Homeಅಂಕಣಗಳುರಾಸಲೀಲೆಯ ರಾಜಕೀಯ

ರಾಸಲೀಲೆಯ ರಾಜಕೀಯ

- Advertisement -
- Advertisement -

ವಿಧಾನಸಭೆಯಲ್ಲಿ ವಿರೋಧ ಪಕ್ಷವನ್ನು ಸರಿಯಾಗಿ ಜಾಡಿಸಿದ ಕುಮಾರಣ್ಣನ ಹಾವಭಾವ ಮತ್ತು ಭಾಷೆಯನ್ನು ಮೆಚ್ಚಿಕೊಂಡ ಬಿಜೆಪಿಗಳು ಅವರಿಗೆ ಭರ್ಜರಿ ಭೋಜನ ಹಾಕಿದರಂತಲ್ಲಾ. ಕುಮಾರಣ್ಣನನ್ನು ಮಧ್ಯದಲ್ಲಿ ಕೂರಿಸಿಕೊಂಡು ಅಕ್ಕಪಕ್ಕದಲ್ಲಿ ಎಡೂರಪ್ಪ ಮತ್ತು ಬೊಮ್ಮಾಯಿ ಕುಳಿತು ವಿಶೇಷ ಕಾಳಜಿಯಿಂದ ಉಣ್ಣಿಸುತ್ತಿರುವುದನ್ನು ನೋಡಿದ ಭೋಜನಪ್ರಿಯ ಬಿಜೆಪಿಗಳೇ ದಂಗುಬಡಿದು ಹೋದರಂತಲ್ಲಾ. ಕುಮಾರಣ್ಣನ ಮಾತುಗಳನ್ನು ಮಾಜಿ ಪ್ರಧಾನಿಗಳೇ ಮೆಚ್ಚಿಕೊಂಡ ಮೇಲೆ, ಅವರಿಗೆ ಊಟಹಾಕಿ ಉಪಚರಿಸುವುದು ನಮ್ಮ ಕರ್ತವ್ಯ ಎಂದು ಭಾವಿಸಿದ ಬೊಮ್ಮಾಯಿ, ಕುಮಾರಣ್ಣನ ಇಷ್ಟದ ಭೋಜನ ಬಡಿಸುತ್ತಿರಬೇಕಾದರೆ ಇದನ್ನ ನೋಡಿದ ಚನ್ನಪಟ್ಟಣದ ಮಾಜಿ ಮಂತ್ರಿಯಾದ ಯೋಗೇಶ್ವರ್‌ಗೆ ಹೊಟ್ಟೆಯುರಿಯುಂಟಾಗಿ, ’ನಮ್ಮ ಪಾರ್ಟಿಯವರಿಗೇನು ಬಂದಿದೆ, ನನ್ನನ್ನು ಸೋಲಿಸಿದವನನ್ನು ಕರೆದು ಊಟ ಹಾಕುತ್ತಿರಬೇಕಾದರೆ ಇದು ನನ್ನ ವಿರುದ್ಧದ ಷಡ್ಯಂತ್ರವಲ್ಲವೇ’ ಎಂದು ಭಾವಿಸಿದರಂತಲ್ಲಾ. ಕೂಡಲೆ, ತಾನೂ ಕೂಡ ಎಡೂರಪ್ಪನ ವಿರುದ್ಧ ಪಿತೂರಿ ನಡೆಸಿ, ದೆಹಲಿ ಮಟ್ಟದವರೆಗೂ ಹೋಗಿ, ವಿಜಯೇಂದ್ರನ ಹಾವಳಿ ವಿಪರೀತವಾಗಿದೆ ಎಂದು ದೂರು ಹೇಳಿ, ಅಂತೂ ಪರೀಕ್ಷೆ ಬರೆದಿದ್ದೇನೆಂದು ರಿಸಲ್ಟಿಗಾಗಿ ಕಾಯುತ್ತಿರಬೇಕಾದರೆ, ಎಡೂರಪ್ಪ ಇಳಿದು ಬೊಮ್ಮಾಯಿ ಏರಿದ ಮೇಲೆ ಯೋಗೇಶ್ವರನ ಮಂತ್ರಿಗಿರಿಯೇ ಹೋಯ್ತಂತಲ್ಲಾ. ಥೂತ್ತೇರಿ.

