Homeಚಳವಳಿದಲಿತರ ರಕ್ತದಲ್ಲಿ ಚರಿತ್ರೆ ಬರೆಯಲು ತಯಾರಿ: ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಕೆ

ದಲಿತರ ರಕ್ತದಲ್ಲಿ ಚರಿತ್ರೆ ಬರೆಯಲು ತಯಾರಿ: ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಾರ್ಚ್‌ 18 ಮತ್ತು 19ರಂದು ದಾವಣಗೆರೆ ಚಲೋ ನಡೆಯುತ್ತಿದ್ದು, ದಸಂಸದ ಹಿರಿಯ ಜೀವ, ಚಿಂತಕ ಕೋಟಗಾನಹಳ್ಳಿ ರಾಮಯ್ಯ ಅವರು ಆಡಿದ ಭಾಷಣದ ಸಂಕ್ಷಿಪ್ತ ರೂಪ ಇಲ್ಲಿದೆ.

- Advertisement -
- Advertisement -

(ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಮಾವೇಶ ಮಾರ್ಚ್‌ 18 ಮತ್ತು 19ರಂದು ದಾವಣಗೆರೆಯಲ್ಲಿ ನಡೆಯುತ್ತಿದೆ. ದಾವಣಗೆರೆ ಚಲೋ ಹೆಸರಿನಲ್ಲಿ ಸಮಾವೇಶ ನಡೆಯುತ್ತಿದ್ದು, ದಸಂಸದ ಹಿರಿಯ ಜೀವ, ಚಿಂತಕ ಕೋಟಗಾನಹಳ್ಳಿ ರಾಮಯ್ಯ ಅವರು ಆಡಿದ ಭಾಷಣದ ಸಂಕ್ಷಿಪ್ತ ರೂಪ ಇಲ್ಲಿದೆ.)

ದಲಿತ ಚಳಿವಳಿಯ ಚರಿತ್ರೆಯನ್ನು ಯಾವ ರೀತಿಯಲ್ಲಿ ನೋಡಬೇಕು ಎಂಬ ಪ್ರಶ್ನೆ ನಮ್ಮ ಮುಂದೆ ಇದೆ.  ಇದುವರೆಗೂ ಬಂದಿರುವ ಅಥವಾ ನಿರೂಪಣೆಗೊಂಡಿರುವ ದಲಿತ ಚರಿತ್ರೆ ಮೂವರ ಸುತ್ತ ನಿರೂಪಿಸಲ್ಪಟ್ಟಿದೆ. ಬಿ.ಕೃಷ್ಣಪ್ಪ, ದೇವನೂರ ಮಹಾದೇವ, ಸಿದ್ದಲಿಂಗಯ್ಯ- ಈ ಮೂವರ ಸುತ್ತ ದಲಿತ ಚಳವಳಿಯನ್ನು ಬರೆಯಲಾಗಿದೆ. ಸಂತೋಷ. ಯಾಕೆಂದರೆ ಚಳವಳಿಯ ಹೆಗ್ಗುರುತುಗಳಾಗಿ ಕೆಲವು ವ್ಯಕ್ತಿತ್ವಗಳನ್ನು ನಾವು ಗುರಿಸಿಕೊಳ್ಳುವುದರಿಂದ ಚಳವಳಿಗೆ ದೊಡ್ಡ ಶಕ್ತಿ ಬರುತ್ತದೆ ಎಂಬುದು ನಿಜ.

ಕೃಷ್ಣಪ್ಪ ಅವರನ್ನು ನಾವು ಯಾವ ರೀತಿ ಅರ್ಥ ಮಾಡಿಕೊಳ್ಳುವುದು? ಬಿ.ಕೃಷ್ಣಪ್ಪ ಅವರು ದಲಿತ ಸಂಘರ್ಷ ಸಮಿತಿಯ ಮೊದಲ ರಾಜ್ಯ ಸಂಚಾಲಕರು. ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಹಲವು ಹೋರಾಟಗಳನ್ನು ಹಲವು ವರ್ಷಗಳ ಕಾಲ ನಾವು ರೂಪಿಸಿದ್ದೇವೆ. ಕೃಷ್ಣಪ್ಪ ಅವರು ಹೋರಾಟ ಮತ್ತು ನುಡಿಯನ್ನು ನಿಭಾಯಿಸಿದ್ದರಿಂದ ಅವರ ಬಗ್ಗೆ ಅಪಾರ ಗೌರವವಿದೆ.

