Homeಕರ್ನಾಟಕಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

- Advertisement -
- Advertisement -

ಬಿಜೆಪಿಯ ಪ್ರಪೊಗಾಂಡ (ಯೋಜಿತ ಪ್ರಚಾರ) ಸಿನಿಮಾವಾಗಿರುವ ‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಮತ್ತೊಂದೆಡೆ ಬಡವರ ಪಾಲಿನ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸಹಾಯಧನವನ್ನು ಮಿತಿಗೊಳಿಸಲು ಹೊರಟಿದೆ. ಅರ್ಧ ಸತ್ಯವನ್ನು ಹೇಳುತ್ತಿರುವ ಸಿನಿಮಾಕ್ಕೆ ಇರುವ ಬೆಲೆ ಬಡವರ ಪಾಲಿನ ಬೆಳಕಿಗೆ ಇಲ್ಲವೇ ಎಂಬ ಪ್ರಶ್ನೆ ಎದ್ದಿದೆ.

‘ಕಾಶ್ಮೀರ್‌ ಫೈಲ್ಸ್‌’ಗೆ ಆರು ತಿಂಗಳ ತೆರಿಗೆ ವಿನಾಯಿತಿ ಹಾಗೂ ಭಾಗ್ಯಜ್ಯೋತಿ ಸಹಾಯಧನಕ್ಕೆ ಮಿತಿಗೊಳಿಸಲು ಹೊರಟಿರುವ ಸರ್ಕಾರದ ನಡೆಯ ಕುರಿತು ಪತ್ರಕರ್ತ ಮಹಾಂತೇಶ್ ಭದ್ರಾವತಿಯವರ  ‘ದಿ ಫೈಲ್‌’ ತನಿಖಾ ಜಾಲತಾಣ ಬಯಲಿಗೆಳೆದಿದೆ. ಎರಡು ಪ್ರತ್ಯೇಕ ವರದಿಗಳನ್ನು ‘ದಿ ಫೈಲ್‌’ ಮಾಡಿದ್ದು, ಎರಡು ಸುದ್ದಿಗಳನ್ನು ಒಟ್ಟಿಗೆ ಇಟ್ಟು ನೋಡಿದಾಗ ಸರ್ಕಾರ ಯಾವುದಕ್ಕೆ ಆದ್ಯತೆ ನೀಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ.

ಬೆಳಗಾವಿ (ದಕ್ಷಿಣ) ಶಾಸಕ ಅಭಯ್‌ ಪಾಟೀಲ್ ಮತ್ತಿತರ ಶಾಸಕರ ಕೋರಿಗೆ ಮೇರಿಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ ಮೂರು ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ ಆರು ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ.

2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ ಯಾವುದೇ ತರಹದ ಜಿಎಸ್‌ಟಿಯನ್ನು ಸಂಗ್ರಹಿಸಬಾರದು ಮತ್ತು ಜಿಎಸ್‌ಟಿ ತಗ್ಗಿಸಿದ ದರದಲ್ಲಿಯೇ ಟಿಕೆಟ್‌ಗಳನ್ನು ಮಾರಟ ಮಾಡಬೇಕು ಎಂದು ಸೂಚಿಸಿದೆ.  ದಿ ಕಾಶ್ಮೀರ್‌ ಫೈಲ್ಸ್‌ ಚಲನಚಿತ್ರಕ್ಕೆ ಶೇ. 10ರಷ್ಟು ತೆರಿಗೆ ವಿನಾಯಿತಿ ನೀಡಬೇಕು ಎಂದು ಶಾಸಕ ಅಭಯ್‌ ಪಾಟೀಲ್ ಅವರು 2022ರ ಮಾರ್ಚ್ 10ರಂದೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನಾಧರಿಸಿ ಆದೇಶ ಹೊರಡಿಸಲಾಗಿದೆ.

ಬಡವಾಗುತ್ತಿದೆ ಬಡವರ ಜ್ಯೋತಿ

ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಇಂಧನ ಇಲಾಖೆಯಲ್ಲಿ ಮುಂದಾಗಿದೆ ಎಂದು ಮತ್ತೊಂದು ವರದಿ ತಿಳಿಸಿದೆ.

ಇಂಧನ ಇಲಾಖೆಯು ವಿದ್ಯುತ್‌ ಸಹಾಯಧನವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿಯೆಂದು ವರ್ಗೀಕರಿಸದೇ ಕೇವಲ ಲೆಕ್ಕ ಶೀರ್ಷಿಕೆ 106ರ ಅಡಿ ಒದಗಿಸಬೇಕು ಮತ್ತು ಈ ಎರಡೂ ಉಪ ಯೋಜನೆಗಳ ಗ್ರಾಹಕರಿಗೆ ನೀಡುತ್ತಿರುವ ಸಹಾಯಧನ ಮೊತ್ತವನ್ನು ಮಿತಿಗೊಳಿಸಲು ಪ್ರಸ್ತಾಪವನ್ನು ಮಂಡಿಸಿದೆ.

PC: The File

ಪರಿಶಿಷ್ಟರ ಅನುದಾನ ಗೋತ!

ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 14.84 ರಷ್ಟು ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಿದ್ದರೂ ಸರ್ಕಾರ ವರ್ಷವರ್ಷವೂ ಅನುದಾನವನ್ನು ಕಡಿತ ಗೊಳಿಸುತ್ತಲೇ ಇದೆ.

