Homeಮುಖಪುಟವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ವಿಶ್ವ ಹ್ಯಾಪಿನೆಸ್ಸ್‌ ವರದಿ: ಭಾರತ 136ನೇ ರ್‍ಯಾಂಕ್‌‌; ಅಫ್ಘಾನ್ ಕೊನೆಯ 146ನೇ ರ್‍ಯಾಂಕ್‌‌!

ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ.

- Advertisement -
- Advertisement -

ಮಾರ್ಚ್ 20ರಂದು ‘ಅಂತಾರಾಷ್ಟ್ರೀಯ ಹ್ಯಾಪಿನೆಸ್‌ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಇದರ ಕೆಲವೇ ದಿನಗಳ ಮೊದಲು ವಿಶ್ವ ಸಂಸ್ಥೆಯು ತನ್ನ 10ನೇ ವರ್ಷದ ‘ವಿಶ್ವ ಹ್ಯಾಪಿನೆಸ್ಸ್‌ ವರದಿ’ಯನ್ನು ಬಿಡುಗಡೆ ಮಾಡಿದೆ. 146 ದೇಶಗಳ ಈ ಪಟ್ಟಿಯಲ್ಲಿ ಭಾರತವು 136ನೇ ಸ್ಥಾನವನ್ನು ಪಡೆದಿದೆ. ಪಟ್ಟಿಯಲ್ಲಿ ಕೊನೆಯ ದೇಶವಾಗಿ ಅಪಘಾನಿಸ್ತಾನ 146 ಸ್ಥಾನ ಪಡೆದಿದ್ದು, ವಿಶ್ವದ ಅತೃಪ್ತ ದೇಶವಾಗಿ ಹೊಮ್ಮಿದೆ. ಉಳಿದಂತೆ ಭಾರತದ ನೆರೆಯ ದೇಶಗಳಾದ ಚೀನಾ, ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್‌‌ ಮತ್ತು ಶ್ರೀಲಂಕಾ ದೇಶಗಳು ಪಟ್ಟಿಯಲ್ಲಿ ಭಾರತಕ್ಕಿಂತ ಮೇಲೆ ಇವೆ.

ಫಿನ್‌ಲ್ಯಾಂಡ್‌ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಸತತ ಐದನೇ ವರ್ಷವೂ ಹೆಸರಿಸಲ್ಪಟ್ಟಿದೆ. ಈ ಪಟ್ಟಿಯಲ್ಲಿ ಡೆನ್ಮಾರ್ಕ್ ಎರಡನೇ ಸ್ಥಾನದಲ್ಲಿದ್ದು, ನಂತರದ ಸ್ಥಾನಗಳಲ್ಲಿ ಐಸ್‌ಲ್ಯಾಂಡ್‌, ಸ್ವಿಟ್ಜರ್ಲ್ಯಾಂಡ್ ಮತ್ತು ನೆದರ್ಲ್ಯಾಂಡ್ ಇವೆ.

ಇದನ್ನೂ ಓದಿ: ಅವರೇ ಹಾಕಿಕೊಂಡ ಟಾರ್ಗೆಟ್ ಮೂಲಕ ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-1

ಪ್ರಪಂಚದಾದ್ಯಂತ 150ಕ್ಕೂ ಹೆಚ್ಚು ದೇಶಗಳ ಜಾಗತಿಕ ಸಂತೋಷದ ಶ್ರೇಯಾಂಕವನ್ನು ಹೊಂದಿರುವ ‘ವರ್ಲ್ಡ್ ಹ್ಯಾಪಿನೆಸ್ ವರದಿ’ಯು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಪರಿಹಾರಗಳ ನೆಟ್‌ವರ್ಕ್‌ನಿಂದ ಪ್ರತಿ ವರ್ಷ ಬಿಡುಗಡೆಯಾಗುತ್ತದೆ.

“ದೇಶವೊಂದರ ಸರ್ಕಾರಗಳು ತಮ್ಮ ಜನರ ಮೇಲೆ ಹೇಗೆ ಕಾಳಜಿ ವಹಿಸುತ್ತವೆ ಎಂಬುದರ ಮೇಲೆ ದೇಶಗಳು ರ್‍ಯಾಂಕಿಂಗ್ ಪಡೆಯುತ್ತದೆ. ನಿರ್ದಿಷ್ಟ ದೇಶದ ಜನರ ಸಂತೃಪ್ತಿಯ ಜೀವನ ಆ ದೇಶದ ಉನ್ನತ ರೇಟಿಂಗ್‌ಗಳಿಗೆ ಕಾರಣವಾಗುತ್ತದೆ” ಎಂದು ಆಲ್ಟೊ ವಿಶ್ವವಿದ್ಯಾಲಯದ ತಜ್ಞ ಫ್ರಾಂಕ್ ಮಾರ್ಟೆಲಾ ಹೇಳುತ್ತಾರೆ.

ಸಂಖ್ಯಾಶಾಸ್ತ್ರಜ್ಞರು ಗ್ಯಾಲಪ್‌ ವಲ್ಡ್‌ ಪೋಲ್‌ ಮತ್ತು ತಲವಾರು GDP, ಜೀವಿತಾವಧಿ, ಆರೋಗ್ಯಕರ ಜೀವಿತಾವಧಿ, ಭ್ರಷ್ಟಾಚಾರದ ಗ್ರಹಿಕೆಗಳು, ಉದಾರತೆ, ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ, ಆರೋಗ್ಯಕರ ಜೀವಿತಾವಧಿ, ಸಾಮಾಜಿಕ ಬೆಂಬಲ ಅಂಶಗಳ ಡೇಟಾದ ಮೇಲೆ ಶ್ರೇಯಾಂಕವನ್ನು ಆಧರಿಸಿ ಈ ವರದಿಯನ್ನು ತಯಾರಿಸುತ್ತಾರೆ.