ದಸಂಸಕ್ಕೂ ಮೊದಲು ದಲಿತ ಲೇಖಕ ಕಲಾವಿದರ (ದಲೇಕ) ಬಳಗವಿತ್ತು. ಸವಾಲುಗಳನ್ನು ದಲೇಕದಿಂದ ಮಾತ್ರ ಎದುರಿಸಲು ಸಾಧ್ಯವಿಲ್ಲ. ಸಂಘಟನೆ ಅಗತ್ಯವಿದೆ ಎಂದು ಅರಿತೆವು. ದಲಿತ ಸಂಘರ್ಷ ಸಮಿತಿಯ ತಾಯಿ ದಲೇಕಯಿಸಂ ಎಂಬ ಸತ್ಯವನ್ನು ನಾವು ಒಪ್ಪಿಕೊಳ್ಳಬೇಕು. ಯಾಕೆಂದರೆ ಇವತ್ತಿನ ಸಮಸ್ಯೆಗಳನ್ನು ಇದರ ಮೂಲಕ ನಿವಾರಿಸಿಕೊಳ್ಳಬಹುದು. ದಲಿತ ಸಂಘರ್ಷ ಸಮಿತಿ ಒಡೆದುಹೋಗಿ ಹಲವು ವಿಭಾಗಗಳಾಗಿ ಹೋಗಿದ್ದು, ದಲೇಕಯಿಸಂ ಥರದ ಒಂದು ತಾಯಿ ಗರ್ಭ ಬೇಕಾಗಿದೆ.

ಬಿ.ಕೃಷ್ಣಪ್ಪ ಎಂದರೆ ಹೋರಾಟದ ಸ್ಫೂರ್ತಿ. ರಾಜ್ಯದ ಯಾವುದೇ ಮೂಲೆಯಲ್ಲಿ ಹೋರಾಟ ನಡೆದರೂ ಬಿ.ಕೃಷ್ಣಪ್ಪ ಅವರು ಅಲ್ಲಿರುತ್ತಿದ್ದರು. ಹೀಗಾಗಿ ಕೃಷ್ಣಪ್ಪ ಅವರು ದಲಿತ ಜನಮಾನಸದಲ್ಲಿ ಉಳಿದಿದ್ದಾರೆ. ಬಾಬಾ ಸಾಹೇಬರ ಹೆಸರನ್ನು ಹೇಗೆ ನಾವು ಹೇಗೆ ನೆನಪಿಸಿಕೊಳ್ಳುತ್ತೇವೆಯೋ ಹಾಗೆಯೇ ಬಿ.ಕೃಷ್ಣಪ್ಪ ಅವರ ಹೆಸರನ್ನು ನಾವು ನೆನಪಿಸಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿರಿ: `ಕಾಶ್ಮೀರ್‌ ಫೈಲ್ಸ್‌‌’ ಎಂದು ಕೂಗುತ್ತಿರುವವರಿಗೆ ‘ದಲಿತ್‌ ಫೈಲ್ಸ್‌‌’ ಕಾಣುವುದಿಲ್ಲವೇ?

