Homeಮುಖಪುಟಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಪೆಗಾಸಸ್ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂಚಿಸಿದ್ದಾರೆ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನ್ನ ದೇಶದ ನಾಗರಿಕರ ಮೇಲೆ ಬೇಹುಗಾರಿಕೆ ಮಾಡಲು ಇಸ್ರೇಲಿ ಸ್ಪೈವೇರ್‌ ಪೆಗಾಸಸ್ ಅನ್ನು ಬಳಸಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂಕೋರ್ಟ್‌ ಬುಧವಾರದಂದು ಸ್ವತಂತ್ರ ತಜ್ಞ ತಾಂತ್ರಿಕ ಸಮಿತಿಯನ್ನು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ಮೇಲ್ವಿಚಾರಣೆಯಲ್ಲಿ ನೇಮಕ ಮಾಡಿದೆ.

ಬೇಹುಗಾರಿಕೆ ಆರೋಪಗಳು ಗಂಭೀರವಾಗಿದ್ದು, ಸತ್ಯಾಂಶ ಹೊರಬೀಳಬೇಕು ಎಂದು ಸೂಚಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ತನ್ನ ವರದಿಯನ್ನು ತ್ವರಿತವಾಗಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಎಂಟು ವಾರಗಳ ನಂತರ ಮುಂದೂಡಿದೆ.

ಇದನ್ನೂ ಓದಿ: 25 ಕೋಟಿ ರೂ.ಗೆ ಪೆಗಾಸಸ್‌ ಖರೀದಿಸುವಂತೆ ನನಗೆ ಪ್ರಸ್ತಾಪ ಬಂದಿತ್ತು: ಮಮತಾ ಬ್ಯಾನರ್ಜಿ

ನ್ಯಾಯಮೂರ್ತಿ ರವೀಂದ್ರನ್ ಅವರು ತಾಂತ್ರಿಕ ಸಮಿತಿಯ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ನೋಡಿಕೊಳ್ಳಲಿದ್ದು, ಮಾಜಿ IPS ಅಧಿಕಾರಿ (1976 ಬ್ಯಾಚ್) ಅಲೋಕ್ ಜೋಶಿ ಅವರಿಗೆ ಸಹಾಯ ಮಾಡಲಿದ್ದಾರೆ. ಉಪ ಸಮಿತಿಯ ಅಧ್ಯಕ್ಷರಾಗಿ  ಡಾ. ಸಂದೀಪ್ ಒಬೆರಾಯ್ (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಸಮಿತಿ) ಅವರು ಇರಲಿದ್ದಾರೆ.

ತಾಂತ್ರಿಕ ಸಮಿತಿಯಲ್ಲಿ ಮೂವರು ಸದಸ್ಯರಿದ್ದಾರೆ. ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್ ಪ್ರೊಫೆಸರ್‌‌ ಮತ್ತು ಗುಜರಾತ್‌ ಗಾಂಧಿನಗರದ ನ್ಯಾಷನಲ್ ಫೋರೆನ್ಸಿಕ್ ಸೈನ್ಸಸ್ ವಿಶ್ವವಿದ್ಯಾಲಯದ ಡೀನ್‌ ಆಗಿರುವ ಡಾ. ನವೀನ್ ಕುಮಾರ್ ಚೌಧರಿ, ಸ್ಕೂಲ್ ಆಫ್ ಇಂಜಿನಿಯರಿಂಗ್ ಪ್ರೊಫೆಸರ್‌ ಮತ್ತು ಕೇರಳ ಅಮೃತಪುರಿಯ ಅಮೃತ ವಿಶ್ವ ವಿದ್ಯಾಪೀಠಂನ ಡಾ. ಪ್ರಭಾಹರನ್ ಪಿ., ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ, ಮಹಾರಾಷ್ಟ್ರದ ಡಾ. ಅಶ್ವಿನ್ ಅನಿಲ್ ಗುಮಾಸ್ತೆ ಈ ಸಮಿತಿಯಲ್ಲಿ ಇರಲಿದ್ದಾರೆ.

ನ್ಯಾಯಾಲಯವು ಯಾವುದೆ ರಾಜಕೀಯ ವಿಚಾರದಲ್ಲಿ ಅಲೆದಾಡುವುದಿಲ್ಲ ಎಂದು ಹೇಳಿದ್ದು, ಜಗತ್ತಿನಾದ್ಯಂತ ಇತರ ದೇಶಗಳು ಪೆಗಾಸಸ್‌ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ಸತ್ಯವನ್ನು ತಿಳಿದುಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾಗ, ಭಾರತ ಮಾತ್ರ ಮೌನವಾಗಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

