಣ್ಣನ ಕೆಲಸವನ್ನ ಬಿಜೆಪಿ ಪಾರ್ಟಿಯೇ ಮಾಡಿಬಿಟ್ಟಿತಲ್ಲಾ. ಕುಮಾರಣ್ಣ ಶಾಸಕರನ್ನ ರೆಸಾರ್ಟಿಗೆ ಕರೆದುಕೊಂಡು ಹೋದರೆ ಬಿಜೆಪಿಯವರು ಬಾಂಬೆಗೆ ಕರೆದುಕೊಂಡು ಹೋಗಿ ತಾವು ಕದ್ದು ತಂದ ಶಾಸಕರಿಗೆ ಏನೇನನ್ನೆಲ್ಲಾ ಒದಗಿಸಿಕೊಟ್ಟು, ನಂತರ ಸಿಡಿ ಬಿಡುಗಡೆ ಮಾಡದಂತೆ ಸ್ಟೇ ತರುಬೇಕಾಗುವಂತೆ ಮಾಡಿ, ಖೆಡ್ಡಾದೊಳಕ್ಕೆ ಕೆಡವಿಕೊಂಡು ತಾವು ಬದುಕಿರುವವರೆಗೆ ಬಿಜೆಪಿ ಬಗ್ಗೆ ಉಸಿರೆತ್ತದಂತೆ ಮಾಡಿದ್ದಾರಲ್ಲಾ. ಹೀಗೆ ರಚನೆಗೊಂಡ ಸರಕಾರದ ಬಗ್ಗೆ ಕಿಡಿಕಾರುವುದು ಬಿಟ್ಟು ಅಪ್ಪ ಮಕ್ಕಳೇ ಬಿಜೆಪಿ ಸರಕಾರಕ್ಕೆ ಬೆಂಗಾವಲಾಗಿರುವುದನ್ನು ನೋಡಿದ ಜನ ದಳ ನಿಜಕ್ಕೂ ಬಿಜೆಪಿಯ ಬಿಟೀಂ ಎಂದರಂತಲ್ಲಾ. ಥೂತ್ತೇರಿ.

ದಳ ಬಿಜೆಪಿಯ ಬಿಟೀಮ್ ಆದುದಕ್ಕೆ ಭಯಂಕರ ಸಿಟ್ಟುಮಾಡಿಕೊಂಡಿರುವ ಯೋಗೇಶ್ ಕುಮಾರಣ್ಣನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರಂತಲ್ಲಾ. ಈತ ನೆಲಕಚ್ಚಿದ ಪಾರ್ಟಿಯ ನಾಯಕ, ಮುಖ್ಯಮಂತ್ರಿಯಾಗಿದ್ದಾಗ ಹೋಟೆಲಿನಲ್ಲಿದ್ದು ರಾಸಲೀಲೆ ನಡೆಸಿದ ಗಿರಾಕಿ. ಈತ ನಡೆಸುತ್ತಿದ್ದ ಪ್ರಣಯಾಟಕ್ಕೆ ಸಮಯವಿಲ್ಲದಿದ್ದಾಗ, ಇನ್ನು ಮಂತ್ರಿ ಶಾಸಕರು ಜನಗಳನ್ನ ಮಾತನಾಡಿಸಲು ಬಿಡುವೆಲ್ಲಿ ಎಂದು ಕಿಡಿಕಾರಿ ಕರ್ನಾಟಕದ ಜನಕ್ಕೆ ಬಿಟ್ಟಿ ಮನರಂಜನೆ ಕೊಟ್ಟಿದ್ದಾರಲ್ಲಾ. ಕುಮಾರಣ್ಣನ ರಾಜಕೀಯ ಇತಿಹಾಸದಲ್ಲಿ ಇಷ್ಟು ಕಠೋರವಾಗಿ ಯಾರೂ ಟೀಕಿಸಿರಲಿಲ್ಲವಲ್ಲಾ. ಯೋಗೇಶ್ವರನ ಮಾತಿನಿಂದ ಕೆರಳಿದ ಕುಮಾರಣ್ಣ ನೀನೇನು ಸಾಚಾನೆ, ಮೆಗಾಸಿಟಿ ಹೆಸರಲ್ಲಿ ಜನಗಳ ದುಡ್ಡನ್ನು ಲಪಟಾಯಿಸಿ ಸಿನಿಮಾ ತೆಗೆದು ಹಣ ಹಾಕಿದವರನ್ನು ಹಾಳು ಮಾಡಿದ್ದಿ. ವೆಸ್ಟೆಂಡ್ ಹೋಟೆಲಿನ ರಾಸಲೀಲೆ ವಿಷಯಕ್ಕೆ ಬಂದರೆ ನನ್ನ ಜೊತೆ ಸಾರಾ ಮಹೇಶ್ ಇದ್ದರು. ಅವರ ಎದುರಲ್ಲೇ ಇನ್ನೂ ಹಲವರ ಜೊತೆಗೆ ವಿಶ್ರಾಂತಿಗೆ ಹೋಗುತ್ತಿದ್ದುದು ಅಲ್ಲಿಗೆ. ಕದ್ದುಮುಚ್ಚಿ ಏನನ್ನೂ ಮಾಡಿಲ್ಲ. ಅದರಲ್ಲೂ ಹೊರಗಡೆ ಪೊಲೀಸರಿದ್ದರು ಎಂದಿದ್ದಾರಲ್ಲಾ. ಆ ಪೊಲೀಸರ ಮುಖಾಂತರವೇ ನಾನು ಮಾಹಿತಿ ಸಂಗ್ರಹಿಸಿದ್ದು ಎಂದು ಯೋಗೇಶ್ವರ್ ಇನ್ನ ಹೇಳಿಲ್ಲವಂತಲ್ಲಾ. ಥೂತ್ತೇರಿ.