ಜಗತ್ತು ಕೊರೊನಾದ ಮೂರನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಈ ಸಮಯದಲ್ಲಿ, ವರದಿಯು 2022ರಲ್ಲಿ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿದೆ: ಹಿಂತಿರುಗಿ ನೋಡುವುದು; ಕೋವಿಡ್-19 ರ ಸಂದರ್ಭದಲ್ಲಿ ಜನರು ಮತ್ತು ದೇಶಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನೋಡುವುದು; ಮತ್ತು ಭವಿಷ್ಯದಲ್ಲಿ ಯೋಗಕ್ಷೇಮದ ವಿಜ್ಞಾನವು ಹೇಗೆ ವಿಕಸನಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಎದುರು ನೋಡುವುದು.

ಈ ವರ್ಷದ ವರದಿಯು ಗ್ಯಾಲಪ್ ವರ್ಲ್ಡ್ ಪೋಲ್‌ನಲ್ಲಿ ಮೇಲ್ವಿಚಾರಣೆ ಮಾಡಲಾದ ಈ ಎಲ್ಲಾ ಮೂರು ಕಾರ್ಯಗಳಲ್ಲಿ ವಿಶ್ವಾದ್ಯಂತ ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಂಡಿದೆ. “2021 ರಲ್ಲಿ ಅಪರಿಚಿತರಿಗೆ ಸಹಾಯ ಮಾಡುವುದು, ಸ್ವಯಂ ಸೇವೆ ಮತ್ತು ದೇಣಿಗೆಗಳು ಪ್ರಪಂಚದ ಪ್ರತಿಯೊಂದು ಭಾಗದಲ್ಲಿ ತೀವ್ರವಾಗಿ ಹೆಚ್ಚಿವೆ” ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವರ್ಲ್ಡ್ ಹ್ಯಾಪಿನೆಸ್ ಸಂಪಾದಕ ಜಾನ್ ಹೆಲ್ಲಿವೆಲ್ ಹೇಳಿದ್ದಾರೆ.

ಈ ವರ್ಷದ ರ್‍ಯಾಂಕಿಂಗ್‌ನಲ್ಲಿ ಭಾರತದ ನಂತರದ ಸ್ಥಾನ ಪಡೆದ ಕೊನೆಯ ಹತ್ತು ದೇಶಗಳಲ್ಲಿ ಎಂಟು ದೇಶಗಳು ಆಫ್ರಿಕಾ ಖಂಡದ ದೇಶಗಳಾಗಿವೆ. ಉಳಿದ ಎರಡು ದೇಶಗಳಲ್ಲಿ ಒಂದು ಮಧ್ಯಪ್ರಾಚ್ಯ ದೇಶವಾದ ಲೆಬನಾನ್ ಆಗಿದ್ದು, ಅಲ್ಲಿ ಕಳೆದ ವರ್ಷ ನಾಗರಿಕ ದಂಗೆ ನಡೆದಿತ್ತು. ಮತ್ತೊಂದು ದೇಶ ಅಪಘಾನಿಸ್ತಾನವಾಗಿದ್ದು, ಕಳೆದ ವರ್ಷ ಅಲ್ಲಿನ ಆಡಳಿತವನ್ನು ತಾಲಿಬಾನ್ ಸಂಘಟನೆಯು ವಹಿಸಿಕೊಂಡಿತ್ತು.

ಈ ವರ್ಷದ ಪಟ್ಟಿಯಲ್ಲಿ ಭಾರತ ಮತ್ತು ನಮ್ಮ ನೆರೆಯ ದೇಶಗಳ ರ್‍ಯಾಂಕಿಂಗ್‌ ಹೀಗಿದೆ.

ವಿಶ್ವಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಈ ಪಟ್ಟಿಯನ್ನು ನೀಡುತ್ತಿದೆ. 2015ರ 158 ದೇಶಗಳ ಹ್ಯಾಪಿನೆಸ್‌ ರಿಪೋರ್ಟ್‌‌ನಲ್ಲಿ ಭಾರತವು 117ನೇ ಸ್ಥಾನಗಳಲ್ಲಿ ಇತ್ತು. 2018ರ ಹೊತ್ತಿಗೆ ಭಾರತದ ರ್‍ಯಾಂಕಿಂಗ್‌ 133ಕ್ಕೆ ಇಳಿದಿದ್ದು, ಈ ವೇಳೆ ವಿಶ್ವಸಂಸ್ಥೆಯು 156 ದೇಶಗಳನ್ನು ಪಟ್ಟಿ ಮಾಡಿತ್ತು. ಕೊರೊನಾ ನಂತರದ ಭಾರತದ ರ್‍ಯಾಂಕಿಂಗ್ ಮತ್ತಷ್ಟು ಇಳಿದಿದ್ದು, 146 ದೇಶಗಳ ಪಟ್ಟಿಯಲ್ಲಿ 136ನೇ ರ್‍ಯಾಂಕ್‌ ಪಡೆದಿದೆ.

ಇದನ್ನೂ ಓದಿ: ಮೋದಿ ಸರ್ಕಾರದ್ದೊಂದು ಮೌಲ್ಯಮಾಪನ: ಭಾಗ-5

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...