“ಕಾಯ್ದೆಯ ಅನುಗುಣವಾಗಿ ಬಜೆಟ್‌ ವೆಚ್ಚದಲ್ಲಿ ಉಪಯೋಜನೆ ಅನುದಾನದ ಪ್ರಮಾಣ ಶೇ. 14.84 ಇರಬೇಕು. 2017- 18ರಲ್ಲಿ 1,86,561 ಕೋಟಿ ರೂ.ಗಳ ಬಜೆಟ್ ಮಂಡಿಸಲಾಯಿತು. ಪರಿಶಿಷ್ಟರ ಅನುದಾನ 27,703.54 ಕೋಟಿ ರೂ. ಇತ್ತು. ಅಂದರೆ ಶೇ. 14. 84ರಷ್ಟು ಹಣವನ್ನು ಮೀಸಲಿಡಲಾಗಿತ್ತು. 2018-19ರಲ್ಲಿ ಬಜೆಟ್ ಗಾತ್ರ 2,18,488 ಕೋಟಿ ರೂ.ಗಳು. ಪರಿಶಿಷ್ಟರ ಉಪಯೋಜನೆಗೆ ನೀಡಿದ್ದು 29,209.47 ಕೋಟಿ ರೂಗಳು. ಉಪಯೋಜನೆಯ ಒಟ್ಟು ಪ್ರಮಾಣ ಶೇ. 12.23 ಮಾತ್ರ. 2019-20ರ ಬಜೆಟ್‌ ಗಾತ್ರ 2,34,152 ಕೋಟಿ ರೂ.ಗಳಾದರೆ, ಪರಿಶಿಷ್ಟರಿಗೆ ನೀಡಿದ್ದು 30,464.99 ಕೋಟಿ ರೂ; ಉಪಯೋಜನೆಯ ಗಾತ್ರ ಶೇ. 13 ಆಗಿತ್ತು. 2020-21ರಲ್ಲಿ ಬಜೆಟ್ ಗಾತ್ರ 2,37,892 ಕೋಟಿ ರೂ. ಉಪಯೋಜನೆಗೆ ನೀಡಿದ್ದು 27,699.52 ಕೋಟಿ ರೂ. ಅಂದರೆ ಶೇ. 11.64 ಮಾತ್ರ. 2021-2022ರ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ನೀಡಿದ್ದು 26,005.01 ಕೋಟಿ ರೂ. ಅಂದರೆ ಶೇ. 10.64 ಮಾತ್ರ. 2022-23ರ ಬಜೆಟ್ ಗಾತ್ರ 2,65,720 ಕೋಟಿ ರೂ. ಪರಿಶಿಷ್ಟರಿಗೆ ಮೀಸಲಾಗಿರುವುದು 28,238.33 ಕೋಟಿ ರೂ. ಅಂದರೆ ಶೇ. 10.61 ಮಾತ್ರ”

2017-18 ರಿಂದ 2022-23ರವರೆಗೆ ಬಜೆಟ್ಟಿನ ಒಟ್ಟು ಗಾತ್ರದಲ್ಲಿ ಶೇ. 42.43ರಷ್ಟು ಏರಿಕೆಯಾಗಿದ್ದರೆ, ಉಪಯೋಜನೆಗಳ ಅನುದಾನ ಇದೇ ಅವಧಿಯಲ್ಲಿ ಶೇ. 1.93ರಷ್ಟು ಏರಿಕೆಯಾಗಿದೆ. ರಾಜ್ಯದ ಒಟ್ಟು ಬಜೆಟ್ಟಿನ ಗಾತ್ರದಲ್ಲಿ ಉಪಯೋಜನೆಗಳ ಅನುದಾನ 2017-18ರಲ್ಲಿ ಶೇ.14.86 ರಷ್ಟಿದ್ದದ್ದು, 2022-23ರಲ್ಲಿ ಶೇ.10.61ಕ್ಕಿಳಿದಿದೆ. ಒಟ್ಟು ಬಜೆಟ್ಟಿನ ಮೊತ್ತ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಆದರೆ ಉಪಯೋಜನೆಗಳ ಅನುದಾನ ಅದೇ ಪ್ರಮಾಣದಲ್ಲಿ ಏರಿಕೆಯಾಗುತ್ತಿಲ್ಲ.

ವಾಸ್ತವವಾಗಿ 2020-21ರ ನಂತರ ಅನುದಾನದ ಒಟ್ಟು ಮೊತ್ತದಲ್ಲಿಯೇ ಕಡಿಮೆಯಾಗುತ್ತಿದೆ. ಉದಾ: 2019-20ರಲ್ಲಿ ಅನುದಾನ 30,444.99 ಕೋಟಿ ರೂ. ಇದ್ದದ್ದು, 2020-21ರಲ್ಲಿ 27,699.52 ಕೋಟಿ ರೂ. ಆಗಿದೆ. 2021-22ರಲ್ಲಿ ರೂ.26,001 ಕೋಟಿ ರೂ.ಗೆ ಇಳಿದಿದೆ. ಈ ಬಜೆಟ್‌ನಲ್ಲಿ (2022-23) ಕೊಂಚ ಏರಿಕೆಯಾಗಿದ್ದು, 28,234.33 ಕೋಟಿ ರೂ. ನೀಡಲಾಗಿದೆ. (ವಿವರಗಳಿಗೆ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...