*****

ಕುಮಾರಣ್ಣನನ್ನು ನಡುವೆ ಕೂರಿಸಿಕೊಂಡಿದ್ದನ್ನು ನೋಡಿದ ದಳದವರು ಹೆದರಿಕೊಂಡು, ಇದೇನು ಕುಮಾರಣ್ಣ ನಮ್ಮನ್ನೆ ಬಲಿಕೊಡಲು ಹೊರಟಿದ್ದಾರಲ್ಲಾ ಎಂದು ಚರ್ಚಿಸಿದರಂತಲ್ಲಾ. ಇದಕ್ಕೆ ಬಿಜೆಪಿ ಉತ್ತರ ಪ್ರದೇಶದಲ್ಲಿ ಮಾಡಿದ ಮನೆಮುರುಕ ರಾಜಕಾರಣವೇ ಕಾರಣವಂತಲ್ಲಾ. ಅತ್ತ ಓವೈಸಿಯನ್ನು ಓಲೈಸುತ್ತ ಇತ್ತ ಮಾಯಾವತಿಯನ್ನು ಮರುಳುಮಾಡಿದ ಯೋಗಿ ಟೀಮು ಅವರ ಜೊತೆಯಲ್ಲೇ ಎಸ್ಪಿ ಯಾದವರನ್ನ ಮಕಾಡೆ ಮಲಗಿಸಿದ್ದನ್ನ ನೋಡಿದ ಭಾರತದ ಜನ ದಂಗುಬಡಿದು ಹೋಗಿದ್ದಾರಲ್ಲಾ. ದಳದ ಪಾರ್ಟಿ ಮುಖಂಡರಿಗೆ ಇದು ಹಳೆ ವರೆಸೆಯಾಗಿ ಕಾಣುತ್ತಿದೆ. ಕುಮಾರಣ್ಣ ವೆಸ್ಟೆಂಡ್ ಹೋಟೆಲು ಕಾಲಿ ಮಾಡುವಂತಾದುದರಲ್ಲಿ ತಮ್ಮ ಪಾತ್ರವಿಲ್ಲ ಎಂದು ಸಿದ್ದರಾಮಯ್ಯ ಎಷ್ಟೇ ಹೇಳಿದರೂ ದೇವು ಟೀಮು ನಂಬುತ್ತಿಲ್ಲವಂತಲ್ಲಾ.
ಆದ್ದರಿಂದ ದಳಪತಿಗಳಿಗೆ ಸಿದ್ದರಾಮಯ್ಯನ ಟೀಮು ನಿರ್ನಾಮವಾಗದ ಹೊರತು ಉಳಿಗಾಲವಿಲ್ಲ ಎನ್ನಿಸಿ ರಾಸಲೀಲೆಗೆ ಹೆಸರಾದವರು ಹೆಚ್ಚಿರುವ ಬಿಜೆಪಿಯ ಡೈನಿಂಗ್ ಹಾಲಿನಲ್ಲಿ ಕುಳಿತರಂತಲ್ಲಾ. ಥೂತ್ತೇರಿ.


ಇದನ್ನೂ ಓದಿ:  ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...