*****

ಸುಮ್ಮನೆ ಮಾತಿಗೆ ಹೇಳೋದಾದ್ರೆ ಎಡೂರಪ್ಪನ ಟೀಮು ಕುಮಾರಣ್ಣನ ಋಣದಲ್ಲಿದೆಯಂತಲ್ಲಾ. ಧರ್ಮರಾಯನ ಸರಕಾರದಂತೆ ನಡೆದುಕೊಂಡು ಹೋಗುತ್ತಿದ್ದ ಧರ್ಮಸಿಂಗ್ ಸರಕಾರವನ್ನ ಕೆಡವಿ ಎಮ್ಮೆಲ್ಲೆಗಳನ್ನೆಲ್ಲಾ ರೆಸಾರ್ಟಿನಿಂದ ಜಮೀರ್ ಅಹಮದ್ದನ ನ್ಯಾಷನಲ್ ಟ್ರಾವಲ್ ಬಸ್‌ನಲ್ಲಿ ತಂದು ವಿಧಾನಸೌಧದ ಮುಂದೆ ಸುರಿದುಕೊಂಡು, ಕುಮಾರಣ್ಣ ಮುಖ್ಯಮಂತ್ರಿಯಾಗಿ ಎಡೂರಪ್ಪ ಉಪಮುಖ್ಯಮಂತ್ರಿಯಾದ ಘಟನೆ ಸಾಮಾನ್ಯವೆ. ಪವರಿಲ್ಲದೆ ಮನೆಗೆ ಹೋಗುವ ಸ್ಥಿತಿಯಲ್ಲಿದ್ದ ಎಡೂರಪ್ಪ ಉಪಮುಖ್ಯಮಂತ್ರಿಯಾದದ್ದೂ ಅಲ್ಲದೆ, ಮೂರುಬಾರಿ ಮುಖ್ಯಮಂತ್ರಿಯಾದುದ್ದರಲ್ಲಿ ಕುಮಾರಣ್ಣನ ಕಾಂಟ್ರಿಬ್ಯೂಷನ್ ಕಡಿಮೆಯೇ! ಇದೆಲ್ಲಾ ನೆನಸಿಕೊಂಡು ಬಿಜೆಪಿಗಳು ಮತ್ತು ದಳದವರು ಖುಷಿಯಿಂದ ಮೆಲುಕು ಹಾಕುತ್ತಿರುವಾಗಲೇ ಇತಿಹಾಸ ಮರುಕಳಿಸಿದಂತೆ ಕುಮಾರಣ್ಣನ ಕೆಲಸವನ್ನ ಬಿಜೆಪಿ ಪಾರ್ಟಿಯೇ ಮಾಡಿಬಿಟ್ಟಿತಲ್ಲಾ. ಕುಮಾರಣ್ಣ ಶಾಸಕರನ್ನ ರೆಸಾರ್ಟಿಗೆ ಕರೆದುಕೊಂಡು ಹೋದರೆ ಬಿಜೆಪಿಯವರು ಬಾಂಬೆಗೆ ಕರೆದುಕೊಂಡು ಹೋಗಿ ತಾವು ಕದ್ದು ತಂದ ಶಾಸಕರಿಗೆ ಏನೇನನ್ನೆಲ್ಲಾ ಒದಗಿಸಿಕೊಟ್ಟು, ನಂತರ ಸಿಡಿ ಬಿಡುಗಡೆ ಮಾಡದಂತೆ ಸ್ಟೇ ತರುಬೇಕಾಗುವಂತೆ ಮಾಡಿ, ಖೆಡ್ಡಾದೊಳಕ್ಕೆ ಕೆಡವಿಕೊಂಡು ತಾವು ಬದುಕಿರುವವರೆಗೆ ಬಿಜೆಪಿ ಬಗ್ಗೆ ಉಸಿರೆತ್ತದಂತೆ ಮಾಡಿದ್ದಾರಲ್ಲಾ. ಹೀಗೆ ರಚನೆಗೊಂಡ ಸರಕಾರದ ಬಗ್ಗೆ ಕಿಡಿಕಾರುವುದು ಬಿಟ್ಟು ಅಪ್ಪ ಮಕ್ಕಳೇ ಬಿಜೆಪಿ ಸರಕಾರಕ್ಕೆ ಬೆಂಗಾವಲಾಗಿರುವುದನ್ನು ನೋಡಿದ ಜನ ದಳ ನಿಜಕ್ಕೂ ಬಿಜೆಪಿಯ ಬಿಟೀಂ ಎಂದರಂತಲ್ಲಾ. ಥೂತ್ತೇರಿ.

