Homeಮುಖಪುಟದಿ ಕಾಶ್ಮೀರ್‌ ಫೈಲ್ಸ್ ನಿರ್ಮಿಸಿದವರ ಜೊತೆ ಭಯೋತ್ಪಾದಕರ ನಂಟು: ಜಿತನ್ ರಾಮ್ ಮಾಂಝಿ ಆರೋಪ

ದಿ ಕಾಶ್ಮೀರ್‌ ಫೈಲ್ಸ್ ನಿರ್ಮಿಸಿದವರ ಜೊತೆ ಭಯೋತ್ಪಾದಕರ ನಂಟು: ಜಿತನ್ ರಾಮ್ ಮಾಂಝಿ ಆರೋಪ

ಬಿಹಾರದ ಮಾಜಿ ಮುಖ್ಯಮಂತ್ರಿಯಾಗಿರುವ ಜಿತನ್ ರಾಮ್ ಮಾಂಝಿ ಅವರು ಎನ್‌ಡಿಎ ಮೈತ್ರಿಕೂಟದ ಪ್ರಮುಖ ಪಾಲುದಾರರೂ ಹೌದು!

- Advertisement -
- Advertisement -

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಿಸಿದವರು ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಎನ್‌ಡಿಎ ಮೈತ್ರಿಕೂಟದ ಪಾಲುದಾರ, ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ಒತ್ತಾಯಿಸಿದ್ದಾರೆ.

ಎನ್‌ಡಿಎ ಭಾಗವಾದ ಜೆಡಿಯು ಮತ್ತು ಬಿಜೆಪಿ ಜಂಟಿ ಸರ್ಕಾರವು ಬಿಹಾರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಿದ ಒಂದು ದಿನದ ನಂತರ ಈ ಹೇಳಿಕೆ ಹೊರಬಿದ್ದಿದೆ.

1980ರ ದಶಕದ ಉತ್ತರಾರ್ಧದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ ಮೇಲೆ ಮಾಡಿದ ಚಲನಚಿತ್ರವು ಪಿತೂರಿಯಾಗಿರಬಹುದು. ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮರಳದಂತೆ ಅವರಲ್ಲಿ ಭಯದ ವಾತಾವರಣವನ್ನು ಹುಟ್ಟು ಹಾಕಲು ಭಯೋತ್ಪಾದಕ ಸಂಘಟನೆಗಳು ಈ ಸಿನಿಮಾವನ್ನು ಮಾಡಿವೆ ಎಂದು ಸರ್ಕಾರದ ಪ್ರಮುಖ ಪಾಲುದಾರ, ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಆರೋಪಿಸಿದ್ದಾರೆ.

ಭಯೋತ್ಪಾದಕ ಸಂಘಟನೆಗಳು ಮತ್ತು ಚಿತ್ರದ ನಿರ್ಮಾಪಕರ ನಡುವಿನ ಸಂಪರ್ಕದ ಬಗ್ಗೆ ಸುಳಿವು ನೀಡಿದ ಮಾಂಝಿ, “ದಿ ಕಾಶ್ಮೀ‌ರ್‌‌ ಫೈಲ್ ಚಿತ್ರದಲ್ಲಿ ಕಾಶ್ಮೀರಿ ಬ್ರಾಹ್ಮಣರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲಾಗಿದೆ. ಪಂಡಿತರು ಮರಳಿ ಕಾಶ್ಮೀರಕ್ಕೆ ಹೋಗಬಾರದೆಂದು ಪ್ರಯತ್ನಿಸುತ್ತಿರುವ ಭಯೋತ್ಪಾದಕರ ಬಹುದೊಡ್ಡ ಪಿತೂರಿಯೂ  ಇದಾಗಿದೆ” ಎಂದು ಹೇಳಿದರು.

“ದಿ ಕಾಶ್ಮೀರ್ ಫೈಲ್ಸ್” ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿದಂತೆ ಚಿತ್ರ ನಿರ್ಮಾಪಕರು ಮತ್ತು ಭಯೋತ್ಪಾದಕ ಸಂಘಟನೆಗಳ ನಡುವೆ ಸಂಭವನೀಯ ಸಂಪರ್ಕ ಇರಬಹುದು. ಈ ಕುರಿತು ತನಿಖೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಿನಿಮಾವು ಕಾಶ್ಮೀರಿ ಪಂಡಿತರ ವಸ್ತುಸ್ಥಿತಿಯನ್ನು ಪ್ರದರ್ಶಿಸುತ್ತದೆ ಎಂದು ಹೇಳುವ ಮೂಲಕ ಬಿಜೆಪಿ ಈ ಚಿತ್ರವನ್ನು ಶ್ಲಾಘಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೂ ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನರನ್ನು ಜಾಗೃತಗೊಳಿಸಲು ಕಾಶ್ಮೀರದ ಕುರಿತು ಹೆಚ್ಚಿನ ಚಲನಚಿತ್ರಗಳನ್ನು ನಿರ್ಮಿಸಿ ಎಂದು ಅವರು ಕರೆ ನೀಡಿದ್ದಾರೆ.


ಇದನ್ನೂ ಓದಿರಿ: ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...