ನಲವತ್ತು ವರ್ಷಗಳ ಹಿಂದೆ ನಮಗೆ ಇದ್ದಂತಹ ಸವಾಲುಗಳೇ ಬೇರೆ. ಇಂದಿನ ಸಮಸ್ಯೆಗಳೇ ಬೇರೆ ಇದೆ. 1991ರವರೆಗೆ ದಲಿತ ಚಳಿವಳಿಯ ತಿಳಿವಳಿಕೆ, ತಾತ್ವಿಕತೆ, ನಡೆ- ಇಡೀ ಸಮುದಾಯವನ್ನು ಒಳಗನ್ನು, ಆಂತರ್ಯ, ಅಂತಸತ್ವವನ್ನು ಚೈತನ್ಯಗೊಳಿಸುವಂತೆ ಇತ್ತು. ಕ್ರಾಂತಿಕಾರಕವಾಗಿತ್ತು.  1991ರ ನಂತರ ಏನಾಯಿತೆಂದು ನಾವು ವಿಮರ್ಶೆ ಮಾಡಿಕೊಳ್ಳಲೇಬೇಕಾಗುತ್ತದೆ. ಚಳವಳಿಯೊಂದು ವ್ಯಕ್ತಿಗಳನ್ನು ಮೀರಿ ಯೋಚಿಸಬೇಕಾಗುತ್ತದೆ. ವಿಮರ್ಶೆ ಇಲ್ಲದೆ ಯಾವುದೇ ರೀತಿಯ ಚಳವಳಿಗಳು ಗಟ್ಟಿಗೊಳ್ಳುವುದಿಲ್ಲ. ಚಳವಳಿಯ ದಾರಿಗಳು ಸುಲಭಗೊಳ್ಳುವುದಿಲ್ಲ.

ಕಬನ್‌ ಪಾರ್ಕ್‌‌ನಲ್ಲಿ 1991ರಲ್ಲಿ ನಡೆದ ಕಾರ್ಯಕ್ರಮ ರಾಜಕೀಯ ವೇದಿಕೆಯಾಗಿದ್ದನ್ನು ನೆನಪಿಸಿಕೊಳ್ಳಬೇಕು. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿ.ಕೃಷ್ಣಪ್ಪ ಅವರು ಜನತಾ ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸಿದ್ದರು. ನೀವು ಚುನಾವಣೆಯಲ್ಲಿ ನಿಲ್ಲುತ್ತಿರುವ ಪಕ್ಷ ಬಲಿಷ್ಠ ಜಾತಿಯಾದ ಒಕ್ಕಲಿಗರ ಪ್ರಾಬಲ್ಯ ಹೊಂದಿದೆ. ಇವರ ವಿರುದ್ಧ ಹೋರಾಟ ಮಾಡುತ್ತ ಬಂದಿದ್ದೇವೆ. ನೀವು ಅದೇ ಪಕ್ಷದಿಂದ ಸ್ಪರ್ಧಿಸಿದ್ದೀರಿ ಎಂದು ನಾವು ಆಕ್ಷೇಪ ಎತ್ತಿದೆವು.

ಚುನಾವಣೆಯಲ್ಲಿ ಸ್ಪರ್ಧಿಸಿ ನಾವು ಶಾಸನ ಸಭೆಗಳಿಗೆ ಹೋಗದಿದ್ದರೆ ನಮ್ಮ ನೋವುಗಳಿಗೆ ಪರಿಹಾರವಿಲ್ಲ ಎಂಬ ನಂಬಿಕೆ ಹಾಗೂ ಆಶಯಗಳಿಂದ ಕೃಷ್ಣಪ್ಪ ಅವರು ಚುನಾವಣೆಗೆ ಹೋದರು. ಖಂಡಿತ ಅವರು ವೋಟ್ ಹಾಕಲ್ಲ ಎಂಬುದು ಗೊತ್ತಿತ್ತು. ಅವರು ಗೆಲ್ಲಲಿಲ್ಲ. ಆದರೆ ಕೃಷ್ಣಪ್ಪ ಅವರು ಮೂರನೇ ಸ್ಥಾನ ಪಡೆದರು. ಈ ಸೋಲಿನಿಂದಾಗಿ ಕೃಷ್ಣಪ್ಪ ಅವರ ಉತ್ಸಾಹ ಕೊಂಚ ಕುಸಿಯಿತು.