ದಳ ಬಿಜೆಪಿಯ ಬಿಟೀಮ್ ಆದುದಕ್ಕೆ ಭಯಂಕರ ಸಿಟ್ಟುಮಾಡಿಕೊಂಡಿರುವ ಯೋಗೇಶ್ ಕುಮಾರಣ್ಣನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರಂತಲ್ಲಾ. ಈತ ನೆಲಕಚ್ಚಿದ ಪಾರ್ಟಿಯ ನಾಯಕ, ಮುಖ್ಯಮಂತ್ರಿಯಾಗಿದ್ದಾಗ ಹೋಟೆಲಿನಲ್ಲಿದ್ದು ರಾಸಲೀಲೆ ನಡೆಸಿದ ಗಿರಾಕಿ. ಈತ ನಡೆಸುತ್ತಿದ್ದ ಪ್ರಣಯಾಟಕ್ಕೆ ಸಮಯವಿಲ್ಲದಿದ್ದಾಗ, ಇನ್ನು ಮಂತ್ರಿ ಶಾಸಕರು ಜನಗಳನ್ನ ಮಾತನಾಡಿಸಲು ಬಿಡುವೆಲ್ಲಿ ಎಂದು ಕಿಡಿಕಾರಿ ಕರ್ನಾಟಕದ ಜನಕ್ಕೆ ಬಿಟ್ಟಿ ಮನರಂಜನೆ ಕೊಟ್ಟಿದ್ದಾರಲ್ಲಾ. ಕುಮಾರಣ್ಣನ ರಾಜಕೀಯ ಇತಿಹಾಸದಲ್ಲಿ ಇಷ್ಟು ಕಠೋರವಾಗಿ ಯಾರೂ ಟೀಕಿಸಿರಲಿಲ್ಲವಲ್ಲಾ. ಯೋಗೇಶ್ವರನ ಮಾತಿನಿಂದ ಕೆರಳಿದ ಕುಮಾರಣ್ಣ ನೀನೇನು ಸಾಚಾನೆ, ಮೆಗಾಸಿಟಿ ಹೆಸರಲ್ಲಿ ಜನಗಳ ದುಡ್ಡನ್ನು ಲಪಟಾಯಿಸಿ ಸಿನಿಮಾ ತೆಗೆದು ಹಣ ಹಾಕಿದವರನ್ನು ಹಾಳು ಮಾಡಿದ್ದಿ. ವೆಸ್ಟೆಂಡ್ ಹೋಟೆಲಿನ ರಾಸಲೀಲೆ ವಿಷಯಕ್ಕೆ ಬಂದರೆ ನನ್ನ ಜೊತೆ ಸಾರಾ ಮಹೇಶ್ ಇದ್ದರು. ಅವರ ಎದುರಲ್ಲೇ ಇನ್ನೂ ಹಲವರ ಜೊತೆಗೆ ವಿಶ್ರಾಂತಿಗೆ ಹೋಗುತ್ತಿದ್ದುದು ಅಲ್ಲಿಗೆ. ಕದ್ದುಮುಚ್ಚಿ ಏನನ್ನೂ ಮಾಡಿಲ್ಲ. ಅದರಲ್ಲೂ ಹೊರಗಡೆ ಪೊಲೀಸರಿದ್ದರು ಎಂದಿದ್ದಾರಲ್ಲಾ. ಆ ಪೊಲೀಸರ ಮುಖಾಂತರವೇ ನಾನು ಮಾಹಿತಿ ಸಂಗ್ರಹಿಸಿದ್ದು ಎಂದು ಯೋಗೇಶ್ವರ್ ಇನ್ನ ಹೇಳಿಲ್ಲವಂತಲ್ಲಾ. ಥೂತ್ತೇರಿ.

