Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...