ಆ ಸಂದರ್ಭದಲ್ಲಿ ಕಾನ್ಶೀರಾಮ್‌ ಅವರ ನೇತೃತ್ವದಲ್ಲಿ ಉತ್ತರಪ್ರದೇಶದಲ್ಲಿ ಬಿಎಸ್‌ಪಿ ಯಶಸ್ವಿಯಾಗಿತ್ತು. ಚುನಾವಣೆಯ ನಂತರ ದಸಂಸ ಸಭೆ ನಡೆಯಿತು. ನಾವು ಯಾವುದಾದರೂ ಪಕ್ಷವನ್ನು ಆಯ್ಕೆ ಮಾಡಿಕೊಳ್ಳುವುದಾದರೆ ಬಿಎಸ್‌ಪಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ತೀರ್ಮಾನಿಸಲಾಯಿತು. ಆದರೆ ಒಂದು ಅಂಶವನ್ನು ಒಪ್ಪಿಕೊಳ್ಳಲಾಯಿತು. ಯಾರ್‍ಯಾರು ಸಕ್ರಿಯ ರಾಜಕಾರಣಕ್ಕೆ ಹೋಗುತ್ತಾರೆಂಬುದನ್ನು  ಪಟ್ಟಿ ಮಾಡೋಣ. ಬಿಎಸ್‌ಪಿಯಲ್ಲಿ ದಲಿತ ಹಿತಾಸಕ್ತಿ ಕಡಿಮೆಯಾದರೆ  ಅದನ್ನೂ ಪ್ರಶ್ನಿಸೋಣ. ದಲಿತ ಚಳವಳಿ ಒಂದು ಸಾಂಸ್ಕೃತಿಕ ಹಾಗೂ ರಾಜಕೀಯ ಒತ್ತಡದ ಗುಂಪಾಗಿ ಉಳಿದುಕೊಳ್ಳಲಿ ಎಂದು ತೀರ್ಮಾನಿಸಲಾಯಿತು. ಆದರೆ ಇಡೀ ದಲಿತ ಚಳವಳಿಯನ್ನು ಬಿಎಸ್‌ಪಿಯೊಳಗೆ ವಿಲೀನಗೊಳಿಸಲಾಯಿತು. ಇದು ಬಹಳ ಚೋದ್ಯದ ಸಂಗತಿ. ಇದರಿಂದ ಏನಾಯಿತೆಂದು ನಮಗೆ ಗೊತ್ತೇ ಇದೆ. ಸಂಘಟನೆಯಿಂದ ಕೆಲವರು ಹೊರಗಡೆ ಬಂದರು. ಅಲ್ಲಿಂದ ವಿಘಟನೆ ಆರಂಭವಾಯಿತು. ಈಗ ಯಾವ ಸ್ಥಿತಿ ಇದೆ ಎಂಬುದನ್ನು ಈಗ ನಾವು ಹೇಳಬೇಕಾಗಿಲ್ಲ.

ಇದನ್ನೂ ಓದಿರಿ: ಕಂಬಾಲಪಲ್ಲಿ ದಲಿತರ ಹತ್ಯಾಕಾಂಡಕ್ಕೆ 22 ವರ್ಷ: ನ್ಯಾಯಕ್ಕಾಗಿ ಕಾಯುತ್ತಲೇ ಮೃತರಾದ ಸಂತ್ರಸ್ತರ ಸಂದರ್ಶನ

