Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...