ಮುಖ್ಯ ನ್ಯಾಯಮೂರ್ತಿ ರಮಣ ಅವರು ನ್ಯಾಯಾಲಯದಲ್ಲಿ ಓದಿದ ಆದೇಶವು ಸಮಿತಿಯನ್ನು ರಚಿಸಲು ನ್ಯಾಯಾಲಯವನ್ನು ಒತ್ತಾಯಿಸಿದ ಹಲವಾರು ಕಾರಣಗಳನ್ನು ಉಲ್ಲೇಖಿಸಿದೆ. ಬೇಹುಗಾರಿಕೆಯಿಂದಾಗಿ ಸಾಮಾನ್ಯ ನಾಗರಿಕರ ಗೌಪ್ಯತೆ ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕುಗಳ ಮೇಲೆ ವ್ಯಾಪಕ ಪ್ರಭಾವ ಬೀರಿದೆ ಎಂಬ ವರದಿಗಳು ಇವುಗಳಲ್ಲಿ ಸೇರಿವೆ. ಒಟ್ಟಾರೆಯಾಗಿ ನಾಗರಿಕರ ವೈಯಕ್ತಿಕ ಹಕ್ಕುಗಳ ಮೇಲೆ ಪೆಗಾಸಸ್ ಪರಿಣಾಮ ಬೀರಿದೆ ಎಂಬ ಆರೋಪಗಳನ್ನು ನಿರ್ಲಕ್ಷಿಸಿ ಸುಮ್ಮನೆ ನಿಲ್ಲಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಆರೋಪಗಳು ನಿಜವೋ ಅಲ್ಲವೋ ಎಂಬುದರ ಕುರಿತು ನ್ಯಾಯಾಲಯದಲ್ಲಿ ‘ಸ್ಪಷ್ಟ ನಿಲುವು’ ತೆಗೆದುಕೊಳ್ಳಲು ಸರ್ಕಾರವು ಹೇಗೆ ನಿರಾಕರಿಸಿತು ಎಂಬುದರ ಕುರಿತು ತನ್ನ ಆದೇಶದಲ್ಲಿ ನ್ಯಾಯಾಲಯವು ಹೈಲೈಟ್ ಮಾಡಿದೆ.

ಆರೋಪಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಮಾಡಿದ ಪುನರಾವರ್ತಿತ ಸಲಹೆಗಳು ಕೂಡಾ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಸರ್ಕಾರ ಸಲ್ಲಿಸಿರುವ ಎರಡು ಪುಟಗಳ ಅಫಿಡವಿಟ್ ಅಲ್ಲಿ ‘ಯಾವುದೇ ಹೊಳಹು ಇಲ್ಲ’ ಮತ್ತು ಹೆಚ್ಚೆಂದರೆ ‘ಅಸ್ಪಷ್ಟ ನಿರಾಕರಣೆ’ ಇದೆ. ಎರಡು ವರ್ಷಗಳ ಹಿಂದೆ ಪೆಗಾಸಸ್ ಬೇಹುಗಾರಿಕೆಯ ಮೊದಲ ಆರೋಪಗಳು ಕಾಣಿಸಿಕೊಂಡಾಗ ನ್ಯಾಯಾಲಯವು ಇದನ್ನು ಹೇಳಿದೆ.

ಇದನ್ನೂ ಓದಿ: ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

“ಭಾರತ ಸರ್ಕಾರವು ಆರೋಪಗಳನ್ನು ನಿರ್ದಿಷ್ಟವಾಗಿ ಯಾವುದೇ ನಿರಾಕರಣೆ ಮಾಡಿಲ್ಲ…ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದರೆ, ನ್ಯಾಯಾಲಯದ ಮೇಲೆ ಕಡಿಮೆ ಹೊರೆ ಇರುತ್ತಿತ್ತು” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ಪೆಗಾಸಸ್‌ ವಿಚಾರವನ್ನು ಬಹಿರಂಗಪಡಿಸುವುದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ ಎಂಬ ಸರ್ಕಾರದ ಆತಂಕವನ್ನು ನ್ಯಾಯಾಲಯವು ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಮಣ ಅವರು, ನಾಗರಿಕರ ಸಾಂವಿಧಾನಿಕ ಹಕ್ಕುಗಳು ಅಪಾಯದಲ್ಲಿರುವಾಗ ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯ ವಿಚಾರವನ್ನು ಉಲ್ಲೇಖಿಸಿ ಬಚಾವಾಗಲು ಸಾಧ್ಯವಿಲ್ಲ ಎಂದು ಘೋಷಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿಕುಮಾರ್, ಎಡಿಟರ್ಸ್ ಗಿಲ್ಡ್ ಮತ್ತು ಬೇಹುಗಾರಿಕೆಗೆ ಬಲಿಯಾದ ವ್ಯಕ್ತಿಗಳು ಸೇರಿದಂತೆ ಹಲವು ಕಡೆಗಳಿಂದ ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಈ ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...