ಪ್ರಬುದ್ಧ ಭಾರತ ವರ್ಸಸ್ ಪೇಶ್ವೆ ಭಾರತ ಎಂದು ಇಲ್ಲಿ ಗೋಡೆ ಮೇಲೆ ಬರೆಯಲಾಗಿದೆ. ಚರಿತ್ರೆಯನ್ನು ಇನ್ನು ಮುಂದೆ ದಲಿತರ ರಕ್ತದಲ್ಲಿ ಬರೆಯಲಾಗುತ್ತದೆ.  ಹಿಂದುತ್ವ ರಾಜಕಾರಣಕ್ಕೆ ಅರಿಗಿಸಿಕೊಳ್ಳಲಾಗದ ಸತ್ಯವೆಂದರೆ ಅಂಬೇಡ್ಕರ್‌ ವಾದಿಗಳು. ಈ ಅಂಬೇಡ್ಕರ್‌ ವಾದಿಗಳನ್ನು ಹೇಗೆ ನಿರ್ನಾಮ ಮಾಡಬೇಕು ಎಂಬುದೇ ಅವರ ಮುಂದಿರುವ ಸವಾಲು. ಅದಕ್ಕೆ ಬೇಕಾದ ಯೋಜನೆಯನ್ನು ಅವರು ಹೀಗಾಗಲೇ ಮಾಡಿಕೊಂಡಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಯಾವುದೇ ಬಣವಾದರೂ ನಾವು ನಡೆಯಬೇಕಾದ ದಾರಿಯ ಕುರಿತು ಯೋಚಿಸಬೇಕಾಗಿದೆ. ವಿಸ್ತಾರಗೊಳ್ಳದೆ ಇರುವ ಪ್ರಜ್ಞೆಯನ್ನು ಹೇಗೆ ವಿಸ್ತಾರಗೊಳಿಸಬೇಕೆಂದು ಚಿಂತಿಸಬೇಕಿದೆ. ಭವಿಷ್ಯದಲ್ಲಿ ಕಟ್ಟಬೇಕಾದ ದಲಿತ ಸಂಘರ್ಷ ಸಮಿತಿ ಯಾವ ರೀತಿ ಇರಬೇಕು ಎಂಬುದನ್ನು ತಿಳಿಯಬೇಕು. ದಲಿತ ಐಕ್ಯತೆಯನ್ನು ಕಟ್ಟಬೇಕು.

ಅವರು ನೇರವಾಗಿ ಘೋಷಿಸಿದ್ದಾರೆ, ತಮ್ಮ ಕಾರ್ಯಕ್ರಮಗಳ ಮೂಲಕ ಹೇಳುತ್ತಿದ್ದಾರೆ. ಸಾವಿರಾರು ವರ್ಷಗಳ ಹಿಂದೆ ಇದ್ದಂತಹ ಸಾಮಾಜಿಕ ಸ್ಥಿತಿಯನ್ನು ನೆಲೆಗೊಳಿಸಿಯೇ ತೀರುತ್ತೇವೆ ಎಂದು ಘೋಷಿಸಿದ್ದಾರೆ. ಸರಸ್ವತಿ ನದಿ ಯಾಕೆ ಬತ್ತಿ ಹೋಯಿತೆಂದು ಹೇಳುತ್ತಾ- ಅಸ್ಪಶ್ಯ ಬೇಡರ ಕುಲ ಸರಸ್ವತಿ ನೀರನ್ನು ಕುಡಿದಿದ್ದರಿಂದ ಆ ಸರಸ್ಪತಿ ನದಿ ಬತ್ತಿ ಹೋಯಿತು ಎನ್ನುತ್ತಾರೆ. ಜಾತಿ ಪದ್ಧತಿಯನ್ನು ಬಲಿಷ್ಠವಾಗಿ ಕಟ್ಟಬೇಕೆಂದಿರುವವರ ನಡುವೆ ದಲಿತ ಚಳವಳಿಯನ್ನು ಕಟ್ಟಬೇಕಾದವರ ವ್ಯಾಪ್ತಿ, ಸಮಕಾಲೀನತೆ, ಮುಂದಿನ ಪೀಳಿಗೆಯ ಪಡೆ ಯಾವ ರೀತಿಯಲ್ಲಿ ಇರಬೇಕು ಎಂಬುದು ನಮ್ಮ ಮುಂದೆ ಇರುವ ದೊಡ್ಡ ಸವಾಲಾಗಿದೆ.