*****

ಕುಮಾರಣ್ಣನನ್ನು ನಡುವೆ ಕೂರಿಸಿಕೊಂಡಿದ್ದನ್ನು ನೋಡಿದ ದಳದವರು ಹೆದರಿಕೊಂಡು, ಇದೇನು ಕುಮಾರಣ್ಣ ನಮ್ಮನ್ನೆ ಬಲಿಕೊಡಲು ಹೊರಟಿದ್ದಾರಲ್ಲಾ ಎಂದು ಚರ್ಚಿಸಿದರಂತಲ್ಲಾ. ಇದಕ್ಕೆ ಬಿಜೆಪಿ ಉತ್ತರ ಪ್ರದೇಶದಲ್ಲಿ ಮಾಡಿದ ಮನೆಮುರುಕ ರಾಜಕಾರಣವೇ ಕಾರಣವಂತಲ್ಲಾ. ಅತ್ತ ಓವೈಸಿಯನ್ನು ಓಲೈಸುತ್ತ ಇತ್ತ ಮಾಯಾವತಿಯನ್ನು ಮರುಳುಮಾಡಿದ ಯೋಗಿ ಟೀಮು ಅವರ ಜೊತೆಯಲ್ಲೇ ಎಸ್ಪಿ ಯಾದವರನ್ನ ಮಕಾಡೆ ಮಲಗಿಸಿದ್ದನ್ನ ನೋಡಿದ ಭಾರತದ ಜನ ದಂಗುಬಡಿದು ಹೋಗಿದ್ದಾರಲ್ಲಾ. ದಳದ ಪಾರ್ಟಿ ಮುಖಂಡರಿಗೆ ಇದು ಹಳೆ ವರೆಸೆಯಾಗಿ ಕಾಣುತ್ತಿದೆ. ಕುಮಾರಣ್ಣ ವೆಸ್ಟೆಂಡ್ ಹೋಟೆಲು ಕಾಲಿ ಮಾಡುವಂತಾದುದರಲ್ಲಿ ತಮ್ಮ ಪಾತ್ರವಿಲ್ಲ ಎಂದು ಸಿದ್ದರಾಮಯ್ಯ ಎಷ್ಟೇ ಹೇಳಿದರೂ ದೇವು ಟೀಮು ನಂಬುತ್ತಿಲ್ಲವಂತಲ್ಲಾ.
ಆದ್ದರಿಂದ ದಳಪತಿಗಳಿಗೆ ಸಿದ್ದರಾಮಯ್ಯನ ಟೀಮು ನಿರ್ನಾಮವಾಗದ ಹೊರತು ಉಳಿಗಾಲವಿಲ್ಲ ಎನ್ನಿಸಿ ರಾಸಲೀಲೆಗೆ ಹೆಸರಾದವರು ಹೆಚ್ಚಿರುವ ಬಿಜೆಪಿಯ ಡೈನಿಂಗ್ ಹಾಲಿನಲ್ಲಿ ಕುಳಿತರಂತಲ್ಲಾ. ಥೂತ್ತೇರಿ.


ಇದನ್ನೂ ಓದಿ:  ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...