ನವಭಾರತ ಕಾರ್ಯಕ್ರಮ ಘೋಷಿಸಿದ್ದಾರೆ. ನವಭಾರತ ಎಂದರೆ ಏನು? ಯಾಕಾಗಿ? ಎಂಬುದನ್ನು ನಾವು ಸ್ವಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನವನ್ನು ತೆಗೆದು ಅಲ್ಲಿ ಮನುಸ್ಮೃತಿಯನ್ನು ಸ್ಥಾಪಿಸುವುದು ನವಭಾರತದ ಅಜೆಂಡಾವಾಗಿದೆ. ಇದನ್ನು ಹೇಗೆ ಎದುರಿಸುವುದು? ನಮ್ಮ ಮುಂದಿನ ಪೀಳಿಗೆಯನ್ನು ಬೌದ್ಧಿಕರನ್ನಾಗಿಸಬೇಕು. ಮುಂದಿನ ಸವಾಲುಗಳನ್ನು ಹೇಗೆ ಎದುರಿಸಬೇಕೆಂಬ ಬೌದ್ಧಿಕತೆಯನ್ನು ರೂಪಿಸಬೇಕು.

ದಲಿತ ಎಂಬ ದೊಡ್ಡ ಸೂರು ಒಡೆದುಹೋಗಿದೆ. ನಾವು ಈಗ ಜಾತಿ ಮತ್ತು ಉಪಜಾತಿಗಳಲ್ಲಿ ಗುರುತಿಸಿಕೊಳ್ಳುತ್ತಿದ್ದೇವೆ. ನಮ್ಮ ಮುಂದೆ ಇರುವುದು ಪ್ರಬುದ್ಧ ಭಾರತ ವರ್ಸಸ್‌ ಪೇಶ್ವೆ ಭಾರತ ಎಂಬುದರಲ್ಲಿ ಅನುಮಾನವೇ ಇಲ್ಲ. ಪೇಶ್ವೆಗಳ ಕೈಯಲ್ಲಿ ಕತ್ತಿಗಳಿಲ್ಲ. ಆದರೆ ಪತ್ರಿಕೆಗಳಿವೆ, ಬಂಡವಾಳ ಇದೆ, ಜಾತಿ ಬಲ ಇದೆ, ರಾಜಕೀಯ ಬಲ ಇದೆ. ಇವುಗಳನ್ನು ಇಂದಿನ ಸಂಘಟನೆಯ ಸ್ವರೂಪಗಳ ಮೂಲಕ ಎದುರಿಸಲು ಖಂಡಿತ ಸಾಧ್ಯವಿಲ್ಲ. ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಚಳವಳಿಯ ನಾಯಕರಿಂದಲೇ ದಲಿತ ಚಳವಳಿಯನ್ನು ಐಕ್ಯಗೊಳಿಸಲು ಸಾಧ್ಯವಿದೆ. ದಲಿತ ಚಳವಳಿಯನ್ನು ಕಟ್ಟುವ ಛಲ ಕಾರ್ಯಕರ್ತರಿಗಿದೆ. ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.

  • ಕೋಟಗಾನಹಳ್ಳಿ ರಾಮಯ್ಯ

ಇದನ್ನೂ ಓದಿರಿ: ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಸವರ್ಣೀಯ ಯುವಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಿನಕ್ಕೊಂದು ದಲಿತ ಫೈಲನ್ನು ಈ ಭಾರತ ನಮ್ಮವರಿಂದಲೇ ಸೃಷ್ಟಿಸಲಾಗುತ್ತಿದೆ
    ಅವರಿಗೆ ಗೊತ್ತು ಈ ಜನ ಬಹಳ ಸುಲಭವಾಗಿ ಬೇರೆಯವರ ಅಧೀನದಲ್ಲಿ ಬೀಳುವ ಜನ. ಇದೇ ಕೆಲಸವನ್ನು ಮಾನಸಿಕ ರೂಪದ ಬಂಡವಾಳದಿಂದ ಹಿಂದಿನಿಂದಲೂ ಸಾದಿಸಬಂದಿದ್ದಾರೆ.
    ಈ ಭೇದಬಾವವು ಅಳಿಯುವವರೆಗೆ ಈ ದೇಶದ ಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ. ಅದು ಅವರಿಗೆ ಬೇಕಾಗಿಲ್ಲ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...